ಎಲ್ಲಾ ಕಾಲದಲ್ಲೂ ಕೆಟ್ಟವರು ಗೆಲ್ಲಲು ಸಾಧ್ಯವಿಲ್ಲ: ಕಮಲ್ ಹಾಸನ್
Team Udayavani, Feb 14, 2017, 4:25 PM IST
ಚೆನ್ನೈ: ಇದು ಈ ನೆಲದ ಕಾನೂನು. ಎಲ್ಲಾ ಕಾಲದಲ್ಲೂ ಕೆಟ್ಟವರು ಗೆಲ್ಲಲು ಸಾಧ್ಯವಿಲ್ಲ ಎಂದು ಖ್ಯಾತ ನಟ, ನಿರ್ದೇಶಕ ಕಮಲ್ ಹಾಸನ್ ಶಶಿಕಲಾ ನಟರಾಜನ್ ದೋಷಿ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೇ ಟ್ವೀಟ್ ಮಾಡಿ ವ್ಯಕ್ತಪಡಿಸಿರುವ ಅಭಿಪ್ರಾಯ ಇದು.
ಇದೊಂದು ಹಳೇ ಹಾಡು, ಆದರೂ ಅದು ಪ್ರಸ್ತುತವಾಗಿದೆ. ಕೆಟ್ಟವರು ಕೆಲವು ಬಾರಿ ಗೆಲ್ಲಬಹುದು,ಆದರೆ ಕಾಲ ಬದಲಾಗುತ್ತಲೇ ಇರುತ್ತದೆ. ಕೊನೆಗೂ ನ್ಯಾಯಕ್ಕೆ ಜಯ.ದೇಶದ ಕಾನೂನು ಮೇಲುಗೈ ಸಾಧಿಸಿದೆ ಎಂದು ಟ್ವೀಟ್ ಮಾಡಿದ್ದಾರೆ.
ತಮಿಳುನಾಡಿನ ರಾಜಕಾರಣದಲ್ಲಿ ಅಧಿಕಾರದ ಗದ್ದುಗೆ ಏರಲು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿಕೆ ಶಶಿಕಲಾ ಹಾಗೂ ಹಂಗಾಮಿ ರಾಜ್ಯಪಾಲ ಪನ್ನೀರ್ ಸೆಲ್ವಂ ನಡುವೆ ನಡೆದ ಜಂಗೀಕುಸ್ತಿಯಿಂದ ರೋಸಿ ಹೋಗಿದ್ದ ನಟ ಕಮಲ್ ಹಾಸನ್ ಆರಂಭದಲ್ಲೇ ಟ್ವೀಟ್ ಮಾಡಿದ್ದರು.
ತಮಿಳುನಾಡಿನ ಜನರಿಗೆ ಇದು ಸಕಾಲ, ತಮಗೆ ಎಂತಹ ನಾಯಕ ಬೇಕು ಎಂಬುದನ್ನು ಈಗ ನಿರ್ಧರಿಸಬೇಕಾಗಿದೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಪನ್ನೀರ್ ಸೆಲ್ವಂಗೆ ಸಾಥ್ ನೀಡಿದ್ದರು. ಜಲ್ಲಿಕಟ್ಟು ವಿಚಾರದಲ್ಲಿಯೂ ಕಮಲ್ ಹಾಸನ್ ಅವರು ಟ್ವೀಟ್ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ʼಖಲ್ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್ನಲ್ಲಿ ಬಿಟೌನ್ ಸ್ಟಾರ್ಸ್ ಜೊತೆ ಯಶ್, ಅಲ್ಲು?
Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್ ಆದ ಮುನ್ನಿ
Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್
Salman Khan: ನಟ ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ
ಪೊಲೀಸ್ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್ ಸ್ಟರ್ ಆದದ್ದೇಗೆ?
MUST WATCH
ಹೊಸ ಸೇರ್ಪಡೆ
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್
Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ