ಕಳಪೆ ಆಹಾರ ಆರೋಪ ತನಿಖೆಯಾಗಲಿ: ಸಿಪಿಐ ಕಾರ್ಯಕರ್ತರ ಆಗ್ರಹ
Team Udayavani, Jan 14, 2017, 12:16 PM IST
ದಾವಣಗೆರೆ: ಗಡಿ ಭದ್ರತಾ ಪಡೆ ಯೋಧರಿಗೆ ಗುಣಮಟ್ಟದ ಪೌಷ್ಟಿಕ ಆಹಾರ ಪೂರೈಕೆ, ಸಂಸದ ಅನಂತ್ಕುಮಾರ್ ಹೆಗಡೆ ವಿರುದ್ಧ ಕ್ರಮ ಒಳಗೊಂಡಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಜಿಲ್ಲಾ ಸಿಪಿಐ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಗಡಿ ಭದ್ರತಾ ಪಡೆ ಯೋಧರಿಗೆ ಅಧಿಕಾರಿಗಳು ಕಳಪೆ ಗುಣಮಟ್ಟದ ಆಹಾರ ಪೂರೈಕೆ ಬಗ್ಗೆ ಯೋಧ ತೇಜ್ ಬಹದ್ದೂರ್ ಯಾದವ್ ಮಾಡಿರುವ ಆರೋಪವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿ, ಆ ಸಂಬಂಧ ಕೂಲಂಕುಷ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ತಮ್ಮ ತಾಯಿಗೆ ಬೇಗ ಚಿಕಿತ್ಸೆ ಕೊಡಲಿಲ್ಲ ಎಂಬ ಕಾರಣಕ್ಕೆ ಶಿರಸಿಯ ಖಾಸಗಿ ಆಸ್ಪತ್ರೆ ವೈದ್ಯರ ಮೇಲೆ ಹಲ್ಲೆ ನಡೆಸಿರುವ ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಸರ್ಕಾರ ಕೂಡಲೇ ಕಠಿಣ ಕ್ರಮ ತೆಗೆದು ಕೊಳ್ಳಬೇಕು. ಎಲ್ಲಾ ವೈದ್ಯ ಸಮುದಾಯಕ್ಕೆ ಸೂಕ್ತ ರಕ್ಷಣೆ, ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿದರು.
ರಾಜ್ಯ ಸರ್ಕಾರ ಆಯ್ದ ಕುಟುಂಬಗಳಿಗೆ ಪಡಿತರದ ಬದಲಿಗೆ ತಿಂಗಳಿಗೆ 800 ರೂಪಾಯಿ ನಗದು ನೀಡುವ ಯೋಜನೆ ಜಾರಿಗೆ ಮುಂದಾಗಿರುವುದನ್ನು ನೋಡಿದರೆ ಮುಂದೊಮ್ಮೆ ಇಡೀ ಯೋಜನೆಯನ್ನೇ ನಿಲ್ಲಿಸುವ ಹುನ್ನಾರ ಹೊಂದಿದೆ. ಪಡಿತರ ಬದಲಿಗೆ ನಗದು ನೀಡುವಂಥಹ ಪದ್ಧತಿ ಕೈ ಬಿಡಬೇಕು.
ಕುಟಂಬಕ್ಕೆ ಅಗತ್ಯವಾದ ಪಡಿತರ ವಿತರಿಸುವಂತಾಗಬೇಕು ಎಂದು ಒತ್ತಾಯಿಸಿದರು. ರಾಣೆಬೆನ್ನೂರಿನ ಕೆಎಸ್ಸಾರ್ಟಿಸಿ ಘಟಕದ ಕಾವಲುಗಾರ ಲಿಂಗರಾಜ್ ಎಂಬುವರನ್ನು ಕಟ್ಟಿ ಹಾಕಿ, ಬೆಂಕಿ ಹಚ್ಚಿ ಕೊಲೆ ಮಾಡಿರುವ ದುಷ್ಕರ್ಮಿಗಳನ್ನು ಬಂಧಿಸಿ, ಕಠಿಣ ಶಿಕ್ಷೆಗೆ ಒಳಪಡಿಸಬೇಕು. ಮೃತನ ಕುಟುಂಬ ಸದಸ್ಯರೊಬ್ಬರಿಗೆ ಉದ್ಯೋಗದ ಜೊತೆಗೆ 15 ಲಕ್ಷ ಪರಿಹಾರ ನೀಡಬೇಕು ಎಂದರು.
ಕೇಂದ್ರ ಸರ್ಕಾರ ನ. 8 ರಂದು ನೋಟು ಅಮಾನ್ಯದ ನಂತರ ತಮ್ಮ ಹಣ ಬದಲಾವಣೆ, ಪಡೆಯುವುದಕ್ಕೆ ಸರತಿ ಸಾಲಲ್ಲಿ ನಿಂತಹರವಲ್ಲಿ ಕೆಲವರು ಮೃತಪಟ್ಟರು. ಬ್ಯಾಂಕ್ ಅಧಿಕಾರಿಗಳು ಸಹ ಸಾವನ್ನಪ್ಪುವಂತಾಯಿತು. ಆ ಎಲ್ಲಾ ಕುಟುಂಬಕ್ಕೆ 15 ಲಕ್ಷ ಪರಿಹಾರ ಕೊಡುವುದು ಒಳಗೊಂಡಂತೆ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್.ಕೆ. ರಾಮಚಂದ್ರಪ್ಪ, ನಗರಪಾಲಿಕೆ ಸದಸ್ಯ ಆವರಗೆರೆ ಎಚ್.ಜಿ. ಉಮೇಶ್, ಎಚ್. ಆನಂದರಾಜ್, ಆವರಗೆರೆ ಚಂದ್ರು, ಆವರಗೆರೆ ವಾಸು, ಐರಣಿ ಚಂದ್ರು, ಎನ್.ಟಿ. ಬಸವರಾಜ್, ಹನುಮಂತಪ್ಪ, ವಿಮಲಾಕ್ಷಿ, ಜಯಮ್ಮ, ಅನಸೂಯ, ಅಂಬುಜಾ, ಸಿದ್ದಮ್ಮ, ಸಾವಿತ್ರ, ಭಾಗ್ಯಲಕ್ಷ್ಮಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್