ಆರ್‌ಟಿಇ ಕಾಯ್ದೆ ನ್ಯೂನತೆ ಸರಿಪಡಿಸಲು ಆಗ್ರಹ


Team Udayavani, Mar 21, 2017, 2:48 PM IST

dvg7.jpg

ದಾವಣಗೆರೆ: ಉಚಿತ ಕಡ್ಡಾಯ ಶಿಕ್ಷಣ (ಆರ್‌ಟಿಇ) ಕಾಯ್ದೆಯಲ್ಲಿನ ನ್ಯೂನತೆ ಸರಿಪಡಿಸಲು ಒತ್ತಾಯಿಸಿ ಸೋಮವಾರ ಶಾಶ್ವತ ಅನುದಾನರಹಿತ ಶಾಲಾ ಆಡಳಿತ ಮಂಡಳಿಗಳ ಸಂಘದ ಪದಾಧಿಕಾರಿಗಳು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಎಚ್‌.ಎಂ. ಪ್ರೇಮಾಗೆ ಮನವಿ ಸಲ್ಲಿಸಿದರು. 

ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಣಬೇರು ಶಿವಮೂರ್ತಿ ಮಾತನಾಡಿ, ಆಧಾರ್‌ ಕಡ್ಡಾಯದಿಂದ ಆರ್‌ಟಿಇ ತಂತ್ರಾಂಶದಲ್ಲಿ ಸಾಕಷ್ಟು ನ್ಯೂನತೆಗಳಿದ್ದು, ಅವುಗಳ ಬದಲಾವಣೆಗೆ ಮುಂದಾಗಬೇಕು. ಮಗು ಮತ್ತು ಪೋಷಕರ ಆಧಾರ್‌ಕಾರ್ಡ್‌ಲ್ಲಿ ವಿಳಾಸ ಒಂದೇ ಇದ್ದು, ಭಾಷೆ ನ್ಯೂನತೆಯಿಂದ ತಂತ್ರಾಂಶ ಅಂತಹ ಅರ್ಜಿ ಸ್ವೀಕರಿಸುತ್ತಿಲ್ಲ.

ಮಗುವಿನ ಆಧಾರ್‌ಕಾರ್ಡ್‌ ನಲ್ಲಿ ನಿಟುವಳ್ಳಿ ಹೊಸ ಬಡಾವಣೆ ಎಂದು ಇರುವಂತಹದ್ದು ತಂದೆ ಆಧಾರ್‌ಕಾರ್ಡ್‌ನಲ್ಲಿ ನಿಟ್ಟುವಳ್ಳಿ ನ್ಯೂ ಎಕ್ಸ್‌ಟೆನನ್‌ ಎಂದಿದ್ದರೆ ಅರ್ಜಿ ಸ್ವೀಕರಿಸುತ್ತಿಲ್ಲ ಎಂದು ತಿಳಿಸಿದರು. ನಿರ್ದಿಷ್ಟಪಡಿಸಿದ ವಾರ್ಡ್‌ನಲ್ಲಿ ಶಾಲೆ ಇಲ್ಲದಿದ್ದಾಗ ಅಂತಹ ವಾರ್ಡ್‌ನ ಪೋಷಕರು ಪಕ್ಕದ ಬೇರೆ ವಾರ್ಡ್‌ನಲ್ಲಿರುವ ಶಾಲೆಗಳಿಗೆ ಆರ್‌ಟಿಇಗೆ ಅರ್ಜಿ ಸಲ್ಲಿಸಲು ಹೋದಾಗ ತಂತ್ರಾಂಶ ಅರ್ಜಿ ಸ್ವೀಕರಿಸುತ್ತಿಲ್ಲ.

ಗ್ರಾಮೀಣ ಪ್ರದೇಶದಲ್ಲಿರುವ ಒಂದು ಗ್ರಾಮದ ಶಾಲೆಗೆ ಅದೇ ಗ್ರಾಮದ ಮಕ್ಕಳು ಅರ್ಜಿ ಹಾಕಲು ಅವಕಾಶ ಕಲ್ಪಿಸಲಾಗಿದೆ. ಆದರಿಂದ ಅಕ್ಕಪಕ್ಕದ ಹಳ್ಳಿಗಳಲ್ಲಿ ಅನುದಾನರಹಿತ ಶಾಲೆಗಳಿಲ್ಲದಿದ್ದಲ್ಲಿ ಬಡ ಮಕ್ಕಳು ಆರ್‌ಟಿಇಯಿಂದ ವಂಚಿತರಾಗುತ್ತಿದ್ದಾರೆ. ಹಾಗಾಗಿ ಇಲಾಖೆ ನಿಗದಿಪಡಿಸಿದ ಸೀಟು ತುಂಬುವುದು ಕಷ್ಟವಾಗುತ್ತದೆ.

ಸೀಟುಗಳು ಖಾಲಿ ಉಳಿಯುವ ಸಾಧ್ಯತೆಯೇ ಹೆಚ್ಚು. ಅಕ್ಕಪಕ್ಕದ ವಾರ್ಡ್‌ ಮತ್ತು ಗ್ರಾಮಗಳಲ್ಲಿರುವ ಶಾಲೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದರು. ಅರ್ಜಿ ಸಲ್ಲಿಕೆ ತಂತ್ರಾಂಶದಲ್ಲಿ ನ್ಯೂನತೆ ಇರುವ ಹಿನ್ನೆಲೆಯಲ್ಲಿ ಪೋಷಕರು ತಮ್ಮ ಮಕ್ಕಳಿಗೆ ಆರ್‌ಟಿಇ ಅಡಿ ಸಕಾಲದಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತಿಲ್ಲ.

ಆದ್ದರಿಂದ ಈಗ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುವ ಮಾ 31ನ್ನು ಏ. 15ರವರೆಗೆ ಮುಂದುವರೆಸಬೇಕು ಎಂದು ಮನವಿ ಮಾಡಿದರು. ಒಂದು ಶಾಲೆಗೆ ನಿಗದಿಪಡಿಸಿದ ಸೀಟು ಭರ್ತಿಯಾಗದೆ ಉಳಿದಲ್ಲಿ ಅಂತಹ ಶಾಲೆಗಳ ಸೀಟುಗಳು ಖಾಲಿ ಉಳಿಯದಂತೆ ಇಲಾಖಾ ವತಿಯಿಂದ ಭರ್ತಿ ಮಾಡುವುದರಿಂದ ಸರ್ಕಾರದ ಉಚಿತ ಮತ್ತು ಕಡ್ಡಾಯ ಶಿಕ್ಷಣ ನೀತಿ ಸಮರ್ಪಕವಾಗಿ ಜಾರಿಯಾದಂತಾಗುತ್ತದೆ.

ಸರ್ಕಾರ ಆರ್‌ಟಿಇ ವಿದ್ಯಾರ್ಥಿಗಳ ಎಲ್‌ ಕೆಜಿ ಹಾಗೂ 1ನೇ ತರಗತಿ ವಿದ್ಯಾರ್ಥಿಗಳಿಗೆ ಕ್ರಮವಾಗಿ 8 ಸಾವಿರ ಮತ್ತು 16 ಸಾವಿರ ನಿಗದಿಪಡಿಸಿರುವುದು ಕನಿಷ್ಟ ಮೊತ್ತವಾಗಿದೆ. ಎಲ್‌ ಕೆಜಿಗೆ 12 ಹಾಗೂ 1ನೇ ತರಗತಿಗೆ 25 ಸಾವಿರ  ನಿಗದಿಪಡಿಸಬೇಕು ಎಂದು ಒತ್ತಾಯಿಸಿದರು. 

ಜಿಲ್ಲಾ ಅಧ್ಯಕ್ಷ ತ್ಯಾವಣಗಿ ವೀರಭದ್ರಸ್ವಾಮಿ, ಮಲ್ಲೇಶ್‌ ಶ್ಯಾಗಲೆ, ಎಚ್‌.ಜಿ. ಪ್ರಕಾಶ್‌, ಅಗಡಿ ಮಂಜುನಾಥ್‌, ಕನಕ ರತ್ನ, ಮಲ್ಲಮ್ಮ, ಮಧುಕೇಶ, ಎಸ್‌.ಸಿ. ಶಿವಕುಮಾರ್‌, ಎಸ್‌. ಮಂಜುನಾಥ್‌, ವಕ್ತಾರ್‌ಸಿಂಗ್‌, ಕೆ.ಎಸ್‌. ಮಂಜುನಾಥ್‌, ಮಹಾರುದ್ರಯ್ಯ, ವೀರೇಶ್‌ ಬಿ. ಬಿರಾದಾರ್‌, ಎನ್‌.ಟಿ. ಗಣೇಶ್‌, ನಾಗರಾಜ್‌ ಇತರರು ಇದ್ದರು.  

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.