ಯುವಜನತೆಗೆ ಎನ್‌ಎಂಜೆಬಿ ಆರಾಧ್ಯರು ಪ್ರೇರಣೆ


Team Udayavani, Feb 18, 2017, 2:47 PM IST

dvg6.jpg

ಹರಿಹರ: ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ ರಹಿತ, ಪ್ರಾಮಾಣಿಕ ಹಾಗೂ ಪಾರದರ್ಶಕ ಸೇವೆ ಸಲ್ಲಿಸಿ ಸಹಕಾರಿ ರತ್ನ ಪ್ರಶಸ್ತಿ ಪುರಸ್ಕೃತರಾದ ಎನ್‌ಎಂಜೆಬಿ ಆರಾಧ್ಯ ಅವರ ಸಾಧನೆ ವಿದ್ಯಾರ್ಥಿಗಳು ಸೇರಿದಂತೆ ಎಲ್ಲಾ ಯುವಜನತೆಗೆ ಪ್ರೇರಣೆಯಾಗಬೇಕು ಎಂದು ವಿಧಾನಸಭೆ ಸ್ಪೀಕರ್‌ ಕೆ.ಬಿ.ಕೋಳಿವಾಡ ಅಭಿಪ್ರಾಯಪಟ್ಟರು. 

ನಗರದ ಎಸ್‌ಜೆವಿಪಿ ಸ್ವಾಯತ್ತ ಕಾಲೇಜಿನಲ್ಲಿ ಶ್ರೀಜಗದ್ಗುರು ಪಂಚಾಚಾರ್ಯ ವಿಶ್ವಧರ್ಮ ವಿದ್ಯಾಪೀಠದಿಂದ ಲಿಂ| ವಾಗೀಶ ಪಂಡಿತಾರಾಧ್ಯ ಶ್ರೀಗಳ ಸಂಸ್ಮರಣೆ ನಿಮಿತ್ತ ನೀಡಲಾಗುವ ಪ್ರಸಕ್ತ ವರ್ಷದ “ಸಮನ್ವಯ ಸಿರಿ ರಾಷ್ಟ್ರೀಯ ಪ್ರಶಸ್ತಿ ಹಾಗೂ ಸೇವಾಭೂಷಣ ಪ್ರಶಸ್ತಿ ಪ್ರದಾನ’ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. 

ಯಾವುದೇ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದವರನ್ನು ಸತ್ಕರಿಸುವುದು ಸಮಾಜದ ಕರ್ತವ್ಯ. ಇದರಿಂದ ಸಾಧಕರಿಗೆ ಗೌರವಿಸಿದಂತಾಗವುದಲ್ಲದೆ, ಇತರರಿಗೂ ಸಹ ಅವರಂತೆ ಸಾಧನೆ ಮಾಡುವ ಹಂಬಲ ಮೂಡಿಸುತ್ತದೆ. ಅದೆ ರೀತಿ ಎಲ್ಲಾ ಜನವರ್ಗದವರೊಂದಿಗೆ ಬೆರೆತು, ಅಪಾರ ಸಾಮಾಜಿಕ ಕಳಕಳಿಯೊಂದಿಗೆ ಸೇವೆ ಸಲ್ಲಿಸುತ್ತಿರುವ ಆರಾಧ್ಯರಿಗೆ ಸಮನ್ವಯ ಸಿರಿ ಪ್ರಶಸ್ತಿ ನೀಡುತ್ತಿರುವುದು ಯುವ ಪೀಳಿಗೆಗೆ ಪ್ರೇರಣೆಯಾಗಲಿದೆ.

ಎಸ್‌ಜೆಪಿವಿ ವಿದ್ಯಾಪೀಠಕ್ಕೆ ಸರ್ಕಾರದಿಂದ ಅಗತ್ಯ ಅನುದಾನ ಕೊಡಿಸಲು ಪ್ರಯತ್ನಿಸುವುದಾಗಿ ತಿಳಿಸಿದರು. ಶಾಸಕ ಎಚ್‌.ಎಸ್‌. ಶಿವಶಂಕರ್‌ ಮಾತನಾಡಿ, ಶ್ರೀಶೈಲ ಪೀಠದಿಂದ ಪ್ರತಿವರ್ಷ ಮಹನೀಯರಿಗೆ ಸತ್ಕರಿಸುತ್ತಿರುವುದು ಇತರೆ ಪೀಠಗಳಿಗೆ ಮಾದರಿಯಾಗಿದೆ. ಪ್ರಶಸ್ತಿ, ಪುರಸ್ಕಾರಗಳಿಂದ ಸಾಮಾಜಿಕ ಜವಾಬ್ದಾರಿ ಹೆಚ್ಚಾಗುತ್ತದೆ.

ಸಾಧನೆ ಸಾಧಕರ ಸೊತ್ತು, ಪ್ರಶಸ್ತಿಗಳು ಸಾಧಕರನ್ನು ಹುಡುಕಿಕೊಂಡು ಬರುತ್ತವೆ ಎಂಬುವುದಕ್ಕೆ ಆರಾಧ್ಯ ಅವರ ಜೀವನ ಸಾಕ್ಷಿ ಎಂದರು. ಸಾನ್ನಿಧ್ಯ ವಹಿಸಿದ್ದ ಶ್ರೀಶೈಲ ಡಾ|ಚನ್ನಸಿದ್ದರಾಮ ಪಂಡಿತಾರಾಧ್ಯ ಶ್ರೀಗಳು ಮಾತನಾಡಿ, ವ್ಯಕ್ತಿಯೊಬ್ಬನನ್ನು ಯೋಗ್ಯತೆಯ ಮೂಲದಲ್ಲಿ, ಪ್ರೋತ್ಸಾಹದ ಮೂಲದಲ್ಲಿ, ಆಶಾ ಮೂಲದಲ್ಲಿ ಮತ್ತು ಭಯ ಮೂಲದಲ್ಲಿ ಸನ್ಮಾನಿಸಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಆರಾಧ್ಯರ ಯೋಗ್ಯತೆ, ಅರ್ಹತೆ ಹಾಗೂ ಸಾಮಾಜಮುಖೀ  ಸೇವೆ ಮನಗೊಂಡು ಈ ಪ್ರಶಸ್ತಿ ನೀಡಲಾಗಿದೆ ಎಂದರು. ಎನ್‌ಎಂಜೆಬಿ ಆರಾಧ್ಯ ಸಮನ್ವಯ ಪ್ರಶಸ್ತಿ ಹಾಗೂ ಎಸ್‌ಜೆಪಿವಿವಿ ಪೀಠದ ನಿರ್ದೇಶಕ ಜೆ.ಡಿ. ಹೆಗ್ಗಪ್ಪನವರ, ವಾಣಿಜ್ಯೋದ್ಯಮಿಗಳಾದ ರಾಮಶ್ರೇಷ್ಠಿ, ಎಚ್‌.ವಿಶ್ವನಾಥಪ್ಪ, ನಿವೃತ್ತ ಪ್ರಾಚಾರ್ಯ ಪ್ರೊ| ಕೆ.ಜಿ. ಗುರುಮೂರ್ತಿ, ನಿವೃತ್ತ ಅಧೀಕ್ಷಕ ವಿ.ಕೆ. ಹಿರೇಮಠ, ನಿವೃತ್ತ ಗ್ರಂಥಪಾಲಕ ಸಹಾಯಕ ಟಿ.ಸಿ.ಬೆಟ್ಟಪ್ಪ ಅವರಿಗೆ ಸೇವಾಭೂಷಣ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಸಂಸ್ಥೆಯ ಉಪಾಧ್ಯಕ್ಷ ಡಿ.ಎಂ. ಹಾಲಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಶಕುಂತಲಮ್ಮ ಕಾರ್ಯನಿರ್ವಹಣಾಧಿಧಿ ಕಾರಿ ಪ್ರೊ|ಸಿ.ವಿ. ಪಾಟೀಲ್‌, ಸಾಹಿತಿ ಅ.ಸಿ. ಹಿರೇಮಠ, ಉದ್ಯಮಿ ಜಗದೀಶ್‌, ಗುಡಗುಂಟಿ ಮಠ, ಎಸ್‌.ಜಿ. ವಾಗೀಶ್ವರಯ್ಯ, ಪ್ರಾಂಶುಪಾಲ ಕೆ.ಎಂ.ರುದ್ರಮುನಿ ಸ್ವಾಮಿ ಮತ್ತಿತರರಿದ್ದರು.   

ಟಾಪ್ ನ್ಯೂಸ್

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.