ಸಹಿಷ್ಣುತಾ ಭಾವನೆ ಅಗತ್ಯ: ಡಾ| ಘಂಟಿ


Team Udayavani, Aug 17, 2017, 2:26 PM IST

17-CHI-1.jpg

ರಿಪ್ಪನ್‌ಪೇಟೆ: ಪ್ರಾಚೀನ ಧರ್ಮಗಳ ಅಧ್ಯಯನದಿಂದ ಇಂದಿನ ಜನರಲ್ಲಿ ಸಾಮರಸ್ಯದ ಕಲ್ಪನೆ ಮೂಡಬೇಕಿದೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಾ| ಮಲ್ಲಿಕಾ ಎಸ್‌. ಘಂಟಿ ಅಭಿಪ್ರಾಯಪಟ್ಟರು.

ಸಮೀಪದ ಹುಂಚ ಜೈನಮಠದಲ್ಲಿ ಕನ್ನಡ ವಿಶ್ವವಿದ್ಯಾಲಯ ಹಂಪಿ, ಶ್ರೀ ಅಬೇರಾಜ್‌ ಬಲ್ಡೋಟಾ ಜೈನ ಸಂಸ್ಕೃತಿ ಅಧ್ಯಯನ ಪೀಠ ಮತ್ತು ಹೊಂಬುಜ ಜೈನ ಮಠದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಪ್ರಾಚೀನ ಕರ್ನಾಟಕದ ಜೈನ ನೆಲೆಗಳು, ವೈಶಿಷ್ಟ ಮತ್ತು ಅನನ್ಯತೆ ವಿಷಯದ ರಾಷ್ಟ್ರಮಟ್ಟದ ವಿಚಾರ ಸಂಕಿರಣ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮನುಕುಲವೆಂಬುದು ಸಹಜವಾಗಿ ಮಾತಿಗೆ ಮಾತ್ರ ಬಳಸುವ ಪದವಾಗಿದೆ. ಅದನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಇಂದಿನ ಅಗತ್ಯ. ಹಿಂದಿನ ರಾಜರ ಆಳ್ವಿಕೆಯಲ್ಲಿ ಎಲ್ಲಾ ಧರ್ಮದವರನ್ನು ಸಮನಾಗಿ ಕಾಣುವ ಸಹಿಷ್ಣುತಾ ಭಾವ ಇತ್ತು. ಈಗಿನ ಆಡಳಿತ ವ್ಯವಸ್ಥೆಯವರಲ್ಲಿ ಇದು ಕಾಣಿಸುತ್ತಿಲ್ಲ ಎಂಬುದು ಆತಂಕದ ಸಂಗತಿ. ಹೊಸ ಮತ್ತು ಹಳೆ ತಲೆಮಾರಿನ ಸಮ್ಮಿಲನದ ಅಧ್ಯಯನದಿಂದ ಪ್ರಾಚೀನ ಸಂಸ್ಕೃತಿಯ ಬಗ್ಗೆ ಬೆಳಕು ಚೆಲ್ಲುತ್ತದೆ. ಕನ್ನಡ ವಿಶ್ವವಿದ್ಯಾನಿಲಯದಲ್ಲಿ 12 ಅಧ್ಯಯನ ಶಾಖೆಗಳಿದ್ದು ಇತರರೊಂದಿಗೆ ಸೇರಿ ಪ್ರಚುರ ಪಡಿಸುವ ಉದೇಶದಿಂದ ಇಂತಹ ವಿಚಾರ ಸಂಕಿರಣಗಳನ್ನು ಆಯೋಜಿಸಲಾಗಿದೆ ಎಂದರು.

ವಿಚಾರ ಸಂಕಿರಣ ಉದ್ಘಾಟಿಸಿದ ಡಾ| ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಸ್ವಾಮೀಜಿ ಮಾತನಾಡಿ, ಹುಂಚ ಕ್ಷೇತ್ರದಲ್ಲಿ ಪ್ರಾಚೀನ ಕಾಲದಲ್ಲಿ ನಡೆದ ಜೈನದರ್ಶನ ಗ್ರಂಥಗಳ ರಚನೆ ಇಲ್ಲಿನ ಅರಸೊತ್ತಿಗೆಯ ಸಾಹಿತ್ಯ ರಚನೆಗೆ ನೀಡಿದ ಪ್ರೋತ್ಸಾಹಗಳನ್ನು ನೆನಪಿಸಿಕೊಂಡು ಪ್ರಾಚೀನ ಕರ್ನಾಟಕದ ಜೈನ ನೆಲೆಗಳ ಬಗ್ಗೆ ವಿಷಯವನ್ನು ಮಂಡಿಸುವ ವಿಶಿಷ್ಟ ವಿಚಾರ ಸಂಕಿರಣಕ್ಕೆ ಸಂತಸ ವ್ಯಕ್ತಪಡಿಸಿದರು. ಶಿಖರೋಪನ್ಯಾಸ ನೀಡಿದ ಡಾ| ನಾಡೋಜ ಹಂಪ ನಾಗರಾಜಯ್ಯ, ಕರ್ನಾಟಕದ ಭೂವಿಸ್ತಾರದಲ್ಲಿ 5ನೇ ಶತಮಾನದಲ್ಲಿಯೇ ಜೈನ ಸಂಸ್ಕೃತಿ ನೆಲೆಗೊಂಡಿತ್ತು. ಕದಂಬರ ಕಾಲದಲ್ಲಿ ಜೈನಧರ್ಮವು ರಾಜ್ಯ ಧರ್ಮವಾಗಿ ಗೌರವಿಸಲ್ಪಟ್ಟಿತ್ತು. ಅಂದಿನ ಕಾಲದಲ್ಲಿ ಬಸದಿ ನಿರ್ಮಾಣ ಕಾರ್ಯದಲ್ಲಿ ವಿಶೇಷವಾಗಿ ಮುತುವರ್ಜಿಯನ್ನು ವಹಿಸಿದವರಲ್ಲಿ ಮಹಿಳೆಯರು ಎಂಬುದನ್ನು ಮನಗಾಣಬೇಕಿದೆ ಎಂದರು. 

 ಹಂಪಿ ವಿವಿಯ ಯೋಜನಾ ನಿರ್ದೇಶಕ ಡಾ| ಎಸ್‌.ಪಿ. ಪದ್ಮಪ್ರಸಾದ್‌, ಡಾ| ತಾರೇಹಳ್ಳಿ ಹನುಮಂತಪ್ಪ, ಡಾ|ಬಿ. ಪಾಂಡುರಂಗಬಾಬು, ಡಾ| ಉಪೇಂದ್ರಕುಮಾರ ಸುಬೇದಾರ್‌ ಇನ್ನಿತರರಿದ್ದರು.

ಗೋಷ್ಠಿ: ಮಧ್ಯಾಹ್ನ ನಡೆದ ಮೊದಲ ಗೋಷ್ಠಿಯ ಅಧ್ಯಕ್ಷತೆಯನ್ನು ಮೈಸೂರು ವಿವಿಯ ವಿಶ್ರಾಂತ ಪ್ರಾಧ್ಯಾಪಕ ಡಾ| ಎನ್‌.ಎಸ್‌. ರಂಗರಾಜು ವಹಿಸಿದ್ದರು. ಪೂರ್ಣಿಮಾ ಡಿ., ಡಾ| ಉಮಾನಾಥ ಶೆಣೈ, ಡಾ| ಎಂ.ಎಂ. ಕೊಟ್ರಸ್ವಾಮಿ, ಡಾ| ಕೆ.ಜಿ. ಭಟ್‌ಸೂರಿ ಅವರು ಪ್ರಾಚೀನ ಕರ್ನಾಟಕದ
ಜೈನನೆಲೆಗಳು ವೈಶಿಷ್ಟ ಮತ್ತು ಅನನ್ಯತೆ ವಿಷಯದ ಬಗ್ಗೆ ಪ್ರಬಂಧ ಮಂಡಿಸಿದರು.  ನಂತರ 4 ಗಂಟೆಗೆ ನಡೆದ ಎರಡನೇ ಗೋಷ್ಠಿಯ ಅಧ್ಯಕ್ಷತೆಯನ್ನು ಬೆಂಗಳೂರಿನ ನಿವೃತ್ತ ಪ್ರಾಂಶುಪಾಲ ಮತ್ತು ವಿದ್ವಾಂಸ ಡಾ| ಎಂ.ಎ. ಜಯಚಂದ್ರ ವಹಿಸಿದ್ದರು. ಗೋಷ್ಠಿಯಲ್ಲಿ ಡಾ| ತಾರಿಹಳ್ಳಿ ಹನುಮಂತಪ್ಪ, ರಂಜಿತ್‌ ಆರ್‌., ಹನುಮಾಕ್ಷಿ ಗೋಗಿ, ಡಾ| ಜಿನದತ್ತ ಹಡಗಲಿ, ಡಾ| ದೇವರೆಡ್ಡಿ ಹದ್ಲಿ ಪ್ರಬಂಧ ಮಂಡಿಸಿದರು. 

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.