ಶತಾಯುಷಿ ,ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಮದನ್ ಮಾಸ್ಟರ್ ಇನ್ನಿಲ್ಲ
Team Udayavani, Mar 28, 2017, 11:09 AM IST
ಕಾಸರಗೋಡು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಕೆ.ಪಿ.ಮದನ್ ಮಾಸ್ಟರ್ ಅವರು ಮಂಗಳವಾರ ಪೆರ್ಲದ ಸೆರಾಜೆಯ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ.
ಇತ್ತೀಚಿಗಿನ ವರೆಗೆ ಲವಲವಿಕೆಯಿಂದ ಇದ್ದ ಅವರು ವಾರ್ಧಕ್ಯದಿಂದ ನಿಧನ ಹೊಂದಿದ್ದಾರೆ. ಜನವರಿ 2 ರಂದು 100 ನೇ ಜನ್ಮದಿನವನ್ನು ಆಚರಿಸಿಕೊಂಡಿದ್ದರು.
ಕ್ವೀಟ್ ಇಂಡಿಯಾ ಚಳುವಳಿ ಸೇರಿದಂತೆ ಅನೇಕ ಹೋರಾಟದಲ್ಲಿ ಧುಮುಕಿ ಸ್ವಾತಂತ್ರ್ಯ ಹೋರಾಟ ನಡೆಸಿದ್ದರು. ಮಹಾತ್ಮಾ ಗಾಂಧೀಜಿ ಜೊತೆಯೂ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದರು.
ಶಿಕ್ಷಕರಾಗಿ, ಹಾಗೂ ಸೇನೆಯಲ್ಲಿ ಕಾರ್ಯನಿವರ್ಹಿಸಿದ್ದ ಮದನ ಮಾಸ್ಟರ್ ಅವರು ರಾಜಿ ಪಂಚಾಯಿತಿಯ ಮದ್ಯಸ್ಥಿಕೆದಾರರಾಗಿ ಗಡಿನಾಡಿನಲ್ಲಿ ಜನಪ್ರಿಯತೆ ಪಡೆದವರು.
ಪ್ರಗತಿಪರ ಕೃಷಿಕರಾಗಿದ್ದ ಮದನ ಮಾಸ್ಟರ್ ಅವರು ಸ್ಥಳೀಯವಾಗಿ ಜೇಣು ಸಾಕಾಣಿಕೆಯನ್ನು ಜನಪ್ರಿಯಗೊಳಿಸಿದವರು ಗಡಿನಾಡಿನಲ್ಲಿ ಕನ್ನಡಪರ ಸಂಘಟನೆ, ಸಹಕಾರಿ ಸಂಘಟನೆಯಲ್ಲಿ ಸಕ್ರಿಯರಾಗಿದ್ದವರು.
ಸುಧಾರಣೆ ಕಾನೂನು ಅನುಷ್ಠಾನಕ್ಕೆ ಸ್ವಯಂ ಪ್ರೇರಿತರಾಗಿ ದುಡಿದಿದ್ದ ಮದನ ಮಾಸ್ತರ್ ಅವರು ಗಡಿನಾಡಿನಲ್ಲಿ ನೂರಾರು ಹಿಡುವಳಿದಾರರಿಗೆ ಜಮೀನು ಒದಗಿಸಿಕೊಡುವಲ್ಲಿ ಶ್ರಮಿಸಿದ್ದರು.
ಖಾದಿ ಉಡುಪನ್ನಷ್ಟೇ ಧರಿಸುತ್ತಿದ್ದ ಮದನ ಮಾಸ್ಟರ್ ಅವರು ಪ್ರಖರ ಗಾಂಧೀವಾದಿಯಾಗಿದ್ದರು.
ಕಳೆದ ಗಾಂಧಿ ಜಯಂತಿಯ ದಿನದಂದು ದ.ಕ.ಜಿಲ್ಲಾಡಳಿತವು ಕೆ.ಪಿ.ಮದನ ಮಾಸ್ಟರ್ ಅವರನ್ನು ಮಂಗಳೂರು ಗಾಂಧಿ ಪಾರ್ಕ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೌರವಿಸಿತ್ತು.
ಮಾಸ್ಟರ್ ನಿಧನಕ್ಕೆ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…