ತಾರತಮ್ಯ ವಿರುದ್ಧ 25ಕ್ಕೆ ಸ್ಲಂ ವಾಸಿಗಳ ಸಮಾವೇಶ


Team Udayavani, Mar 22, 2017, 3:02 PM IST

dvg5.jpg

ದಾವಣಗೆರೆ: ಸ್ಲಂ ಜನರ ಬಗ್ಗೆ ಸಾಮಾಜಿಕ ತಾರತಮ್ಯ ವಿರೋಧಿಸಿ ಮಾ. 25 ರಂದು ತುಮಕೂರಿನ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ರಾಜ್ಯ ಸಮಾವೇಶ ನಡೆಯಲಿದೆ ಎಂದು ಮಾನವ ಹಕ್ಕುಗಳ ವೇದಿಕೆ ಜಿಲ್ಲಾ ಕಾರ್ಯದರ್ಶಿ ಎಲ್‌.ಎಚ್‌. ಅರುಣ್‌ ಕುಮಾರ್‌ ತಿಳಿಸಿದ್ದಾರೆ. ರಾಜ್ಯದಲ್ಲಿರುವ 85 ಲಕ್ಷಕ್ಕೂ ಅಧಿಕ ಕೊಳಗೇರಿ ನಿವಾಸಿಗಳೊಂದಿಗೆ ಈ ಕ್ಷಣಕ್ಕೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಾಮಾಜಿಕ ತಾರತಮ್ಯ ಮಾಡುತ್ತಿವೆ.

ಅಗತ್ಯ ಮೂಲಭೂತ ಸೌಲಭ್ಯ ಒದಗಿಸುವಲ್ಲಿ ವಿಫಲವಾಗಿರುವುದನ್ನು ಖಂಡಿಸಿ ರಾಜ್ಯ ಸಮಾವೇಶ ಹಮ್ಮಿಕೊಳ್ಳಲಾಗಿದೆ. ದಾವಣಗೆರೆಯ ಕೊಳಗೇರಿಗಳ ಅನೇಕರು ಸಮಾವೇಶದಲ್ಲಿ ಭಾಗವಹಿಸುವರು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಸರ್ಕಾರಗಳು ಕೊಳಗೇರಿ ಸಮಸ್ಯೆ ಎಂದಾಕ್ಷಣ ವಸತಿ ಸಮಸ್ಯೆ ಎಂದೇ ತಿಳಿದುಕೊಂಡಿವೆ.

ಕೊಳಗೇರಿಯಲ್ಲಿನ ಜನರಿಗೆ ವಸತಿ ಜೊತೆ ಶುದ್ಧ ಕುಡಿಯುವ ನೀರು, ಶೌಚಾಲಯ, ಚರಂಡಿ, ಒಳ ಚರಂಡಿ ಸೌಲಭ್ಯ ಒದಗಿಸಬೇಕು ಎಂಬುದನ್ನೇ ಮರೆತಿವೆ. ಎಲ್ಲಕ್ಕಿಂತಲೂ ಅತೀ ಮುಖ್ಯವಾಗಿ ಭೂ ಒಡೆತನದ ಹಕ್ಕು ನೀಡುವ ಗೋಜಿಗೆ ಹೋಗಿಲ್ಲ. ಈಗಲೂ ಅಸಂಖ್ಯಾತ ಜನರಿಗೆ ಹಕ್ಕುಪತ್ರವನ್ನೇ ನೀಡಿಲ್ಲ ಎಂದು ದೂರಿದರು. 

ರಾಜ್ಯದ ಕೊಳಗೇರಿ ಜನರಿಗೆ ಭೂ ಒಡೆತನ, ನಿವೇಶನ ರಹಿತರ ಸಮಸ್ಯೆ ಪರಿಹಾರಕ್ಕೆ ನಗರ ಪರಮಿತಿಯಲ್ಲಿ ಭೂಮಿ ಮೀಸಲು(ಲ್ಯಾಂಡ್‌ ಬ್ಯಾಂಕ್‌), ಸರ್ಕಾರ ನೀಡಿರುವ ಭರವಸೆಯಂತೆ ಹಕ್ಕುಪತ್ರ ವಿತರಣೆ, ಅಭಿವೃದ್ಧಿಯಲ್ಲಿ ಸ್ಲಂ ನಿವಾಸಿಗಳ ಪಾಲ್ಗೊಳ್ಳುವಿಕೆಗೆ ಆದ್ಯತೆ ಒಳಗೊಂಡಂತೆ ಪ್ರಮುಖ 8 ಬೇಡಿಕೆಗಳ ಬಗ್ಗೆ ಸಮಾವೇಶದಲ್ಲಿ ಚರ್ಚೆ ನಡೆಯಲಿದೆ ಎಂದು ತಿಳಿಸಿದರು. 

ಕೇಂದ್ರ ಸರ್ಕಾರ ಏಕರೂಪ ತೆರಿಗೆ ನೀತಿ ಹೆಸರಲ್ಲಿ ರಾಜ್ಯಗಳಲ್ಲಿ ಸಂಗ್ರಹವಾಗುವ ತೆರಿಗೆಯನ್ನು ಪಡೆದುಕೊಳ್ಳುತ್ತಿದೆ. ಹಾಗಾಗಿ ರಾಜ್ಯ ಸರ್ಕಾರಗಳು ಪ್ರತಿಯೊಂದು ಅನುದಾನಕ್ಕೆ ಕೇಂದ್ರದ ಮುಂದೆ ಕೈ ಒಡ್ಡಿ ಬೇಡುವಂತಹ ಸ್ಥಿತಿ ಇದೆ. ವಿಕೇಂದೀÅಕರಣ ಬದಲಿಗೆ ಎಲ್ಲವೂ ಕೇಂದೀಕರಣ ಆಗುತ್ತಿರುವುದು ಪ್ರಜಾತಂತ್ರ ವ್ಯವಸ್ಥೆಗೆ ಧಕ್ಕೆ ಉಂಟು ಮಾಡುವಂತದ್ದು.

ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೆ ಸಮಾನ ಅನುದಾನ ನೀಡುವ ಮೂಲಕ ಕೊಳಗೇರಿ ಒಳಗೊಂಡಂತೆ ಎಲ್ಲಾ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಒತ್ತಾಯಿಸಿದರು. ಸ್ಲಂ ಜನಾಂದೋಲನದ ಜಿಲ್ಲಾ ಸಂಚಾಲಕಿ ರೇಣುಕ ಯಲ್ಲಮ್ಮ ಹಾವೇರಿ ಮಾತನಾಡಿ, ದಾವಣಗೆರೆಯಲ್ಲಿ ಈಗಲೂ 10 ಸಾವಿರಕ್ಕೂ ಹೆಚ್ಚಿನ ಮನೆಯಲ್ಲಿ ಶೌಚಾಲಯವೇ ಇಲ್ಲ.

ಮಹಿಳೆಯರ ಗೌರವ, ಘನತೆ ಬಗ್ಗೆ ಮಾತನಾಡುವರು ಈ ಕ್ಷಣಕ್ಕೂ ಮಹಿಳೆಯರು ಶೌಚಕ್ಕೆ ಬಯಲಿಗೆ ಹೋಗುವುದನ್ನ ತಪ್ಪಿಸಲು ಸಾಧ್ಯವಾಗಿಲ್ಲ. ಬಾಷಾ ನಗರದ 2ನೇ ಮುಖ್ಯ ರಸ್ತೆಯಲ್ಲಿ ಒಳ ಚರಂಡಿ ಸಂಪರ್ಕಕ್ಕೆ ಅಲೆಯಲಾಗುತ್ತಿದೆ. ಯಾವುದೇ ಅಧಿಕಾರಿಗಳು ಗಮನವನ್ನೇ ನೀಡುತ್ತಿಲ್ಲ. 

ಕಳೆದ ಒಂದೂವರೆ ವರ್ಷದಿಂದ ಹಿಂದೆ ಬಹಿರ್ದೆಸೆಗೆ ಹೋಗಿದ್ದ ಇಬ್ಬರ ಮೇಲೆ ನಡೆದ ಅತ್ಯಾಚಾರದಿಂದ ಆಘಾತಕ್ಕೆ ಒಳಗಾಗಿ ಅವರು ಮಾನಸಿಕ ಅಸ್ವಸ್ಥರಾಗಿದ್ದಾರೆ ಎಂದು ತಿಳಿಸಿದರು. ಜನಾಂದೋಲನದ ಜಿಲ್ಲಾ ಅಧ್ಯಕ್ಷ ಎಚ್‌.ವಿ. ಪ್ರಭುಲಿಂಗಪ್ಪ, ಕಾರ್ಯಾಧ್ಯಕ್ಷ ಕೆ.ಎನ್‌. ಹನುಮಂತಪ್ಪ, ಮುಖಂಡಜೆ. ಅಮಾನುಲ್ಲಾಖಾನ್‌, ಶಬೀºರ್‌  ಸಾಬ್‌, ಶಿಲ್ಪಾ, ಮಂಜುನಾಥ್‌ಯರಗುಂಟೆ, ರಹಮತುಲ್ಲಾ ಇತರರು ಸುದ್ದಿಗೋಷ್ಠಿಯಲ್ಲಿದ್ದರು.   

ಟಾಪ್ ನ್ಯೂಸ್

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.