20ರಂದು ಬಿಜೆಪಿ ಬೃಹತ್ ಪ್ರತಿಭಟನೆ
Team Udayavani, Feb 18, 2017, 1:23 PM IST
ದಾವಣಗೆರೆ: ರಾಜ್ಯ ಸರ್ಕಾರದ ಭ್ರಷ್ಟಾಚಾರ, ಹಗರಣಗಳ ಸರಮಾಲೆ ವಿರೋಧಿಸಿ ಫೆ. 20 ರಂದು ಬೃಹತ್ ಪ್ರತಿಭಟನೆ ಹಮ್ಮಿಧಿ ಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ಯಶವಂತರಾವ್ ಜಾಧವ್ ತಿಳಿಸಿದ್ದಾರೆ. ಸೋಮವಾರ ಬೆಳಗ್ಗೆ 11ಕ್ಕೆ ಪಕ್ಷದ ಜಿಲ್ಲಾ ಕಚೇರಿಯಿಂದ ಉಪ ವಿಭಾಗಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿ, ಉಪ ವಿಭಾಗಾಧಿಕಾರಿ ಕಚೇರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ರಾಜ್ಯದಲ್ಲಿ ಬಿಜೆಪಿ ಆಡಳಿತಾವಧಿಯಲ್ಲಿ ವಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯನವರು ಬೆಂಗಳೂರಿನಿಂದ ಬಳ್ಳಾರಿಯವರೆಗೆ ಪಾದಯಾತ್ರೆ ನಡೆಸಿದರು. ಭ್ರಷ್ಟಾಚಾರ, ಹಗರಣಗಳ ವಿರುದ್ಧ ನಿರಂತರ ಹೋರಾಟ ನಡೆಸುವುದಾಗಿ ವಿಧಾನ ಸೌಧದಲ್ಲೇ ತೊಡೆ ತಟ್ಟಿದ್ದರು. ಈಗ ಅದೇ ಸಿದ್ದರಾಮಯ್ಯನವರೇ ಖುದ್ದು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಉಡುಗಡೆಯಾಗಿ ಪಡೆದಿದ್ದ ದುಬಾರಿ ವಾಚ್ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡಾಫೆಯಾಗಿ ಉತ್ತರ ನೀಡಿದ್ದರು.
ಅದು ಉಡುಗರೆ ವಾಚ್ ಎಂಬುದಾಗಿ ಹೇಳಳು ಒಂದು ವಾರ ತೆಗೆದುಕೊಂಡರು ಎಂದು ವ್ಯಂಗ್ಯವಾಡಿದರು. ಸಿದ್ದರಾಮಯ್ಯ ಮಂತ್ರಿ ಮಂಡಲ ದಲ್ಲಿರುವ ಸಚಿವ ರಮೇಶ್ ಜಾರಕಿಹೊಳಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲಕ್ಷ್ಮಿ ಹೆಬ್ಟಾಳಕರ್, ಶಾಸಕ ಎಂ.ಟಿ.ಬಿ. ನಾಗರಾಜ್ ಮನೆ ಮೇಲೆ ನಡೆದ ಐಟಿ ದಾಳಿ ಸಂದರ್ಭದಲ್ಲಿ ಕೋಟ್ಯಾಂತರ ಮೊತ್ತದ ಅಕ್ರಮ ಆಸ್ತಿ ಪತ್ತೆಯಾಯಿತು. ಅವರ ಆಪ್ತ ಅಧಿಕಾರಿಧಿ ಗಳಾದ ಜಯಚಂದ್ರ, ಚಿಕ್ಕರಾಯಪ್ಪ ಬಳಿಯೂ ಅಕ್ರಮ ಆಸ್ತಿ ಪತ್ತೆಯಾದರೂ ಈವರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದೇ ಒಂದು ಮಾತನಾಡಿಲ್ಲ.
ಕ್ರಮದ ಬಗ್ಗೆ ಅಪ್ಪಿತಪ್ಪಿಯೂ ಹೇಳಿಲ್ಲ. ಇದನೆಲ್ಲಾ ನೋಡಿದರೆ ಎಲ್ಲಿಯೋ ಒಂದು ಕಡೆ ಅವರೇ ಪ್ರತ್ಯಕ್ಷ ಸಹಕಾರ ಇದೆ ಎಂದೆನೆಸುತ್ತಿದೆ ಎಂದು ದೂರಿದರು. ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸುವ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯನವರ ಸರ್ಕಾರ ಬರೀ ಹಗರಣದಲ್ಲಿ ಮುಳುಗಿದೆ. ಬರದಿಂದ ತತ್ತರಿಸಿರುವ ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ.
1 ಸಾವಿರಕ್ಕೂ ಅಧಿಕ ರೈತರು ಆತ್ಮಹತ್ಯೆಗೆ ಒಳಗಾಗಿದ್ದರೂ ಒಬ್ಬ ರೈತರ ಮನೆಗೆ ಭೇಟಿ ನೀಡಿಲ್ಲ. ಯಾವುದೇ ಜಿಲ್ಲಾ ಉಸ್ತುವಾರಿ ಸಚಿವರು ಬರದ ಪರಿಸ್ಥಿತಿ ನಿರ್ವಹಣೆಯತ್ತ ಗಮನ ನೀಡುತ್ತಿಲ್ಲ. ಸರ್ಕಾರ ಇಡೀರಾಜ್ಯವನ್ನು ಹಾಳುಕೊಂಪೆಯನ್ನಾಗಿ ಮಾಡುತ್ತಿದೆ. ಭ್ರಷ್ಟಾಚಾರ, ಹಗರಣದ ಸರ್ಕಾರ ತೊಲಗಿಸುವ ನಿಟ್ಟಿನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಕೇಂದ್ರದ ಬಿಜೆಪಿ ಸರ್ಕಾರ ಕೇವಲ ಕಾಂಗ್ರೆಸ್ನವರನ್ನೇ ಗುರಿಯಾಗಿಟ್ಟುಕೊಂಡು ಐಟಿ ದಾಳಿ ನಡೆಸುತ್ತಿಲ್ಲ.
ಅಕ್ರಮ ಆಸ್ತಿ ಇದ್ದವರ ಮೇಲೆ ದಾಳಿ ನಡೆಸಲಾಗುತ್ತಿದೆ. ಬೇಕಾದಲ್ಲಿ ಬಿಜೆಪಿ ಮುಖಂಡರ ಬಗ್ಗೆಯೂ ಐಟಿ ಇಲಾಖೆಗೆ ಮಾಹಿತಿ ನೀಡಲಿ. ಬೇಡ ಎನ್ನುವರು ಯಾರು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ತಾಪಂ ಸದಸ್ಯ ಆಲೂರು ನಿಂಗರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ. ರಮೇಶ್ನಾಯ್ಕ, ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷ ಪಿ.ಸಿ. ಶ್ರೀನಿವಾಸ್, ವಕ್ತಾರ ಕೊಂಡಜ್ಜಿ ಜಯಪ್ರಕಾಶ್, ಕೆ. ಹೇಮಂತ್ ಕುಮಾರ್, ಎಚ್.ಎಸ್. ಲಿಂಗರಾಜ್, ಸೊಕ್ಕೆ ನಾಗರಾಜ್, ಎನ್. ರಾಜಶೇಖರ್, ಧನುಶ್, ಅರುಣ್ ಇತರರು ಸುದ್ದಿಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್ಗೆ ಜೀವ ಬೆದರಿಕೆ
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ