ಜಗಳವಾಡಿ ಮನೆ ಬಿಟ್ಟವಳು 2 ವರ್ಷದ ನಂತ್ರ ಊರು ಸೇರಿದಳು


Team Udayavani, Sep 20, 2017, 11:20 AM IST

20-Chikamangaluru-1.jpg

ಎನ್‌.ಆರ್‌.ಪುರ: ಮನೆಯಲ್ಲಿ ಜಗಳ ಮಾಡಿಕೊಂಡು ಕಳೆದ ಎರಡೂವರೆ ವರ್ಷದ ಹಿಂದೆ ಊರು ತೊರೆದಿದ್ದ ಮಹಿಳೆಯೊಬ್ಬರು ಕೊನೆಗೂ ಮರಳಿ ತನ್ನ ಮನೆ ಸೇರಿದ್ದಾರೆ.

ತಮಿಳುನಾಡು ಮೂಲದ ಸೆಲ್ವಿ ವೆಂಕಟೇಶ್‌ ಕಳೆದ 15 ದಿನದ ಹಿಂದೆ ಎನ್‌.ಆರ್‌.ಪುರಕ್ಕೆ ಬಂದಿದ್ದು ಸೋಮವಾರ ಇವರನ್ನು ಸಂಬಂಧಿಕರ ಸುಪರ್ದಿಗೆ ನೀಡಲಾಯಿತು.

ತಮಿಳುನಾಡಿನ ಕಡಲೂರು ಜಿಲ್ಲೆ ವಿರುವಾಚಲಂ ತಾಲೂಕಿನ ನೈವೇಟಿಯ ಸೆಲ್ವಿ ಮನೆಯಲ್ಲಿ ಜಗಳವಾಡಿ ಊರು ಬಿಟ್ಟು ಬಂದಿದ್ದರು. ಬರಿ ಕಾಲಿನಲ್ಲಿ ಊರಿಂದ ನಡೆಯುತ್ತ ಹೊರಟ ಈಕೆ ಕರ್ನಾಟಕದ ಕೆಲವು ಭಾಗಗಳಲ್ಲಿ ಸುತ್ತಾಡಿದ್ದಾಳೆ. ಯಾರ ಬಳಿಯೂ ಹಣ ಕೇಳದೆ, ಹಸಿದಾಗ ಊಟ ಕೇಳುತ್ತಾ,ಸುಮಾರು 680 ಕಿ.ಮೀ ದೂರ ನಡೆದ ಈಕೆ ಕಳೆದ 15 ದಿನದ ಹಿಂದೆ ಎನ್‌.ಆರ್‌. ಪುರಕ್ಕೆ ಬಂದು ಇಲ್ಲಿಯೇ ಉಳಿದಿದ್ದರು.

ಈ ಮಹಿಳೆಯನ್ನು ಗಮನಿಸಿದ ಧ್ರುವತಾರೆ ಕನ್ನಡ ರಕ್ಷಣಾ ವೇದಿಕೆ, ಭಾರತೀಯ ಮಾನವ ಹಕ್ಕು ಸಂರಕ್ಷಣಾ ಸದಸ್ಯರು ಮತ್ತಿಮರದ ಅನಾಥಶ್ರಮಕ್ಕೆ ಸೇರಿಸಲು ಮುಂದಾಗಿದ್ದಾರೆ. ಆಗ ಈಕೆ ಮನೆ ಬಿಟ್ಟು ಬಂದಿದ್ದು ವಾಪಸ್‌ ಊರಿಗೆ ತೆರಳಲು ಆಗದ ಸ್ಥಿತಿಯ ಬಗ್ಗೆ ವಿವರಿಸಿದ್ದಾಳೆ.

ಈ ಮಹಿಳೆಯನ್ನು ಅವರ ಮನೆಗೆ ಸೇರಿಸುವ ನಿರ್ಧಾರ ಕೈಗೊಂಡ ಸಂಘಟನೆಗಳ ಸದಸ್ಯರು ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾದರು.ಮಾನವ ಹಕ್ಕು ಸಂರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷೆ ಜುಬೇದಾ ಮನೆ ತೊರೆದು ಬಂದ ಮಹಿಳೆಯ ಫೋಟೋ ಹಾಗೂ ವಿವರವನ್ನು ವಾಟ್ಸ್‌ಆ್ಯಪ್‌, ಫೇಸ್‌ಬುಕ್‌ ನಲ್ಲಿ ಪ್ರಕಟಿಸಿದ್ದರು. ತಮಿಳುನಾಡಿನಲ್ಲಿರುವ
ಜುಬೇದಾರವರ ಸ್ನೇಹಿತರು ಇದನ್ನು ನೋಡಿ ಮಹಿಳೆಯ ಊರನ್ನು ಪತ್ತೆಹಚ್ಚಿ ಅವರ ಸಂಬಂಧಿಕರಿಗೆ ನಡೆದಿರುವ ವಿಚಾರ ತಿಳಿಸಿದ್ದಾರೆ.

ಅದರಂತೆ ಸೆಲ್ವಿ ಅವರ ಸಂಬಂಧಿಕರು ಸೋಮವಾರ ಎನ್‌.ಆರ್‌.ಪುರಕ್ಕೆ ಆಗಮಿಸಿ ತಮ್ಮೊಂದಿಗೆ ಕರೆದುಕೊಂಡು ಊರಿಗೆ ತೆರಳಿದ್ದಾರೆ. 12 ದಿನಗಳ ಕಾಲ ಸೆಲ್ವಿಯ ಲಾಲನೆ ಪೋಷಣೆ ಮಾಡಿದ ಧ್ರುವತಾರೆ ಕನ್ನಡ ರಕ್ಷಣಾ ವೇದಿಕೆಯ
ತಾಲೂಕು ಅಧ್ಯಕ್ಷ ಮತ್ತು ತಂಡದವರು, ಆಟೋ ಹರೀಶ್‌ ಮತ್ತು ಜುಬೇದಾರವರಿಗೆ ಸಂಬಂಧಿಕರು ಕೃತಜ್ಞತೆ ಸಲ್ಲಿಸಿದ್ದಾರೆ. 12 ದಿನಗಳ ಕಾಲ ಆ ಅನಾಥ ಮಹಿಳೆಗೆ ಊಟ, ತಿಂಡಿ ವ್ಯವಸ್ಥೆ ಮಾಡಿಕೊಟ್ಟ ಪಿ.ಎಸ್‌.ಐ ರವಿ ನಿಡಗಟ್ಟರನ್ನುಧ್ರುವತಾರೆ ಕನ್ನಡ ರಕ್ಷಣಾ ವೇದಿಕೆಯ ಅಧ್ಯಕ್ಷ ದೇವರಾಜ್‌, ಆಯೋಗದ ಮಹಿಳಾ ಅಧ್ಯಕ್ಷೆ ಜುಬೇದಾ ಅಭಿನಂದಿಸಿದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.