ದಿನೇಶ್‌ ಗುಂಡೂರಾವ್‌ ಕ್ಷಮೆಯಾಚಿಸಲಿ


Team Udayavani, Feb 15, 2017, 1:02 PM IST

dvg2.jpg

ದಾವಣಗೆರೆ: ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪನವರ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ನೀಡಿರುವ ಹೇಳಿಕೆ ತಕ್ಷಣ ಹಿಂಪಡೆದು, ಸಾರ್ವಜನಿಕವಾಗಿ ಬೇಷರತ್ತು ಕ್ಷಮೆಯಾಚಿಸದಿದ್ದಲ್ಲಿ  ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಎಚ್ಚರಿಸಿದ್ದಾರೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಯಡಿಯೂರಪ್ಪನವರ ಕುರಿತು ದಿನೇಶ್‌ ಗುಂಡೂರಾವ್‌ ಬಳಸಿರುವಂತಹ ಪದಗಳು ಅತ್ಯಂತ ಖಂಡನೀಯ. ದಿನೇಶ್‌ ಗುಂಡೂರಾವ್‌ಗೆ ಯಡಿಯೂರಪ್ಪ ಬಗ್ಗೆ ಮಾತನಾಡುವ ನೈತಿಕ ಹಕ್ಕೇ ಇಲ್ಲ.

ಏಕೆಂದರೆ ಸ್ವತಃ ಅವರ ವಿರುದ್ಧವೇ ಭ್ರಷ್ಟಾಚಾರದ ಆರೋಪಗಳು ಇವೆ. ಆ ಕಾರಣಕ್ಕಾಗಿಯೇ ಅವರನ್ನು ಸಚಿವ ಸ್ಥಾನದಿಂದ ತೆಗೆದು, ನೆಪ ಮಾತ್ರಕ್ಕೆ ಕಾರ್ಯಾಧ್ಯಕ್ಷರನ್ನಾಗಿ ಮಾಡಲಾಗಿದೆ ಎಂದು ಹರಿಹಾಯ್ದರು. ಈ ಹಿಂದೆ ಆಹಾರ ಇಲಾಖೆ ಸಚಿವರಾಗಿದ್ದ ದಿನೇಶ್‌ ಗುಂಡೂರಾವ್‌ ಪಡಿತರ ವ್ಯವಸ್ಥೆಯನ್ನೇ ಸರಿ ಮಾಡಲಾಗಲಿಲ್ಲ.

ಅರ್ಹ ಪಡಿತರದಾರರನ್ನು ಗುರುತಿಸಿ, ಕಾರ್ಡ್‌ ಕೊಡಿಸಲಿಕ್ಕಾಗಲಿಲ್ಲ. ಅಂತಹವರು ಯಡಿಯೂರಪ್ಪ ವಿರುದ್ಧ ಮಾತನಾಡುತ್ತಾರೆ. ಕಾಂಗ್ರೆಸ್‌ನಲ್ಲಿಯೇ ಜನಾರ್ದನ ಪೂಜಾರಿ, ದಿನೇಶ್‌ ಗುಂಡೂರಾವ್‌ ಅವರಂತಹ ಮಾನಸಿಕ ಅಸ್ವಸ್ಥರಿದ್ದಾರೆ. ದಿನೇಶ್‌ ಗುಂಡೂರಾವ್‌ ಯಡಿಯೂರಪ್ಪ ಅವರಂತಹ ಹಿರಿಯರ ಬಗ್ಗೆ ಮಾತನಾಡುವಾಗ ನಾಲಿಗೆ ಬಿಗಿ ಹಿಡಿದು ಮಾತನಾಡಬೇಕು ಎಂದು ತಾಕೀತು ಮಾಡಿದರು. 

ಡಾ| ಮನಮೋಹನ್‌ಸಿಂಗ್‌ ನೇತೃತ್ವದ ಯುಪಿಎ ಸರ್ಕಾರವಿದ್ದಾಗ 2 ಜಿ ಸ್ಪೆಕ್ಟ್ರಂ, ಕಲ್ಲಿದ್ದಲು ಹಗರಣ, ಭ್ರಷ್ಟಾಚಾರದ ಮೂಲಕ ಭಾರತ ಇಡೀ ವಿಶ್ವದ ಗಮನ ಸೆಳೆದಿತ್ತು. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹಗರಣ, ಭ್ರಷ್ಟಾಚಾರದಿಂದ ಈಗ ದೇಶದ ಗಮನ ಸೆಳೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್‌ ಹೈಕಮಾಂಡ್‌ಗೆ ಸಾವಿರ ಕೋಟಿ ನೀಡಿದ್ದಾರೆ ಎಂಬುದಾಗಿ ಆರೋಪಿಸಿರುವ ಬಿಎಸ್‌ವೈ ಬಗ್ಗೆ ಕಾಂಗ್ರೆಸ್‌ನ ಕೆಲವು ಮುಖಂಡರು ಉಡಾಫೆಯಾಗಿ, ಹಗುರವಾಗಿ ಮಾತನಾಡಿದ್ದಾರೆ. 

ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಡ್ರೆಸ್‌ಗೆ ಇಲ್ಲದಂತಾಗುತ್ತದೆ ಎಂದು ಹೇಳಿದರು. ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಜಯಚಂದ್ರ, ಚಿಕ್ಕರಾಯಪ್ಪ ಅವರಂತಹ ಅಧಿಕಾರಿಗಳ ಬಳಿಯೇ ಕೋಟ್ಯಂತರ ಅಕ್ರಮ ಆಸ್ತಿ ದೊರೆತಿದೆ. ಸಚಿವ ರಮೇಶ್‌ ಜಾರಕಿಹೊಳಿ, ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಲಕ್ಷ್ಮಿ ಹೆಬ್ಟಾಳಕರ್‌ ಮನೆಯಲ್ಲಿ 165 ಕೋಟಿ, ಶಾಸಕ ಎಂ.ಟಿ.ಬಿ. ನಾಗರಾಜ್‌ ಮನೆಯಲ್ಲಿ 120 ಕೋಟಿಗೂ ಅಧಿಕ ಅಕ್ರಮ ಆಸ್ತಿ ದೊರೆತಿದೆ.

ಆ ಬಗ್ಗೆ ದಿನೇಶ್‌ ಗುಂಡೂರಾವ್‌ ಮಾತನಾಡುವುದಿಲ್ಲ. ನಾಲ್ಕು ವರ್ಷದಿಂದ ಅಧಿಕಾರ  ನಡೆಸುತ್ತಿರುವ ಕಾಂಗ್ರೆಸ್‌ ಸರ್ಕಾರ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ಬರದಲ್ಲಿರುವ ಜನರಿಗೆ ಸ್ಪಂದಿಸುತ್ತಿಲ್ಲ. ಇದೊಂದು ಭ್ರಷ್ಟಾಚಾರ ಕರ್ಮಕಾಂಡ ಸರ್ಕಾರ ಎಂದು ಜರಿದರು. ವಿಧಾನ ಪರಿಷತ್‌ ಸದಸ್ಯ ಕೆ. ಗೋವಿಂದರಾಜ್‌  ಮನೆಯಲ್ಲಿ ಡೈರಿ ಸಿಕ್ಕಿರುವುದು, ಕಾಂಗ್ರೆಸ್‌ ಹೈಕಮಾಂಡ್‌ಗೆ ಹಣ ಹೋಗಿರುವುದನ್ನು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ. 

ಯಡಿಯೂರಪ್ಪ ನವರ ವಿರುದ್ಧದ ಸಿಡಿ ಠುಸ್‌ ಪಟಾಕಿ ಆಗಿದೆ. ಕಾಂಗ್ರೆಸ್‌ ಮುಖಂಡರು ಯಡಿಯೂರಪ್ಪನವರ ಆರೋಪವನ್ನು ಸವಾಲಾಗಿ ಸೀÌಕರಿಸಬೇಕು. ಡೈರಿಯ ಬಗ್ಗೆ ಸಮಗ್ರ ತನಿಖೆಗೆ ಒಳಪಡಿಸಿ, ತಪ್ಪಿತಸ್ಥರು ಯಾರಿಯೇ ಆಗಲಿ, ಸತ್ಯಾಸತ್ಯತೆ ಹೊರ ಬರುವಂತಾಗಲಿ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಒತ್ತಾಯಿಸಿದರು. ಪಕ್ಷದ ಜಿಲ್ಲಾ ಅಧ್ಯಕ್ಷ ಯಶವಂತರಾವ್‌ ಜಾಧವ್‌, ಸಿ. ರಮೇಶ್‌ನಾಯ್ಕ, ರಾಜನಹಳ್ಳಿ ಶಿವಕುಮಾರ್‌, ಎನ್‌. ರಾಜಶೇಖರ್‌, ಕೂಲಂಬಿ ಬಸವರಾಜ್‌, ಟಿಂಕರ್‌ ಮಂಜಣ್ಣ ಇತರರು ಸುದ್ದಿಗೋಷ್ಠಿಯಲ್ಲಿದ್ದರು. 

ಟಾಪ್ ನ್ಯೂಸ್

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.