ಹಳ್ಳಿಯ ಆಟ ಅಂತಾರಾಷ್ಟ್ರೀಯ ಮಟ್ಟಕ್ಕೆ


Team Udayavani, Jan 13, 2017, 11:54 AM IST

dvg2.jpg

ದಾವಣಗೆರೆ: ಹಳ್ಳಿಗಾಡಿಗೆ ಸೀಮಿತವಾಗಿದ್ದ ಕಬಡ್ಡಿ ಆಟ ಇಂದು ಅಂತಾರಾಷ್ಟ್ರೀಯ ಮಟ್ಟಕ್ಕೆ ಬೆಳೆದಿದೆ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ಗುರುವಾರ ಜಿಲ್ಲಾ ಕ್ರೀಡಾಂಗಣದಲ್ಲಿ ಸೃಷ್ಠಿ ಕಬಡ್ಡಿ ಅಕಾಡೆಮಿ ಆಯೋಜಿಸಿರುವ ಜಿಲ್ಲಾಮಟ್ಟದ ಕಬಡ್ಡಿ ಪೀಮಿಯರ್‌ ಲೀಗ್‌ ಗೆ ಚಾಲನೆ ನೀಡಿ, ಮಾತನಾಡಿದರು.

ಮೊದಲು ಕಬಡ್ಡಿಯನ್ನು ಕೇವಲ ಗ್ರಾಮೀಣ ಪ್ರದೇಶದಲ್ಲಿ ಮಾತ್ರ ಆಡಲಾಗುತ್ತಿತ್ತು. ಕ್ರಮೇಣ ನಗರಮಟ್ಟಕ್ಕೆ ಪರಿಚಯಿಸಲಾಯಿತು. ಇದೀಗ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟಕ್ಕೆ ಈ ಗ್ರಾಮೀಣ ಸೊಗಡಿನ ಕ್ರೀಡೆ ಅಡಿ ಇಟ್ಟಿರುವುದು ಶ್ಲಾಘನೀಯ ಎಂದರು. ದಾವಣಗೆರೆಯಲ್ಲೂ ಕಬಡ್ಡಿಗೆ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ.

ಅನೇಕರು ಈ ಕ್ರೀಡೆಯ ಬೆಳವಣಿಗೆಗೆ ಸಹಕರಿದ್ದಾರೆ. ಅದರಲ್ಲೂ ದಿವಂಗತ ಎಸ್‌.ಎಸ್‌. ಮಂಜುನಾಥ್‌ ಕಬಡ್ಡಿ ಬೆಳವಣಿಗೆಯಲ್ಲಿ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಅವರ ಸ್ಮರಣಾರ್ಥ ಹಮ್ಮಿಕೊಂಡಿರುವ ಪಂದ್ಯಾವಳಿಯಲ್ಲಿ 8 ತಂಡಗಳು ಪಾಲ್ಗೊಳ್ಳಲಿವೆ. ಈ ಪಂದ್ಯಾವಳಿ ಕಬಡ್ಡಿ ಪ್ರಿಯರಿಗೆ ರಂಜನೆ ನೀಡಲಿದೆ ಎಂದು ಅವರು ತಿಳಿಸಿದರು. 

ಈ ಪಂದ್ಯಾವಳಿಯಲ್ಲಿ ಪಾಲ್ಗೊಂಡ ಸೋತ ತಂಡಗಳು ಸೋಲನ್ನು ಬೇಸರವಿಲ್ಲದೆ ಸೀÌಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಜೊತೆಗೆ ಮುಂದೆ ಗೆಲ್ಲುವ ಕುರಿತು ಚಿಂತಿಸಬೇಕು. ಗೆದ್ದವರು ಬೀಗದೆ ಮತ್ತಷ್ಟು ಉತ್ತಮ ಸಾಧನೆ ಮಾಡಲು ಉತ್ಸುಕರಾಗಬೇಕು. ಆಗಲೇ ಕ್ರೀಡೆಗೆ ಇನ್ನಷ್ಟು ಮೆರಗು ಬರುವುದು ಎಂದು ಅವರು ತಿಳಿಸಿದರು. 

ಅಧ್ಯಕ್ಷತೆ ವಹಿಸಿದ್ದ ಮೇಯರ್‌ ರೇಖಾ ನಾಗರಾಜ್‌ ಮಾತನಾಡಿ, ಇಂದು ಕ್ರಿಕೆಟ್‌ಗೆಹೆಚ್ಚಿನ ಪ್ರಾಮುಖ್ಯತೆ ಕೊಡಲಾಗುತ್ತಿದೆ. ಅದರಲ್ಲೂ  ಕಬಡ್ಡಿಗೆ ಜನಪ್ರಿಯತೆ ಇದ್ದರೂ ಸಹ ಪ್ರೋತ್ಸಾಹಸಿಗುತ್ತಿಲ್ಲ. ನಾನು ಸ್ವತಃ ಕಬಡ್ಡಿ ಪಟುವಾಗಿ ರಾಷ್ಟ್ರಮಟ್ಟದಲ್ಲಿ ಆಡಿದ್ದೇನೆ. ನನ್ನ ಅಣ್ಣ, ತಂದೆ ಸಹ ಉತ್ತಮ ಆಟಗಾರರಾಗಿದ್ದರು.

ಎಲ್ಲರಿಗೂ ಅನುಭವಕ್ಕೆ ಬಂದಂತೆ ಕಬಡ್ಡಿಗೆ ಅಷ್ಟೊಂದು ಪ್ರೋತ್ಸಾಹ ಸಿಗುತ್ತಿಲ್ಲ ಎಂದು ಅವರು ಹೇಳಿದರು. ಹಿಂದೆಲ್ಲಾ ಮೈದಾನದಲ್ಲಿ ಆಟವಾಡುತ್ತಿದ್ದರೆ ಎಲ್ಲಾ ಕ್ರೀಡೆಗಳ ಪಟುಗಳು ಕಾಣುತ್ತಿದ್ದರು. ಒಂದು ಕಡೆ ಕಬಡ್ಡಿ, ಇನ್ನೊಂದು ಕಡೆ ವಾಲಿಬಾಲ್‌, ಫುಟ್‌ಬಾಲ್‌ ಹೀಗೆ ತರೇಹವಾರಿ ಕ್ರೀಡೆಗಳನ್ನು ಆಡಲಾಗುತ್ತಿತ್ತು.

ಆದರೆ, ಇಂದು ಎಲ್ಲವೂ ಬದಲಾಗಿ ಹೋಗಿದೆ. ಎಲ್ಲಿ ನೋಡಿದರೂ ಕ್ರಿಕೆಟ್‌ ಆಟ ಮಾತ್ರ ಕಾಣಸಿಗುತ್ತದೆ. ಸಣ್ಣ ಮೈದಾನ, ದೊಡ್ಡ ಮೈದಾನ ಎನ್ನದೇ ಕ್ರಿಕೆಟಿಗರೇ ಇಡೀ ಮೈದಾನ ಆವರಿಸುತ್ತಿದ್ದಾರೆ.ಇದು ಬೇಸರದ ಸಂಗತಿ. ಇಂತಹ ಪರಿಸ್ಥಿತಿಯಲ್ಲಿ ಸೃಷ್ಟಿ ಅಕಾಡೆಮಿ ಕಬಡ್ಡಿ ಆಟ ಬೆಳೆಸಲು ತನ್ನದೇ ಕೊಡುಗೆ ನೀಡುತ್ತಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು. 

ಕೆಪಿಎಲ್‌ ಸಂಘಟನಾ ಸಮಿತಿಯ ಅಧ್ಯಕ್ಷ ಎಂ. ದೊಡ್ಡಪ್ಪ, ಪಾಲಿಕೆ ಸದಸ್ಯರಾದ ದಿನೇಶ್‌ ಕೆ. ಶೆಟ್ಟಿ, ಶೋಭ ಪಲ್ಲಾಗಟ್ಟೆ, ಕ್ರೀಡೆ ಮತ್ತು ಯುವಜನ ಸಬಲೀಕರಣ ಇಲಾಖೆ ಸಹಾಯಕ ನಿರ್ದೇಶಕ ಬಿ. ಶ್ರೀನಿವಾಸ, ಮುಖಂಡರಾದ ಎ. ನಾಗರಾಜ, ಕೊಂಡಜ್ಜಿ ಜಯಪ್ರಕಾಶ್‌, ಬಿ. ಶಿವಕುಮಾರ್‌, ಸಂಕೋಳ್‌ ಚಂದ್ರಶೇಖರ್‌, ಸಿಪಿಐಗಳಾದ ಸಂಗನಾಳ್‌, ಜಿ.ಬಿ.ಉಮೇಶ್‌ ಇತರರು ವೇದಿಕೆಯಲ್ಲಿದ್ದರು. ಕೆಎಸ್‌ಐಸಿ ಮಾಜಿ ಅಧ್ಯಕ್ಷ  ಡಿ. ಬಸವರಾಜ ಪ್ರಾಸ್ತಾವಿಕ ನುಡಿಗಳನ್ನಾಡಿದರು.  

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.