ನಟ ಧನುಷ್ಗೆ ಬಿಗ್ ರಿಲೀಫ್ :’ನಮ್ಮ ಮಗ’ ಕೇಸ್ ಕೋರ್ಟ್ನಿಂದ ವಜಾ
Team Udayavani, Apr 21, 2017, 11:29 AM IST
ಮಧುರೈ: ತಮಿಳಿನ ಪ್ರಖ್ಯಾತ ನಟ,ರಜನಿಕಾಂತ್ ಅವರ ಅಳಿಯ ಧನುಷ್ ಗೆ ದೊಡ್ಡ ರಿಲೀಫ್ ದೊರಕಿದ್ದು, ವೃದ್ಧ ದಂಪತಿಗಳು ನಮ್ಮ ಮಗ ಎಂದು ಪರಿಹಾರ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಮಧುರೈ ನ್ಯಾಯಾಲಯ ಶುಕ್ರವಾರ ವಜಾಗೊಳಿಸಿದೆ.
ಮೇಲೂರು ತಾಲೂಕಿನ ಮಾಲಂಪಟ್ಟಿಯ ಕದಿರೇಶನ್(60) ಮತ್ತು ಮೀನಾಕ್ಷಿ (55) ದಂಪತಿ ಧನುಷ್ ನಮ್ಮ ಮೂರು ಮಕ್ಕಳಲ್ಲಿ ಒಬ್ಬ ಎಂದು ಹೇಳಿಕೊಂಡಿದ್ದು ನಮಗೆ ಜೀವನ ನಿರ್ವಹಣೆಗೆ ಏನನ್ನೂ ನೀಡುತ್ತಿಲ್ಲ ಎಂದು ಆರೋಪಿಸಿ ದಾಖಲೆ ಸಮೇತ ಕೋರ್ಟ್ ಮೊರೆ ಹೋಗಿದ್ದರು.
ಸರ್ಕಾರಿ ಆಸ್ಪತ್ರೆಯಲ್ಲಿ ಧನುಷ್ ಜನಿಸಿದ್ದು, ಆತನ ನಿಜ ಹೆಸರು ಕಲೈಸೆಲ್ವನ್, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಮೇಲೂರಿನಲ್ಲಿ ಪಡೆದ ಆತ ಪಿಯುಸಿ ಶಿಕ್ಷಣ ಅರ್ಧಕ್ಕೆ ಮೊಟಕು ಗೊಳಿಸಿ ಮನೆ ಬಿಟ್ಟು ತೆರಳಿದ ಎಂದು ಫೋಟೋಗಳ ಸಮೇತ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಆತ ಚಿತ್ರರಂಗಕ್ಕೆ ಬಂದ ಬಳಿಕ ನಮಗೆ ಆತನನ್ನು ಭೇಟಿಯಾಗಲು ಸಾಧ್ಯವಾಗಲಿಲ್ಲ .ತಮಿಳುನಾಡು ಸರ್ಕಾರಿ ಬಸ್ನ ನಿವೃತ್ತ ಕಂಡಕ್ಟರ್ ಆಗಿರುವ ನನ್ನ ಮತ್ತು ಪತ್ನಿಯ ಆರೋಗ್ಯ ಹದಗೆಟ್ಟಿದ್ದು, ಧನುಷ್ ಮಾಸಿಕ 65,000 ರೂಪಾಯಿ ಹಣ ನೀಡುವಂತೆ ಅರ್ಜಿಯಲ್ಲಿ ಕೋರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ