ಶ್ರೀ ವಿನಾಯಕ ಯಕ್ಷಕಲಾದ ಯಕ್ಷಗಾನ ಸಪ್ತಾಹ ಸಮಾರೋಪ
Team Udayavani, Oct 15, 2017, 4:25 PM IST
ಮುಂಬಯಿ: ಶ್ರೀ ವಿನಾಯಕ ಯಕ್ಷಕಲಾ ತಂಡ ಮಕ್ಕಳ ಮೇಳ ಕೆರೆಕಾಡು ಮೂಲ್ಕಿ ಇವರ ಮುಂಬಯಿ ಯಕ್ಷಗಾನ ಸಪ್ತಾಹದ ಸಮಾರೋಪ ಸಮಾರಂಭವು ಅ. 13ರಂದು ಸಂಜೆ 5 ರಿಂದ ನೆರೂಲ್ ಶ್ರೀ ಶನೀಶ್ವರ ಮಂದಿರದ ಸಭಾಂಗಣದಲ್ಲಿ ಜರಗಿತು.
ಶ್ರೀ ಶನೀಶ್ವರ ಮಂದಿರ ನೆರೂಲ್, ಶ್ರೀ ಅಯ್ಯಪ್ಪ ಭಕ್ತವೃಂದ ಚಾರಿಟೇಬಲ್ ಟ್ರಸ್ಟ್, ರಂಗಭೂಮಿ ಫೈನ್ಆರ್ಟ್ಸ್ ಜಂಟಿ ಆಯೋಜನೆಯಲ್ಲಿ ನಡೆದ ಸಮಾರಂಭದ ಅಧ್ಯಕ್ಷತೆಯನ್ನು ನೆರೂಲ್ ಶ್ರೀ ಶನೀಶ್ವರ ಮಂದಿರದ ಅಧ್ಯಕ್ಷ, ಧರ್ಮದರ್ಶಿ ರಮೇಶ್ ಎಂ. ಪೂಜಾರಿ ವಹಿಸಿದ್ದರು.
ಪುರೋಹಿತ ವಿದ್ವಾನ್ ದಿನೇಶ್ ಉಪರ್ಣ ಅವರು ಆಶೀರ್ವಚನ ನೀಡಿ ಶುಭಹಾರೈಸಿದರು. ಶ್ರೀ ಶನೀಶ್ವರ ಮಂದಿರ ನೆರೂಲ್ ಪ್ರಧಾನ ಅರ್ಚಕ ಸೂರಜ್ ಭಟ್ ಪಾಲ್ಗೊಂಡು ಶುಭಶಂಸನೆಗೈದರು.
ಮುಖ್ಯ ಅತಿಥಿಯಾಗಿ ಶ್ರೀ ಶನೀಶ್ವರ ಮಂದಿರದ ಕಾರ್ಯಾಧ್ಯಕ್ಷ ಸಂತೋಷ್ ಡಿ. ಶೆಟ್ಟಿ ಹಾಗೂ ಅತಿಥಿಗಳಾಗಿ ಕನ್ನಡ ಕಲಾಕೇಂದ್ರದ ಅಧ್ಯಕ್ಷ ಬಾಲಚಂದ್ರ ರಾವ್, ಯಕ್ಷಗಾನ ಅರ್ಥದಾರಿ ಕೆ. ಕೆ. ಶೆಟ್ಟಿ, ನಾರ್ಡಿಕ್ ಲಾಜಿಸ್ಟಿಕ್ಸ್ ಇದರ ಸಿಎಂಡಿ ಪ್ರಮೋದ್ ಕರ್ಕೇರ, ಪನ್ವೇಲ್ ಕರ್ನಾಟಕ ಸಂಘದ ಅಧ್ಯಕ್ಷ ಧನಂಜಯ ಶೆಟ್ಟಿ ಕೊಲ್ಪೆ, ತುಳುಕೂಟ ಐರೋಲಿ ಅಧ್ಯಕ್ಷ ಹರೀಶ್ ಶೆಟ್ಟಿ ಪಡುಬಿದ್ರೆ, ಬಿಲ್ಲವರ ಅಸೋಸಿಯೇಶನ್ ಮುಂಬಯಿ ನವಿಮುಂಬಯಿ ಪ್ರಾದೇಶಿಕ ಸಮಿತಿಯ ಉಪ ಕಾರ್ಯಾಧ್ಯಕ್ಷ ವಿಶ್ವನಾಥ ಕೆ. ಪೂಜಾರಿ, ಶ್ರೀ ಅಯ್ಯಪ್ಪ ಭಕ್ತವೃಂದ ಚಾರಿಟೇಬಲ್ ಟ್ರಸ್ಟ್ ನವಿಮುಂಬಯಿ ಕಾರ್ಯಾಧ್ಯಕ್ಷ ಅನಿಲ್ ಕೆ. ಹೆಗ್ಡೆ ಅವರು ಉಪಸ್ಥಿತರಿದ್ದರು.
ಸಮಾರಂಭದಲ್ಲಿ ರಂಗಭೂಮಿ ಫೈನ್ಆರ್ಟ್ಸ್ ಇದರ ಅಧ್ಯಕ್ಷ ತಾರಾನಾಥ್ ಶೆಟ್ಟಿ ಪುತ್ತೂರು, ಶ್ರೀ ಶನೀಶ್ವರ ಮಂದಿರ ನೆರೂಲ್ ಇದರ ಆದ್ಯಪಾಡಿಗುತ್ತು ಕರುಣಾಕರ ಆಳ್ವ, ಶ್ರೀ ಅಯ್ಯಪ್ಪ ಭಕ್ತವೃಂದ ಚಾರಿಟೇಬಲ್ ಟ್ರಸ್ಟ್ ಇದರ ಕೃಷ್ಣ ಎಂ. ಪೂಜಾರಿ ಅವರನ್ನು ಗಣ್ಯರ ಸಮ್ಮುಖದಲ್ಲಿ ಶಾಲು ಹೊದೆಸಿ, ಸ್ಮರಣಿಕೆಯನ್ನಿತ್ತು ಸಮ್ಮಾನಿಸಿ ಗೌರವಿಸಲಾಯಿತು.
ಮೇಳದ ಪರವಾಗಿ ಜಯಂತ್ ಅಮೀನ್, ಮುಂಬಯಿ ವ್ಯವಸ್ಥಾಪಕರಾದ ವಿ. ಕೆ. ಸುವರ್ಣ, ಪ್ರಭಾಕರ ಎಲ್. ಹೆಗ್ಡೆ ಅವರು ಅವರ ನೇತೃತ್ವದಲ್ಲಿ ಕಾರ್ಯಕ್ರಮವು ಜರಗಿತು. ಜಗದೀಶ್ ಶೆಟ್ಟಿ ಪನ್ವೇಲ್ ಕಾರ್ಯಕ್ರಮ ನಿರ್ವಹಿಸಿದರು. ಸಾಂಸ್ಕೃತಿಕ ಕಾರ್ಯಕ್ರಮವಾಗಿ ಕನಕಾಂಗಿ ಕಲ್ಯಾಣ ಯಕ್ಷಗಾನ ಪ್ರದರ್ಶನಗೊಂಡಿತು. ಕಲಾಭಿಮಾನಿಗಳು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಚಿತ್ರ-ವರದಿ : ಸುಭಾಷ್ ಶಿರಿಯಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು
MUST WATCH
ಹೊಸ ಸೇರ್ಪಡೆ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ