ನಾಳೆ ಜೆಡಿಎಸ್ನಿಂದ ಎಸಿ ಕಚೇರಿಗೆ ಮುತ್ತಿಗೆ
Team Udayavani, Mar 26, 2017, 12:55 PM IST
ದಾವಣಗೆರೆ: ಅಶೋಕ ಚಿತ್ರಮಂದಿರದ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣ ವಿಳಂಬ ಖಂಡಿಸಿ, ಜೆಡಿಎಸ್ ಇದೀಗ ಉಪವಿಭಾಗಾಧಿಕಾರಿ ಕಚೇರಿ ಮುತ್ತಿಗೆ ಹಾಕಿ ಪ್ರತಿಭಟಿಸಲಿದೆ.
ರೈಲ್ವೆ ಗೇಟ್ ಅನತಿ ದೂರದಲ್ಲೇ ಮಾ.20ರಿಂದ ನಿರಂತರ ಅಹೋರಾತ್ರಿ ಧರಣಿ ಕೈಗೊಂಡಿದ್ದ ಕಾರ್ಯಕರ್ತರು ಜಿಲ್ಲಾಡಳಿತದ ಮೇಲೆ ಒತ್ತಡ ಹೇರಲು ಮಾ.27ರಂದು ಬೆಳಗ್ಗೆ 11 ಗಂಟೆಗೆ ಉಪವಿಭಾಗಾಧಿಕಾರಿ ಕಚೇರಿ ಮುತ್ತಿಗೆ ಹಾಕಲು ತೀರ್ಮಾನಿಸಲಾಗಿದೆ ಎಂದು ಜೆಡಿಎಸ್ ಯುವ ಘಟಕದ ಜಿಲ್ಲಾಧ್ಯಕ್ಷ ಜೆ. ಅಮಾನುಲ್ಲಾ ಖಾನ್ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ರೈಲ್ವೆ ಉಪ ಮುಖ್ಯ ಅಭಿಯಂತರ ಆರ್.ಕೆ. ಸಿಂಗ್ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಇಚ್ಛಾಶಕ್ತಿ ಕೊರತೆಯಿಂದಾಗಿ ಜಿಲ್ಲಾಡಳಿತ ಅವರನ್ನು ಸಂಪರ್ಕಿಸಲು ವಿಫಲವಾಗಿದೆ. ಇದರಿಂದ ರೈಲ್ವೆ ಮೇಲ್ಸೇತುವೆ ಕಾಮಗಾರಿಗೆ ವಿಳಂಬ ಆಗುತ್ತಿದೆ.
ಪಿಬಿ ರಸ್ತೆಯ ಹಳೆ ಬಸ್ ನಿಲ್ದಾಣದ ಮೂಲಕ ಅಶೋಕ ಟಾಕೀಸ್ ಪಕ್ಕ ಕೆ.ಆರ್.ರಸ್ತೆಗೆ ಇಳಿಯುವಂತೆ ಮೇಲ್ಸೇತುವೆ ನಿರ್ಮಿಸಿದರೆ ಯಾರಿಗೂ ಯಾವ ತೊಂದರೆಯೂ ಆಗುವುದಿಲ್ಲ. ಯಾವ ನಿವೇಶನಕ್ಕೂ ಧಕ್ಕೆ ಉಂಟಾಗುವುದಿಲ್ಲ. ಕೆ.ಆರ್. ರಸ್ತೆಯು 90 ಅಡಿ ಅಗಲ ಇದ್ದು, ಇದರಲ್ಲಿ ಮೇಲ್ಸೇತುವೆ ನಿರ್ಮಿಸಿ ಎರಡು ಬದಿಯಲ್ಲಿ 30 ಅಗಲದ ಸೇವಾ ರಸ್ತೆ ಸಹ ಮಾಡಬಹುದು ಎಂದರು.
ಅಶೋಕ ಚಿತ್ರಮಂದಿರ ಬಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ಆರಂಭವಾಗುವ ತನಕ ನಮ್ಮ ಹೋರಾಟ ನಡೆಯಲಿದೆ. ಅಲ್ಲದೇ ಮುಂದಿನ ದಿನಗಳಲ್ಲಿ ಸಂಸದರ, ಸಚಿವರ, ಜಿಲ್ಲಾಧಿಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ತೀರ್ಮಾನಿಸಲಾಗಿದೆ ಎಂದು ಹೇಳಿದರು. ಅನಿಸ್ ಪಾಷ, ಬಾತಿ ಶಂಕರ್, ಕೆ.ಮಂಜುಳಾ, ಬಿ.ದಾದಾಪೀರ್, ಖಾದರ್ ಬಾಷಾ, ಪ್ರಕೃದ್ಧೀನ್, ಜೆ.ಶ್ರೀನಿವಾಸ್, ಕೆ.ಡಿ. ಜಮೀರ್ ಅಹಮ್ಮದ್, ಮುಬಾರಕ್ ಇತರರು ಸುದ್ದಿಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
MUST WATCH
ಹೊಸ ಸೇರ್ಪಡೆ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ