ನಾರಾಯಣ ಮೂರ್ತಿ v/s ವಿಶಾಲ್ ಸಿಕ್ಕಾ ; ಏನಿದು ಇನ್ಫೋಸಿಸ್ ಜಟಾಪಟಿ
Team Udayavani, Aug 18, 2017, 2:56 PM IST
ಬೆಂಗಳೂರು: ಇನ್ಫೋಸಿಸ್ ಸಿಇಒ ಹಾಗೂ ಆಡಳಿತ ನಿರ್ದೇಶಕ ವಿಶಾಲ್ ಸಿಕ್ಕಾ ಹಾಗೂ ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ನಡುವೆ ಭಿನ್ನಾಭಿಪ್ರಾಯ ಗೊತ್ತಿರುವ ವಿಚಾರವೇ, ಆದರೆ ಇದೀಗ ಇನ್ಫೋಸಿಸ್ ಸಿಇಒ ಹುದ್ದೆಗೆ ರಾಜೀನಾಮೆ ನೀಡಿ ಹುದ್ದೆಯಿಂದ ಕೆಳಗಿಳಿದಿರುವ ಸಿಕ್ಕಾ ನಾರಾಯಣ ಮೂರ್ತಿ ವಿರುದ್ಧ ತೀವ್ರ ವಾಗ್ದಾಳಿ ನಡೆಸುವ ಮೂಲಕ ಇಬ್ಬರ ನಡುವಿನ ಒಳಜಗಳವನ್ನು ಜಗಜ್ಜಾಹೀರುಪಡಿಸಿದ್ದಾರೆ.
ಸಂಸ್ಥೆಯಿಂದ ಕೆಲಸ ತೊರೆಯುತ್ತಿದ್ದ ಉದ್ಯೋಗಿಗಳಿಗೆ ಹೆಚ್ಚಿನ ವೇತನ ನೀಡುತ್ತಿದ್ದ ಬಗ್ಗೆ ಇನ್ಫೋಸಿಸ್ ಆಡಳಿತ ಮಂಡಳಿ ಹಾಗೂ ಸ್ಥಾಪಕರ ನಡುವೆ ಭಿನ್ನಾಭಿಪ್ರಾಯ ಉಂಟಾಗಿತ್ತು. ಅಷ್ಟೇ ಅಲ್ಲ ವಿಶಾಲ್ ಸಿಕ್ಕಾ ರಾಜೀನಾಮೆಗೆ ನಾರಾಯಣ ಮೂರ್ತಿ ಅವರ ನಿರಂತರ ಕಿರಿಕಿರಿಯೇ ಕಾರಣ ಎಂದು ಇನ್ಫೋಸಿಸ್ ಆಡಳಿತ ಮಂಡಳಿ ಕೂಡಾ ದೂರಿದೆ.
ಸಿಕ್ಕಾ ಅವರು ಇನ್ಫೋಸಿಸ್ ಆಡಳಿತ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡ ಮೇಲೆ ಹಲವಾರು ಮಹತ್ವದ ಬದಲಾವಣೆಗಳನ್ನು ತಂದಿದ್ದರು. ಇದರ ವಿರುದ್ಧ ಅಸಮಾಧಾನಗೊಂಡಿದ್ದ ನಾರಾಯಣ ಮೂರ್ತಿ ಅವರು ಸಿಕ್ಕಾ ವಿರುದ್ಧ ಪತ್ರ ಚಳವಳಿ ನಡೆಸಿದ್ದರು.
ಕ್ಯಾಲಿಫೋರ್ನಿಯಾ ಮೂಲದ ಟೆಕ್ಕಿ ವಿಶಾಲ್ ಸಿಕ್ಕಾ ಅವರು ಶುಕ್ರವಾರ ಅಚ್ಚರಿಯ ಬೆಳವಣಿಗೆ ಎಂಬಂತೆ ದಿಢೀರ್ ರಾಜೀನಾಮೆ ನೀಡಿದ್ದಾರೆ. 50ರ ಹರೆಯದ ಸಿಕ್ಕಾ ಅವರು ಮೂರು ವರ್ಷಗಳ ಹಿಂದೆ ಇನ್ಫೋಸಿಸ್ ಆಡಳಿತ ನಿರ್ದೇಶಕ ಹಾಗೂ ಸಿಇಒ ಆಗಿ ಅಧಿಕಾರ ವಹಿಸಿಕೊಂಡ ಬಳಿಕ ಸಂಸ್ಥೆಯ ಆದಾಯ ಶೇ.25ರಷ್ಟು ಹೆಚ್ಚಳವಾಗಿದೆ.
ಇನ್ಫೋಸಿಸ್ ಭಾರತದ ನಂ 2 ಸಾಫ್ಟ್ ವೇರ್ ರಫ್ತು ಕಂಪನಿಯಾಗಿದೆ. ಇಂಟರ್ನೆಟ್, ಡಾಟಾ ಬೇಸ್ ಕಂಪನಿಯಾಗಿ ಬೆಳೆದಿರುವ ಇನ್ಫೋಸಿಸ್ ಗೆ ಟಾಟಾ ಕನ್ಸ್ ಲ್ಟೆನ್ಸಿ ಸರ್ವಿಸ್ ಲಿಮಿಟೆಡ್ ಪ್ರಬಲ ಪ್ರತಿಸ್ಫರ್ಧಿ ಕಂಪನಿಯಾಗಿತ್ತು.
ಇಂತಹ ಸ್ಪರ್ಧಾತ್ಮಕ ಬೆಳವಣಿಗೆಯ ನಡುವೆ ಸಿಕ್ಕಾ ಸಿಇಒ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಏತನ್ಮಧ್ಯೆ ಮುಖ್ಯ ಚೀಫ್ ಆಪರೇಟಿಂಗ್ ಅಧಿಕಾರಿ ಪ್ರವೀಣ್ ರಾವ್ ಅವರನ್ನು ಇನ್ಫೋಸಿಸ್ ಸಂಸ್ಥೆಯ ಮಧ್ಯಂತರ ಸಿಇಒ ಆಗಿ ನೇಮಕ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…