ಹೊನ್ನಾಳಿ ಗಲಭೆ: ನಾಲ್ವರ ಬಂಧನ


Team Udayavani, Feb 17, 2017, 1:23 PM IST

dvg7.jpg

ದಾವಣಗೆರೆ: ಹೊನ್ನಾಳಿಯಲ್ಲಿ ಬುಧವಾರ ನಡೆದ ಪೊಲೀಸ್‌ ಠಾಣೆಗೆ ಮುತ್ತಿಗೆ, ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಡಾ| ಭೀಮಾಶಂಕರ್‌ ಎಸ್‌. ಗುಳೇದ್‌ ತಿಳಿಸಿದ್ದಾರೆ. ಪೊಲೀಸರು ಸಂತ ಸೇವಾಲಾಲ್‌ ಮಾಲಾಧಾರಿಗಳ ಮೇಲೆ ಹಲ್ಲೆ ನಡೆಸಿಲ್ಲ. 

ಪೊಲೀಸರೊಂದಿಗೆ ವಾಗ್ವಾದಕ್ಕೆ ಇಳಿದಿದ್ದವನು ಟ್ರ್ಯಾಕ್ಟರ್‌ ಚಾಲಕ ಮತ್ತು ಇತರೆ ಕೆಲವರೆ ಹೊರತು ಮಾಲಾಧಾರಿಗಳಲ್ಲ. ಪೊಲೀಸರು ಬೂಟುಗಾಲಿನಿಂದ ಹೊಡೆದಿಲ್ಲ. ಅದು ಬರೀ ವದಂತಿ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದರು. ಸೂರಗೊಂಡನಕೊಪ್ಪ ಗ್ರಾಮದಲ್ಲಿ ಭೋಗ್‌ ಕಾರ್ಯಕ್ರಮ ಮುಗಿಸಿಕೊಂಡು ತಮ್ಮ ಊರಿಗೆ ವಾಪಾಸ್ಸಾಗುತ್ತಿದ್ದ ಕೆಲವರು ಹೊನ್ನಾಳಿಯ ಖಾಸಗಿ ಬಸ್‌ ನಿಲ್ದಾಣದ ಬಳಿ ರಸ್ತೆ ಮಧ್ಯದಲ್ಲಿ ತಾವಿದ್ದ ಟ್ರ್ಯಾಕ್ಟರ್‌ ನಿಲ್ಲಿಸಿದ್ದರು.

ಸಂಚಾರಕ್ಕೆ ಅಡ್ಡಿಯಾಗುತ್ತಿದ್ದರಿಂದ ಅಲ್ಲಿಂದ ಟ್ರ್ಯಾಕ್ಟರ್‌ ತೆರವುಗೊಳಿಸುವಂತೆ ನಮ್ಮ ಸಿಬ್ಬಂದಿ ಹೇಳಿದರು. ಅಷ್ಟಕ್ಕೆ ಸಿಬ್ಬಂದಿಯೊಂದಿಗೆ ಮಾತಿನ ಚಕಮಕಿ ನಡೆದು, ಸಿಬ್ಬಂದಿಯನ್ನು ಥಳಿಸಿದ್ದಾರೆ. ಆಗ ಟ್ರ್ಯಾಕ್ಟರ್‌ನ್ನು ಠಾಣೆಗೆ ತಂದು, ಕಾನೂನು ಕ್ರಮಕ್ಕೆ ಪೊಲೀಸರು ಮುಂದಾಗಿದ್ದರು. ಈ ಮಧ್ಯೆ ಮಾಲಾಧಾರಿಗಳಿಗೆ ಹಲ್ಲೆ ನಡೆಸಿದ್ದಾರೆ ಎಂಬುದಾಗಿ ವದಂತಿ ಹರಡಿ, 7-8 ಸಾವಿರ ಮಂದಿ ಠಾಣೆ ಮುಂದೆ ಜಮಾಯಿಸಿ, ಕಲ್ಲು ತೂರಾಟದಲ್ಲಿ ತೊಡಗಿದ್ದರು.

ಪರಿಸ್ಥಿತಿ ನಿಯಂತ್ರಣಕ್ಕೆ 3 ಸುತ್ತಿನ ಅಶ್ರುವಾಯು ಸಿಡಿಸಲಾಯಿತು. ಅಲ್ಲಿಗೂ ಗಲಾಟೆ ಕಡಿಮೆಯಾಗದಿದ್ದರಿಂದ ಫೈರಿಂಗ್‌ ಅನಿವಾರ್ಯವಾಗಲಿದೆ ಎಂಬುದಾಗಿ ಎಚ್ಚರಿಸಿದ್ದರಿಂದ ಜನರು ಚದುರಿದರು ಎಂದು ತಿಳಿಸಿದರು. ಘಟನೆಗೆ ಸಂಬಂಧಿಸಿದಂತೆ ದೊಂಬಿ, ಕರ್ತವ್ಯಕ್ಕೆ ಅಡ್ಡಿ, ಗುಂಪು ಕಟ್ಟಿಕೊಂಡು ಕಾನೂನು ಬಾಹಿರ ಕ್ರಮಕ್ಕೆ ಮುಂದಾಗಿದ್ದರ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಈವರೆಗೆ ನಾಲ್ವರನ್ನು ಬಂಧಿಸಲಾಗಿದೆ.

ಇಡೀ ಘಟನೆಯ ವೀಡಿಯೋ ಚಿತೀಕರಣ ಮಾಡಲಾಗಿದೆ. ಅದರ ಆಧಾರದಲ್ಲಿ ಘಟನೆಗೆ ಕಾರಣರಾದವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ಅಮಾಯಕರನ್ನು ಬಂಧನಕ್ಕೆ ಒಳಪಡಿಸಿದ್ದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು. ಜೋರಾಗಿ ಟೇಪ್‌ ರೆಕಾರ್ಡ್‌ ಹಾಕಿಕೊಂಡು, ರಸ್ತೆ ಮಧ್ಯೆ ಟ್ರ್ಯಾಕ್ಟರ್‌ ನಿಲ್ಲಿಸಿ, ಹೋಟೆಲ್‌ ಗೆ ಹೋಗಿದ್ದರಿಂದ ಜನರಿಗೆ ಅಡಚಣೆಯಾಗುತ್ತಿತ್ತು. ಹಾಗಾಗಿ ಟ್ರ್ಯಾಕ್ಟರನ್ನು ಮುಂದಕ್ಕೆ ಬಿಡುವಂತೆ ಅಲ್ಲಿದ್ದ ಪೇದೆ ಹೇಳಿದ್ದರು ಅಷ್ಟೇ.

ಆ ಪೇದೆ ತಮ್ಮ ಕರ್ತವ್ಯ ನಿಭಾಯಿಸಿದ್ದಾರೆ. ಘಟನೆಗೆ ಸಂಬಧಿಸಿದಂತೆ ಹೊನ್ನಾಳಿ ತಹಶೀಲ್ದಾರ್‌ ಅವರು ಸ್ಥಳ ತನಿಖೆ ನಡೆಸಿ, ವರದಿ ಸಹ ಸಲ್ಲಿಸಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಯಶೋಧಾ ಎಸ್‌. ವಂಟಿಗೋಡಿ, ನಗರ ಪೊಲೀಸ್‌ ಉಪಾಧೀಕ್ಷಕ ಕೆ. ಅಶೋಕ್‌ ಕುಮಾರ್‌, ವೃತ್ತ ನಿರೀಕ್ಷಕ ಸಂಗನಾಥ್‌, ಪಿಎಸ್‌ಐಗಳಾದ ಡಿ.ಎಂ. ಭವ್ಯ, ವೈ.ಎಸ್‌. ಶಿಲ್ಪ ಸುದ್ದಿಗೋಷ್ಠಿಯಲ್ಲಿದ್ದರು.   

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.