ಹಲವು ಬ್ಯಾಂಕ್ಗಳ ಡೆಬಿಟ್ ಕಾರ್ಡ್ ಬ್ಲಾಕ್ ಮಾಡಿದ IRCTC
Team Udayavani, Sep 22, 2017, 4:57 PM IST
ಹೊಸದಿಲ್ಲಿ : ಇಂಡಿಯನ್ ರೈಲ್ವೇ ಕೇಟರಿಂಗ್ ಆ್ಯಂಡ್ ಟೂರಿಸಂ ಕಾರ್ಪೊರೇಶನ್ (ಐಆರ್ಸಿಟಿಸಿ) ಡೆಬಿಟ್ ಕಾರ್ಡ್ ವ್ಯವಹಾರಗಳಿಗೆ ಪೇಮೆಂಟ್ ಗೇಟ್ವೇ ಬಳಸುವ ಹಲವಾರು ಬ್ಯಾಂಕುಗಳನ್ನು ಬ್ಲಾಕ್ ಮಾಡಿದೆ. ಅನುಕೂಲತೆಯ ಶುಲ್ಕಕ್ಕೆ ಸಂಬಂಧಿಸಿದ ವಿವಾದಗಳ ಹಿನ್ನೆಲೆಯಲ್ಲಿ ಐಆರ್ಸಿಟಿಸಿ ಹೀಗೆ ಮಾಡಿರುವುದಾಗಿ ಮಾಧ್ಯಮ ವರದಿಗಳು ತಿಳಿಸಿವೆ.
ಈಗಿನ ಪ್ರಕಾರ ಇಂಡಿಯನ್ ಓವರ್ಸೀಸ್ ಬ್ಯಾಂಕ್, ಕೆನರಾ ಬ್ಯಾಂಕ್, ಯುನೈಟೆಡ್ ಬ್ಯಾಂಕ್ ಆಫ್ ಇಂಡಿಯಾ, ಇಂಡಿಯನ್ ಬ್ಯಾಂಕ್, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, HDFC ಬ್ಯಾಂಕ್ ಮತ್ತು ಎಕ್ಸಿಸ್ ಬ್ಯಾಂಕ್ ಡೆಬಿಟ್ ಕಾರ್ಡ್ ಹೊಂದಿರುವವರು ಮಾತ್ರವೇ ಅವುಗಳನ್ನು ಪಾವತಿಗಾಗಿ ಬಳಸಬಹುದಾಗಿದೆ.
ನೋಟು ಅಮಾನ್ಯದ ಬಳಿಕದಲ್ಲಿ ಐಆರ್ಸಿಟಿಸಿ ಗ್ರಾಹಕರಿಗೆ ತಾನು ವಿಧಿಸುತ್ತಿದ್ದ 20 ರೂ.ಗಳ ಅನುಕೂಲತೆಯ ಶುಲ್ಕವನ್ನು ಮನ್ನಾ ಮಾಡಿತ್ತು.
ಆದರೆ ರೈಲು ಪ್ರಯಾಣಿಕರು ತಾವು ಆನ್ಲೈನ್ನಲ್ಲಿ ಟಿಕೆಟ್ ಖರೀದಿಸುವಾಗ ಭರಿಸುವ ಅನುಕೂಲತೆಯ ಶುಲ್ಕದ ಹೊರೆಯನ್ನು ಬ್ಯಾಂಕುಗಳು ಹಂಚಿಕೊಳ್ಳಬೇಕೆಂದು ಐಆರ್ಸಿಟಿಸಿ ನಿರೀಕ್ಷಿಸುತ್ತದೆ ಎಂದು ಮೂಲಗಳು ತಿಳಿಸಿವೆ.
ಮಾಧ್ಯಮ ವರದಿಗಳ ಪ್ರಕಾರ ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಶನ್ (ಐಬಿಎ) ಅನುಕೂಲತೆ ಶುಲ್ಕ ಕುರಿತ ವಿವಾದವನ್ನು ಬಗೆ ಹರಿಸುವ ನಿಟ್ಟಿನಲ್ಲಿ ಐಆರ್ಸಿಟಿಸಿ ಮತ್ತು ಭಾರತೀಯ ರೈಲ್ವೇ ಜತೆಗೆ ಚರ್ಚೆ ನಡೆಸುತ್ತಿದೆ.
ರೈಲ್ವೇ ಟಿಕೆಟಿಂಗ್ ಮತ್ತು ಇತರ ಪ್ರಯಾಣಿಕ ಸೇವಾ ವಹಿವಾಟುಗಳಿಗೆ ಸಂಬಂಧಿಸಿದಂತೆ ಆರ್ಬಿಐ ಫೆಬ್ರವರಿ 16ರಂದು ನೀಡಿರುವ ಮಾರ್ಗದರ್ಶಿ ಸೂತ್ರಗಳ ಪ್ರಕಾರ 1,000 ರೂ. ವರೆಗಿನ ವಹಿವಾಟುಗಳಿಗೆ 5 ರೂ. ಮತ್ತು 1,001 ರೂ. ಮತ್ತು 2,000 ರೂ. ವರೆಗಿನ ವಹಿವಾಟುಗಳ ಮೇಲೆ 10 ರೂ. ಶುಲ್ಕ ವಿಧಿಸಬಹುದಾಗಿದೆ. ಮಾತ್ರವಲ್ಲದೆ 2,001 ರೂ.ಗೆ ಮೀರಿದ ವಹಿವಾಟುಗಳ ಮೇಲಿನ ಎಂಡಿಆರ್ ಶೇ.0.50 ಮೀರಕೂಡದು ಎಂದು ಅದು ಹೇಳಿದೆಯಲ್ಲದೆ ಇದಕ್ಕೆ ಗರಿಷ್ಠ 250 ರೂ.ಗಳ ಮಿತಿಯನ್ನು ನಿಗದಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ