ನಟ ಧನುಷ್ಗೆ ಬಿಗ್ ರಿಲೀಫ್ :’ನಮ್ಮ ಮಗ’ ಕೇಸ್ ಕೋರ್ಟ್ನಿಂದ ವಜಾ
Team Udayavani, Apr 21, 2017, 11:29 AM IST
ಮಧುರೈ: ತಮಿಳಿನ ಪ್ರಖ್ಯಾತ ನಟ,ರಜನಿಕಾಂತ್ ಅವರ ಅಳಿಯ ಧನುಷ್ ಗೆ ದೊಡ್ಡ ರಿಲೀಫ್ ದೊರಕಿದ್ದು, ವೃದ್ಧ ದಂಪತಿಗಳು ನಮ್ಮ ಮಗ ಎಂದು ಪರಿಹಾರ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಮಧುರೈ ನ್ಯಾಯಾಲಯ ಶುಕ್ರವಾರ ವಜಾಗೊಳಿಸಿದೆ.
ಮೇಲೂರು ತಾಲೂಕಿನ ಮಾಲಂಪಟ್ಟಿಯ ಕದಿರೇಶನ್(60) ಮತ್ತು ಮೀನಾಕ್ಷಿ (55) ದಂಪತಿ ಧನುಷ್ ನಮ್ಮ ಮೂರು ಮಕ್ಕಳಲ್ಲಿ ಒಬ್ಬ ಎಂದು ಹೇಳಿಕೊಂಡಿದ್ದು ನಮಗೆ ಜೀವನ ನಿರ್ವಹಣೆಗೆ ಏನನ್ನೂ ನೀಡುತ್ತಿಲ್ಲ ಎಂದು ಆರೋಪಿಸಿ ದಾಖಲೆ ಸಮೇತ ಕೋರ್ಟ್ ಮೊರೆ ಹೋಗಿದ್ದರು.
ಸರ್ಕಾರಿ ಆಸ್ಪತ್ರೆಯಲ್ಲಿ ಧನುಷ್ ಜನಿಸಿದ್ದು, ಆತನ ನಿಜ ಹೆಸರು ಕಲೈಸೆಲ್ವನ್, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಮೇಲೂರಿನಲ್ಲಿ ಪಡೆದ ಆತ ಪಿಯುಸಿ ಶಿಕ್ಷಣ ಅರ್ಧಕ್ಕೆ ಮೊಟಕು ಗೊಳಿಸಿ ಮನೆ ಬಿಟ್ಟು ತೆರಳಿದ ಎಂದು ಫೋಟೋಗಳ ಸಮೇತ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಆತ ಚಿತ್ರರಂಗಕ್ಕೆ ಬಂದ ಬಳಿಕ ನಮಗೆ ಆತನನ್ನು ಭೇಟಿಯಾಗಲು ಸಾಧ್ಯವಾಗಲಿಲ್ಲ .ತಮಿಳುನಾಡು ಸರ್ಕಾರಿ ಬಸ್ನ ನಿವೃತ್ತ ಕಂಡಕ್ಟರ್ ಆಗಿರುವ ನನ್ನ ಮತ್ತು ಪತ್ನಿಯ ಆರೋಗ್ಯ ಹದಗೆಟ್ಟಿದ್ದು, ಧನುಷ್ ಮಾಸಿಕ 65,000 ರೂಪಾಯಿ ಹಣ ನೀಡುವಂತೆ ಅರ್ಜಿಯಲ್ಲಿ ಕೋರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ʼಭಜರಂಗಿ ಭಾಯಿಜಾನ್ʼ, ʼರೌಡಿ ರಾಥೋರ್ʼ ಸೀಕ್ವೆಲ್ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ನಿರ್ಮಾಪಕ
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Box office: ಈ ವಾರ ಬಾಲಿವುಡ್ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?
ʼಖಲ್ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್ನಲ್ಲಿ ಬಿಟೌನ್ ಸ್ಟಾರ್ಸ್ ಜೊತೆ ಯಶ್, ಅಲ್ಲು?
Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್ ಆದ ಮುನ್ನಿ
MUST WATCH
ಹೊಸ ಸೇರ್ಪಡೆ
Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ
ʼಭಜರಂಗಿ ಭಾಯಿಜಾನ್ʼ, ʼರೌಡಿ ರಾಥೋರ್ʼ ಸೀಕ್ವೆಲ್ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ನಿರ್ಮಾಪಕ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ