300 ಕೋಟಿ ದಾಟಿದ ಶಾರುಖ್‌ ಖಾನ್‌ “ರಯೀಸ್‌’ ಜಾಗತಿಕ ಗಳಿಕೆ


Team Udayavani, Feb 8, 2017, 7:53 PM IST

Raees-700.jpg

ಹೊಸದಿಲ್ಲಿ : ಬಾಲಿವುಡ್‌ ಬಾದ್‌ಶಾ ಶಾರುಖ್‌ ಖಾನ್‌ ಅವರ ಈಚೆಗೆ ತೆರೆಕಂಡ ಹೊಸ ಚಿತ್ರ “ರಯೀಸ್‌’ ಜಾಗತಿಕ ಬಾಕ್ಸ್‌ ಆಫೀಸ್‌ನಲ್ಲಿ  ವಿಕ್ರಮ ಸಾಧಿಸಿದ್ದು 300 ಕೋಟಿ ರೂ.ಗಳನ್ನು ದಾಟಿರುವ ಸಾಧನೆ ಮಾಡಿದೆ. 

ಶಾರುಖ್‌ ಖಾನ್‌ ಅಭಿಮಾನಿಗಳನ್ನು ಬಹುವಾಗಿ ರಂಜಿಸಿರುವ ರಯೀಸ್‌ ಚಿತ್ರ, ಶಾರುಖ್‌ಗೆ ಹೊಸ ಇಮೇಜ್‌ ನೀಡಿದೆ. ಮೇಲಾಗಿ ಈ ಚಿತ್ರದಲ್ಲಿನ ಶಾರುಖ್‌ ನಟನೆಯನ್ನು ಬಾಲಿವುಡ್‌ ಬಿಗ್‌ ಬಿ ಅಮಿತಾಭ್‌ ಬಚ್ಚನ್‌ ಮೆಚ್ಚಿಕೊಂಡು ಖಾನ್‌ ಅವರನ್ನು ಬೆನ್ನು ತಟ್ಟಿ ಪ್ರಶಂಸಿಸಿದ್ದಾರೆ. 

“ಪರ್ಜಾನಿಯಾ’ ಚಿತ್ರದ ಮೂಲಕ ಜನಪ್ರಿಯತೆಯ ಶಿಖರವೇರಿದ್ದ ಚಿತ್ರ ನಿರ್ದೇಶಕ ರಾಹುಲ್‌ ಧೋಲಕಿಯಾ ಅವರ “ರಯೀಸ್‌’ ಕ್ಲಾಸ್‌ ಹಾಗೂ ಮಾಸ್‌ ಅನ್ನು ಏಕಪ್ರಕಾರವಾಗಿ ಹಿಡಿದಿಡುವಲ್ಲಿ ಯಶಸ್ವಿಯಾಗಿದ್ದು ಚಿತ್ರದ ಜಾಗತಿಕ ಗಳಿಕೆ ಕೂಡ ಎಲ್ಲರ ಹುಬ್ಬೇರಿಸಿದೆ. 

ಸಿನೆಮಾ ಉದ್ಯಮ ರಂಗದ ತಜ್ಞ ಎನಿಸಿರುವ ರಮೇಶ್‌ ಬಾಲಾ ಅವರು ಮಾಡಿರುವ ಟ್ವೀಟ್‌ ಅನ್ನು  ದ ಇಂಡಿಯನ್‌ ಎಕ್ಸ್‌ಪ್ರೆಸ್‌ ಉಲ್ಲೇಖೀಸಿ 2017ರ ಫೆ.6ರಂದು ಚಿತ್ರದ ಜಾಗತಿಕ ಗಳಿಕೆ 304 ಕೋಟಿ ಆಗಿದ್ದು ದೇಶೀಯ ಗಳಿಕೆ 150 ಕೋಟಿ ದಾಟಿರುವುದಾಗಿ ವರದಿ ಮಾಡಿದೆ. 

ರಯೀಸ್‌ನಲ್ಲಿ ಶಾರುಖ್‌ ಖಾನ್‌ ಅವರದ್ದು  ಗ್ಯಾಂಗ್‌ಸ್ಟರ್‌ ಅವತಾರ. ಈ ಹೊಸ ಗೆಟಪ್‌ನಲ್ಲಿ ವಿಭಿನ್ನವಾಗಿ ಕಾಣಿಸಿಕೊಂಡಿರುವ ಶಾರುಖ್‌ ಅವರ ಅಭಿನಯವನ್ನು ಅಭಿಮಾನಿಗಳು ಸಹಜವಾಗಿಯೇ ಅಪಾರವಾಗಿ ಮೆಚ್ಚಿಕೊಂಡಿದ್ದಾರೆ. ಚಿತ್ರದಲ್ಲಿ ನವಾಜುದ್ದೀನ್‌ ಸಿದ್ದಿಕಿ ಮುಖ್ಯ ಪಾತ್ರದಲ್ಲಿದ್ದು ಪಾಕ್‌ ನಟಿ ಮಾಹಿರಾ ಖಾನ್‌ ಈ ಚಿತ್ರದ ಮೂಲಕ ಬೆಳ್ಳಿ ತೆರೆಗೆ ಪಾದಾರ್ಪಣೆ ಮಾಡಿದ್ದಾರೆ. 

2017ರ ಜನವರಿ 25ರಂದು ಶಾರುಖ್‌ ಖಾನ್‌ ಅವರ ರಯೀಸ್‌ ಹಾಗೂ ಹೃತಿಕ್‌ ರೋಶನ್‌ ಅವರ ಕಾಬಿಲ್‌ – ಬಿಡುಗಡೆಗೊಂಡಿದ್ದು ಈ ಎರಡೂ ಚಿತ್ರಗಳು ಬಾಕ್ಸ್‌ ಆಫೀಸ್‌ನಲ್ಲಿ ಉತ್ತಮ ಗಳಿಕೆಯನ್ನು ಮಾಡಿವೆ. 

ಟಾಪ್ ನ್ಯೂಸ್

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್‌ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ

Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್‌ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.