ನೀರಿನ ಸಮಸ್ಯೆ ನಿವಾರಣೆಗೆ ಸಚಿವರ ಬಳಿ ನಿಯೋಗ


Team Udayavani, Aug 15, 2017, 3:08 PM IST

15-Z-2.jpg

ಚಿತ್ರದುರ್ಗ: ನಗರದಲ್ಲಿ ನೀರಿನ ಸಮಸ್ಯ ಉಲ್ಬಣಗೊಂಡಿದ್ದು, ಸಮರ್ಪಕ ನೀರು ಪೂರೈಕೆ ಸಲುವಾಗಿ ಜಿಲ್ಲಾ ಉಸ್ತುವಾರಿ ಸಚಿವರ ಬಳಿ ನಿಯೋಗ ತೆರಳಿ ಮನವಿ ಮಾಡಬೇಕು ಎಂದು ನಗರಸಭೆಯ ಬಹುತೇಕ ಸದಸ್ಯರು ಸೋಮವಾರ ನಡೆದ ಸಾಮಾನ್ಯ ಸಭೆಯಲ್ಲಿ ಒತ್ತಾಯಿಸಿದರು.

ನಗರದ ಹಳೆ ನಗರಸಭೆ ಕಚೇರಿ ಸಭಾಂಗಣದಲ್ಲಿ ಪ್ರಭಾರಿ ಅಧ್ಯಕ್ಷ ಕೆ. ಮಲ್ಲೇಶಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ನೀರಿನ ವಿಷಯದ ಚರ್ಚೆ ಗಂಭೀರ ಸ್ವರೂಪ ಪಡೆಯಿತು. ಕೆಲ ಸದಸ್ಯರು ಸಚಿವರ ಪರವಾಗಿ, ಹಲವರು ಶಾಸಕರ ಪರವಾಗಿ ಮಾತನಾಡಿದರು. ಆಗ ಇನ್ನುಳಿದ ಸದಸ್ಯರು ಯಾರೂ ಯಾರ ಪರ-ವಿರೋಧವಾಗಿ ನಿಲ್ಲಬೇಡಿ. ನಗರದ ನೀರಿನ ಸಮಸ್ಯೆ ನಿವಾರಣೆ ಆಗಬೇಕು. ಆದ್ದರಿಂದ ಪಕ್ಷ ಭೇದ ಮರೆತು ಸಮರ್ಪಕ ನೀರು ಪೂರೈಕೆ ಬಗ್ಗೆ ಅಧ್ಯಕ್ಷರು, ಆಯುಕ್ತರು ಚಿಂತನೆ ನಡೆಸಬೇಕು ಎಂದು ತಾಕೀತು ಮಾಡಿದರು.

ಸದಸ್ಯ ಬಿ. ಕಾಂತರಾಜ್‌ ಮಾತನಾಡಿ, ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚಿಸಲು ಸಭೆ ಕರೆಯಲಾಗಿದೆ. ಅದನ್ನು ಬಿಟ್ಟು ಸಭೆಗೆ ಅಡ್ಡಿಪಡಿಸುವವರನ್ನು ಹೊರಗೆ ಹಾಕಿ ಎಂದು ಆಗ್ರಹಿಸಿದರು. ಹಿರಿಯ ಸದಸ್ಯ ಮಹಮ್ಮದ್‌ ಅಹಮ್ಮದ್‌ ಪಾಷಾ ಮಾತನಾಡಿ, ಸಭಾ ನಡವಳಿಯಲ್ಲಿರುವ ವಿಷಯ ಬಿಟ್ಟು ಬೇರೆ ವಿಷಯದ ಬಗ್ಗೆ ಚರ್ಚೆ ನಡೆದರೆ ಹೊರನಡೆಯುವುದಾಗಿ ಗುಡುಗಿದರು. 

ಶಾಸಕರು ನಗರದಲ್ಲಿ ಕೊರೆಸಿರುವ ಕೊಳವೆಬಾವಿಗಳ ಬಗ್ಗೆ ಮಾಹಿತಿ ನೀಡುವಂತೆ ಕಳೆದ 3-4 ಸಭೆಗಳಿಂದಲೂ ಹೇಳುತ್ತಿದ್ದೇನೆ. ಈ ಬಗ್ಗೆ ಅಧಿಕಾರಿಗಳು ಗಮನ ಹರಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಸಾರ್ವಜನಿಕರಿಗೆ  ಸಮರ್ಪಕ ನೀರು ಪೂರೈಕೆ ನಗರಸಭೆಗೆ ಮಾತ್ರ ಸೀಮಿತವೇ, ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು, ಜಿಲ್ಲಾಡಳಿತಕ್ಕೆ ಇದರ ಜವಾಬ್ದಾರಿ ಇಲ್ಲವೇ ಎಂದು ಪ್ರಶ್ನಿಸಿದರು. 

ನೀರು ಪೂರೈಕೆ ವಿಚಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಗಮನ ನೀಡುತ್ತಿಲ್ಲ. ಆದ್ದರಿಂದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಅಡ್ಡಿಪಡಿಸುವುದಾಗಿ ಕಾಂತರಾಜ್‌ ಹೇಳಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸದಸ್ಯ ಎಚ್‌.ಕೆ. ಖಾದರ್‌ ಖಾನ್‌, ಸ್ವಾತಂತ್ರ್ಯ ದಿನಾಚರಣೆಗೆ ತನ್ನದೇ
ಆದ ವೈಶಿಷ್ಟ, ಗೌರವವಿದೆ. ಸಚಿವರ ಧ್ವಜಾರೋಹಣಕ್ಕೆ ಅಡ್ಡಿಪಡಿಸುವುದು ಬೇಡ, ಸಚಿವರು ಆ ಸ್ಥಳಕ್ಕೆ ಹೋಗುವ ಮೊದಲು ಘೇರಾವ್‌ ಹಾಕೋಣ ಎಂದರು. ಪ್ರಭಾರಿ ಅಧ್ಯಕ್ಷ ಕೆ. ಮಲ್ಲೇಶಪ್ಪ ಮಾತನಾಡಿ, ನಗರಸಭೆಯ ಎಲ್ಲ ವಾರ್ಡ್‌ಗಳಿಗೆ ಟ್ಯಾಂಕರ್‌ ನೀರು ಸರಬರಾಜು ಮಾಡುವ ಮೂಲಕ ನೀರಿನ ಅಭಾವವನ್ನು ಸ್ವಲ್ಪ ಮಟ್ಟಿಗೆ ನೀಗಿಸಲಾಗುತ್ತಿದೆ. ನಗರದ ನೀರಿನ ಸಮಸ್ಯೆ ಬಗ್ಗೆ ಶಾಸಕರು ಗಮನ ಹರಿಸುತ್ತಿಲ್ಲ, ಹಾಗಾಗಿ ಜಿಲ್ಲಾ ಉಸ್ತುವಾರಿ
ಸಚಿವರನ್ನು ಖುದ್ದು ಭೇಟಿ ಮಾಡಿ ವಿಶೇಷ ಅನುದಾನ ನೀಡುವಂತೆ ಮನವಿ ಮಾಡೋಣ. ನೂತನ ಜಿಲ್ಲಾಧಿಕಾರಿ ಬಂದ ನಂತರ ಬಹುತೇಕ ಸದಸ್ಯರು ಅವರ ಬಳಿ ಹೋಗಿ ನಗರದ ನೀರಿನ ಸಮಸ್ಯೆ ಬಗ್ಗೆ ಮನವರಿಕೆ ಮಾಡಿದ್ದೇವೆ ಎಂದು ತಿಳಿಸಿದರು.

ಆರೋಪ ಬಿಟ್ಟು ಕೆಲಸ ಮಾಡಿ…
ಕೊಳವೆಬಾವಿ ಕೊರೆಸಿ ತಿಂಗಳುಗಟ್ಟಲೆ ಪೈಪ್‌ಲೈನ್‌ ಹಾಕಿಸುವುದಿಲ್ಲ, ತುರ್ತಾಗಿ ಸಂಪರ್ಕ ಕಲ್ಪಿಸಿದರೆ ಟ್ಯಾಂಕರ್‌ ನೀರು ಸರಬರಾಜು ಮಾಡುವ ಆರ್ಥಿಕ ಹೊರೆ ತಪ್ಪಲಿದೆ ಎಂದು ಸದಸ್ಯರಾದ ರವಿಶಂಕರ್‌ಬಾಬು, ಶ್ಯಾಮಲಾ, ಶಾಂತಕುಮಾರಿ, ಸೈಯ್ಯದ್‌ ನಸ್ರುಲ್ಲಾ, ತಿಪ್ಪೇಸ್ವಾಮಿ ಮತ್ತಿತರರರು ಸಲಹೆ ನೀಡಿದರು. ನಗರಸಭೆ ಅಧ್ಯಕ್ಷರಿಗೆ ಶಾಸಕರಿಗಿಂತ ಹೆಚ್ಚು ಅಧಿ ಕಾರ ಇದೆ. ಆದ್ದರಿಂದ ಪದೇ ಪದೇ ಶಾಸಕರು, ಸಚಿವರ ಬಗ್ಗೆ ದೂರುವುದನ್ನು ನಿಲ್ಲಿಸಿ. ನಿಮಗೆ ಇಚ್ಛಾಶಕ್ತಿ ಇಲ್ಲ. ನಮಗೆ ಜನರಿಗೆ ಸಮರ್ಪಕ ನೀರು ಪೂರೈಕೆ ಮಾಡಲು ಆಗುತ್ತಿಲ್ಲ ಎಂಬ ನೋವಿದೆ. ಈ ಬಗ್ಗೆ ನೀವು ಪ್ರಾಮಾಣಿಕ ಪ್ರಯತ್ನವನ್ನೇ ಮಾಡುತ್ತಿಲ್ಲ ಎಂದು ದೂರಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಧ್ಯಕ್ಷ ಕೆ. ಮಲ್ಲೇಶಪ್ಪ, ನೀವು ಬರೀ ರಾಜಕೀಯ ಮಾಡುತ್ತಿದ್ದೀರಿ ಎಂದು ಆಕ್ಷೇಪಿಸಿದರು. ಆಗ ಸದಸ್ಯ ಸೈಯ್ಯದ್‌ ನಸ್ರುಲ್ಲಾ ಮಾತನಾಡಿ, ನೀರಿನ ಸಮಸ್ಯೆ ನಿವಾರಣೆಗೆ ಸದಸ್ಯರ ಮಧ್ಯೆ ಹೊಂದಾಣಿಕೆ ಅಗತ್ಯ. ಕಿತ್ತಾಡಿದರೆ ಸಮಸ್ಯೆ ಬಗೆಹರಿಯುವುದಿಲ್ಲ. ಈಗ ಪರಿಸ್ಥಿತಿ ವಿಕೋಪಕ್ಕೆ ಹೋಗಿದೆ. ಚರ್ಚೆ ಆರೋಗ್ಯಕರವಾಗಿರಲಿ. ಸಮಸ್ಯೆಗೆ ಪರಿಹಾರ ಕಂಡು ಹಿಡಿಯುವ ಕೆಲಸ ಮಾಡಬೇಕು ಎಂದರು.

ಟಾಪ್ ನ್ಯೂಸ್

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.