ಅಲ್ಪಸಂಖ್ಯಾತರು ಕಾಂಗ್ರೆಸ್‌ ಬೆಂಬಲಿಸಿದ್ದು ಸಾಕು


Team Udayavani, Mar 26, 2017, 12:57 PM IST

dvg1.jpg

ದಾವಣಗೆರೆ: ದೇಶಕ್ಕೆ ಸ್ವಾತಂತ್ರ ಬಂದು 70 ವರ್ಷಗಳಾದರೂ ಅಲ್ಪಸಂಖ್ಯಾತರ ಅಭಿವೃದ್ಧಿ ಆಗಿಲ್ಲ. ಈವರೆಗೂ ನಮ್ಮನ್ನು ಮತಬ್ಯಾಂಕ್‌ ಮಾಡಿಕೊಂಡವರನ್ನು ಬೆಂಬಲಿಸಿದ್ದು ಸಾಕು. ಇನ್ನು ನಮ್ಮ ಅಭಿವೃದ್ಧಿ ಆಲೋಚಿಸುವ ಬಿಜೆಪಿಗೆ ಮತ ನೀಡಿ ಎಂದು ಪಕ್ಷದ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯಾಧ್ಯಕ್ಷ ಅಬ್ದುಲ್‌ ಅಜೀಂ ಅಲ್ಪಸಂಖ್ಯಾತ ಸಮುದಾಯದವರಲ್ಲಿ ಮನವಿ ಮಾಡಿದ್ದಾರೆ.

ಶನಿವಾರ ಪಕ್ಷದ ಕಚೇರಿಯಲ್ಲಿ ಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಉದ್ಘಾಟಿಸಿ, ಮಾತನಾಡಿದ ಅವರು, ಪರಿಶಿಷ್ಟರು ಹಾಗೂ ಮುಸ್ಲಿಮರನ್ನು ಓಟ್‌ಬ್ಯಾಂಕ್‌ ಮಾಡಿಕೊಂಡಿದ್ದ ಕಾಂಗ್ರೆಸ್‌ ನಮ್ಮನ್ನು ಯಾರೂ ಸೋಲಿಸಲಾಗಲ್ಲ ಎಂಬುದಾಗಿ ಭಾವಿಸಿತ್ತು. ಬಿಜೆಪಿಯನ್ನ ಕೋಮುವಾದಿ ಪಕ್ಷವೆಂದು ಬಿಂಬಿಸಿ, ಅಲ್ಪಸಂಖ್ಯಾತರಲ್ಲಿ ವಿಷಬೀಜ ಬಿತ್ತಿದ ಕಾಂಗ್ರೆಸ್‌, ನಮ್ಮ ಪಕ್ಷದತ್ತ ಅಲ್ಪಸಂಖ್ಯಾತರು ಸುಳಿಯದಂತೆ ಮಾಡಿತ್ತು.

ಈಗ ಸಮುದಾಯದವರು ಎಚ್ಚೆತ್ತುಕೊಂಡು ಜಾತಿ, ಧರ್ಮ, ಭಾಷೆ ಆಧಾರದ  ಮೇಲೆ ಜನರನ್ನು ವಿಂಗಡಿಸುವ ಪಕ್ಷ ತಿರಸ್ಕರಿಸಬೇಕಿದೆ ಎಂದರು. ಕಳೆದ 70 ವರ್ಷಗಳಲ್ಲಿ ಅಲ್ಪಸಂಖ್ಯಾತರು ಶಾಂತಿ-ಸೌರ್ಹಾದತೆ ಕಳೆದುಕೊಂಡಿದ್ದೇವೆ. ನಿಜವಾದ ಹಿಂದು-ಮುಸ್ಲಿಂ ಮಾತ್ರ ಒಳ್ಳೆಯವರಾಗಲು ಸಾಧ್ಯ. ಯಾವುದೇ ಧರ್ಮ ಕೆಟ್ಟದನ್ನು ಸಾರುವುದಿಲ್ಲ. ನಮ್ಮ ನಮ್ಮ ಧರ್ಮ ಸರಿಯಾಗಿ ಅರ್ಥಮಾಡಿಕೊಂಡಲ್ಲಿ ಭೇದ-ಭಾವ ಉಂಟಾಗುವುದಿಲ್ಲ.

ನಮ್ಮ ಮನೆಯ ಒಳಗೆ ಧರ್ಮ, ಜಾತಿ, ಆಚಾರ-ವಿಚಾರ, ಸಂಪ್ರದಾಯ ಇರಲಿ. ಮನೆಯಿಂದ ಹೊರಗೆ ಎಲ್ಲರೂ ಭಾರತೀಯರು ಎಂಬ ಮನೋಧರ್ಮ ಬೆಳೆಸಿಕೊಳ್ಳಬೇಕು ಎಂದು ಹೇಳಿದರು. ಭಾರತೀಯ ಜನತಾ ಪಕ್ಷದ ಬಗ್ಗೆ ಯಾವುದೇ ರೀತಿ ಸಂಶಯ, ಆತಂಕ ಬೇಡ. ಪ್ರಧಾನಿ ನರೇಂದ್ರ ಮೋದಿ ಎಲ್ಲಾ ಸಮುದಾಯದವರ ಸಮಗ್ರ ಅಭಿವೃದ್ಧಿಗೆ ಯೋಜನೆ ಜಾರಿಗೊಳಿಸುತ್ತಿದ್ದಾರೆ. ಉತ್ತರ ಪ್ರದೇಶದಲ್ಲಿ ಮುಸ್ಲಿಮರು ಮತ ಹಾಕಿದ್ದರಿಂದಲೇ ಆ ರಾಜ್ಯದಲ್ಲಿ ಬಿಜೆಪಿ ಅತ್ಯಧಿಕ ಸ್ಥಾನ ಪಡೆಯಲು ಸಾಧ್ಯವಾಗಿದೆ.

ಆ ಚುನಾವಣೆ ಗಮನಿಸಿದರೆ ಅಲ್ಪಸಂಖ್ಯಾತರು ಬಿಜೆಪಿ ವಿರೋಧಿಗಳಲ್ಲ ಎಂಬುದು ಸಾಬೀತಾಗಿದೆ. ಅದೇ ರೀತಿ ಕರ್ನಾಟಕದಲ್ಲೂ ಅಲ್ಪಸಂಖ್ಯಾತರು ಬಿಜೆಪಿ ಬೆಂಬಲಿಸಬೇಕಿದೆ. ಕೇವಲ 25% ಅಲ್ಪಸಂಖ್ಯಾತರು ಮತ ನೀಡಿದರೆ ಸಾಕು ಪಕ್ಷ ಅಧಿಕಾರಕ್ಕೆ ಬರಲಿದೆ. ಬಿ.ಎಸ್‌.ಯಡಿಯೂರಪ್ಪ  ಮುಖ್ಯಮಂತ್ರಿಯಾದಲ್ಲಿ ಮಹಾತ್ಮ ಗಾಂಧೀಜಿ ಆಶಯದ ರಾಮರಾಜ್ಯದ ಆಡಳಿತದ ಯೋಜನೆ ಸಿದ್ಧಗೊಂಡಿದೆ ಎಂದು ಅವರು ಹೇಳಿದರು. 

ರಾಜ್ಯದಲ್ಲಿ ಬಿಜೆಪಿ ಗೆಲುವಿಗೆ ಅಲ್ಪಸಂಖ್ಯಾತ ಮೋರ್ಚಾ ಸಹ ಮಹತ್ತರ ಪಾತ್ರ ವಹಿಸಲಿದೆ. ಈಗಾಗಲೇ 36 ಜಿಲ್ಲಾ ಘಟಕ, 276 ಮಂಡಲ ರಚಿಸಿ 2 ತಿಂಗಳ ಹಿಂದೆಯೇ ಬಿಜೆಪಿ ಅಲ್ಪಸಂಖ್ಯಾತ ಕುಟುಂಬ ಅಭಿಯಾನ ಆರಂಭಿಸಲಾಗಿದೆ. ಈಗ 77,600 ಕುಟುಂಬಗಳ ಸದಸ್ಯರನ್ನಾಗಿಸಲಾಗಿದೆ. ವಿಧಾನ ಸಭಾ ಚುನಾವಣೆ ವೇಳೆ ಒಟ್ಟು 13.80 ಲಕ್ಷ ಬಿಜೆಪಿ ಅಲ್ಪಸಂಖ್ಯಾತ ಕುಟುಂಬಗಳ ಸದಸ್ಯತ್ವ ಗುರಿ ಹೊಂದಲಾಗಿದೆ.

ಕ್ಷೇತ್ರದಲ್ಲಿ ಕನಿಷ್ಠ 5000 ಅಲ್ಪಸಂಖ್ಯಾತರು ಬಿಜೆಪಿಗೆ ಮತ ನೀಡುವಂತಾಗಬೇಕು ಎಂದು ಅವರು ತಿಳಿಸಿದರು.  ನಮ್ಮ ಮುಖಂಡರ ಮಧ್ಯೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಪಕ್ಷದ ವರಿಷ್ಠರು ಎಲ್ಲವನ್ನೂ ಬಗೆಹರಿಸಿದ್ದಾರೆ. ಈ ಹಿಂದೆ ಮಿಷನ್‌ 150+ ಇತ್ತು. ಈಗ ಮಾಜಿ ಮುಖ್ಯಮಂತ್ರಿ ಎಸ್‌. ಎಂ.ಕೃಷ್ಣ ಅವರು ಬಿಜೆಪಿ ಸೇರಿದ ಮೇಲೆ 170ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವ ವಿಶ್ವಾಸವಿದೆ.

ಅವಧಿ ಮುಗಿಯುವ ಮುನ್ನವೇ ರಾಜ್ಯದಲ್ಲಿ ಚುನಾವಣೆ ನಡೆಯಲಿದೆ. ಮೇ ನಂತರ ಕಾಂಗ್ರೆಸ್‌ ಪಕ್ಷದ ಶಾಸಕರು ರಾಜೀನಾಮೆ ನೀಡಿ ಬಿಜೆಪಿ ಸೇರಲಿದ್ದಾರೆ. ರಾಜಕೀಯ ದೃವೀಕರಣ ನಡೆಯಲಿದ್ದು, ಡಿಸೆಂಬರ್‌ ಇಲ್ಲವೆ ಜನವರಿಯಲ್ಲಿ ಚುನಾವಣೆ ಖಚಿತ ಎಂದು ಅವರು ಹೇಳಿದರು.   

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.