2000 ರೂ. ನೋಟು ರದ್ದಾಗುತ್ತಾ, ವಿತ್ತ ಸಚಿವ ಜೇಟ್ಲಿ ಉತ್ತರ ಏನು?
Team Udayavani, Jul 26, 2017, 4:01 PM IST
ನವದೆಹಲಿ:ಭಾರತೀಯ ರಿಸರ್ವ್ ಬ್ಯಾಂಕ್ 2000 ಸಾವಿರ ರೂಪಾಯಿ ಮುಖಬೆಲೆಯ ನೋಟುಗಳ ಮುದ್ರಣವನ್ನು ನಿಲ್ಲಿಸಿದ್ದು, 200ರೂಪಾಯಿ ಮುಖಬೆಲೆಯ ಹೊಸ ನೋಟುಗಳ ಮುದ್ರಣ ಆರಂಭಿಸಿರುವುದಾಗಿ ಲೈವ್ ಮಿಂಟ್ ವರದಿ ಮಾಡಿದೆ.
ಸುಮಾರು 5 ತಿಂಗಳ ಹಿಂದೆಯೇ ಆರ್ ಬಿಐ 2000 ಸಾವಿರ ರೂ. ನೋಟುಗಳ ಮುದ್ರಣವನ್ನು ಸ್ಥಗಿತಗೊಳಿಸಿತ್ತು. ಅಲ್ಲದೇ ಮೈಸೂರಿನಲ್ಲಿರುವ ಆರ್ ಬಿಐ ಪ್ರಿಂಟಿಂಗ್ ಪ್ರೆಸ್ ನಲ್ಲಿ 200 ರೂ. ಮುಖಬೆಲೆಯ ನೋಟುಗಳ ಮುದ್ರಣ ಆರಂಭವಾಗಿರುವುದಾಗಿ ವರದಿ ತಿಳಿಸಿದೆ.
ಆದರೆ ನೋಟು ಮುದ್ರಣ ಸ್ಥಗಿತಗೊಳಿಸಿರುವ ಬಗ್ಗೆ ಆರ್ ಬಿಐ ಅಧಿಕೃತವಾಗಿ ಯಾವುದೇ ಹೇಳಿಕೆ ಕೊಟ್ಟಿಲ್ಲ. ಕೇಂದ್ರ ಸರ್ಕಾರ ಹಳೆಯ 500, 1000 ಮುಖಬೆಲೆ ನೋಟುಗಳನ್ನು ರದ್ದುಪಡಿಸಿ ಆದೇಶ ಹೊರಡಿಸಿದ ನಂತರ ಆರ್ಬಿಐ ಹೊಸ 500, 2000 ಮುಖಬೆಲೆ ನೋಟುಗಳನ್ನು ಚಲಾವಣೆಗೆ ತಂದಿತ್ತು.
ಜೇಟ್ಲಿ ಮೌನ!
ಹೊಸದಾಗಿ ಚಲಾವಣೆಗೆ ತಂದಿರುವ 2000 ರೂಪಾಯಿ ನೋಟುಗಳನ್ನು ಸರ್ಕಾರ ರದ್ದುಗೊಳಿಸಿ, 1000 ರೂ. ನಾಣ್ಯವನ್ನು ಜಾರಿಗೆ ತರಲು ನಿರ್ಧರಿಸಿರುವುದು ನಿಜವೇ ಎಂದು ವಿರೋಧ ಪಕ್ಷ ಬುಧವಾರ ರಾಜ್ಯಸಭೆಯಲ್ಲಿ ವಿತ್ತ ಸಚಿವ ಅರುಣ್ ಜೇಟ್ಲಿ ಅವರನ್ನು ಪ್ರಶ್ನಿಸಿದೆ.
ಆದರೆ ಈ ವಿಚಾರದ ಕುರಿತು ಸ್ಪಷ್ಟನೆ ನೀಡಬೇಕೆಂದು ವಿರೋಧ ಪಕ್ಷದ ಸದಸ್ಯರು ಆಗ್ರಹಿಸಿದರೂ ಕೂಡಾ ಜೇಟ್ಲಿ ಯಾವುದೇ ಉತ್ತರವನ್ನು ನೀಡಿಲ್ಲ.
ಶೂನ್ಯ ವೇಳೆಯಲ್ಲಿ ಸಮಾಜವಾದಿ ಪಕ್ಷದ ಸಂಸದ ನರೇಶ್ ಅಗರ್ ವಾಲ್ ಅವರು 2000 ರೂ. ನೋಟು ರದ್ದಾಗುವ ಊಹಾಪೋಹದ ವಿಚಾರದ ಬಗ್ಗೆ ಪ್ರಸ್ತಾಪಿಸಿದ್ದರು. ಕೇಂದ್ರ ಸರ್ಕಾರ 2000 ರೂ. ನೋಟು ರದ್ದುಪಡಿಸುವ ನಿರ್ಧಾರ ತೆಗೆದುಕೊಂಡಿದೆಯಾ. 2000 ರೂ. ನೋಟುಗಳ ಮುದ್ರಣ ಮಾಡಬಾರದು ಎಂದು ಆರ್ ಬಿಐ ಆದೇಶ ನೀಡಿದೆಯಂತೆ. ಈ ಬಗ್ಗೆ ಸಂಸತ್ ಕಲಾಪದಲ್ಲಿ ಯಾವುದಾದರೂ ನಿರ್ಧಾರವನ್ನು ಕೈಗೊಳ್ಳಲಾಗಿದೆಯೇ ಎಂದು ಪ್ರಶ್ನಿಸಿದ್ದರು.
ಈಗಾಗಲೇ ಒಂದು ಬಾರಿ ನೋಟು ನಿಷೇಧಿಸಿಯಾಗಿದೆ, ಈಗ 2ನೇ ನಿಷೇಧದ ಬಗ್ಗೆ ತಯಾರಿ ನಡೆಸಲಾಗುತ್ತಿದೆ. ಈ ಬಗ್ಗೆ ವಿತ್ತ ಸಚಿವರು ಸ್ಪಷ್ಟನೆ ನೀಡಬೇಕು ಎಂದು ಅಗರ್ ವಾಲ್ ಹೇಳಿದರು. ಇದು ಆರ್ ಬಿಐನ ಕ್ರಮವಾಗಿದೆ ಎಂದು ಉಪಸಭಾಪತಿ ಪಿಜೆ ಕುರಿಯನ್ ತಿಳಿಸಿದರು.
ಈ ಹಿಂದೆ ನೋಟು ನಿಷೇಧದ ನಿರ್ಧಾರವನ್ನು ಕೈಗೊಂಡಿದ್ದು ಕೇಂದ್ರ ಸರ್ಕಾರವೇ ಹೊರತು, ಆರ್ ಬಿಐ ಅಲ್ಲ ಎಂದು ತಿರುಗೇಟು ನೀಡಿದರು. ನೋಟು ನಿಷೇಧದ ಬಗ್ಗೆ ಆರ್ ಬಿಐ ಮಂಡಳಿ ವಿರೋಧಿಸಿತ್ತು, ಆದರೆ ಕೇಂದ್ರ ಸರ್ಕಾರ ನಿಷೇಧದ ನಿರ್ಧಾರ ತೆಗೆದುಕೊಂಡಿತ್ತು. ಇದೀಗ 2ನೇ ಬಾರಿಯೂ ಸರ್ಕಾರವೇ ಮಾಡಬೇಕಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ