ಪಾಕಿಸ್ತಾನ ತೋರಿಸಿ ಹಿಂದುಸ್ತಾನದ ಆಳ್ವಿಕೆ


Team Udayavani, Apr 23, 2017, 1:18 PM IST

dvg2.jpg

ದಾವಣಗೆರೆ: ಪಾಕಿಸ್ತಾನ ತೋರಿಸಿ ಭಾರತ ಆಳುತ್ತಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಕಿತ್ತೂಗೆಯುವುದು ಕಮ್ಯುನಿಷ್ಟ್ ಪಕ್ಷದವರಿಂದ ಮಾತ್ರ ಸಾಧ್ಯ ಎಂದು  ಆ ಪಕ್ಷದ ರಾಷ್ಟ್ರೀಯ ಮಂಡಳಿ ಸದಸ್ಯ ಡಾ| ಜಿ.ಸಿದ್ಧನಗೌಡ ಪಾಟೀಲ್‌ ಹೇಳಿದ್ದಾರೆ. ಶನಿವಾರ ಶಾಂತಿಪಾರ್ಕ್‌ ಹೋಟೆಲ್‌ ಸಭಾಂಗಣದಲ್ಲಿ ಪಕ್ಷದ ರಾಜ್ಯ ಮಂಡಳಿ ಸಭೆಯಲ್ಲಿ ಮಾತನಾಡಿದರು.

ಬಿಜೆಪಿಯವರು ಪಾಕಿಸ್ತಾನ ತೋರಿಸಿ, ಹಿಂದುಸ್ತಾನ ಆಳುತ್ತಿದ್ದಾರೆ. ಜಾತಿ, ಧರ್ಮದ ಹೆಸರಲ್ಲಿ ಪ್ಯಾಸಿಸಂ ಆಡಳಿತ ನಡೆಸುತ್ತಿದ್ದಾರೆ. ಸದ್ಯ ದೇಶದ ಪ್ರಜಾತಂತ್ರ ವ್ಯವಸ್ಥೆ ಬುಡಮೇಲಾಗಿದೆ. ಪ್ರಸ್ತುತ ದೇಶಕ್ಕೆ ರಾಜಕೀಯ ಬದಲಾವಣೆಗಿಂತ ನೀತಿ ಬದಲಾವಣೆ ಬೇಕಿದೆ. ಅಂದರೆ ಪಕ್ಷದ ಹಿನ್ನೆಲೆಗಿಂತ ಪಕ್ಷದ ತತ್ವ ಸಿದ್ಧಾಂತಗಳ ಆಧಾರದಲ್ಲಿ ಬದಲಾವಣೆ ಮಾಡಬೇಕಿದೆ ಎಂದರು. 

ದೇಶದಲ್ಲಿರುವ 30 ಕೋಟಿ ರೈತಾಪಿ ಜನರು, 45 ಕೋಟಿ ಕಾರ್ಮಿಕ ವರ್ಗ ಇದೆ. ಈ ಪೈಕಿ ಶೇ.90ರಷ್ಟು ಜನರು ಅಸಂಘಟಿತ ಕೂಲಿ ಕಾರ್ಮಿಕರಾಗಿದ್ದಾರೆ.  ಇವರಿಗೆ ರಜಾ ಸೌಲಭ್ಯಗಳಿಲ್ಲ, ಸೂಕ್ತ ಸಂಬಳವಿಲ್ಲ. ಆರೋಗ್ಯ ಸೌಲಭ್ಯವಿಲ್ಲ. ನಿವೃತ್ತಿ ವೇತನವಿಲ್ಲ. ಈ ಎಲ್ಲ ವರ್ಗದವರು ನರೇಂದ್ರ ಮೋದಿಯವರನ್ನು ಬೆಂಬಲಿಸಿದ್ದು, ಕುರಿಗಳು ಕಟುಕನ ಅಭಿಮಾನಿಗಳಾದಂತಾಗಿದೆ ಎಂದು ಅವರು ವಿಶ್ಲೇಷಿಸಿದರು. 

ಸಭೆ ಉದ್ಘಾಟಿಸಿದ ರಾಜ್ಯ ಸಿಪಿಐ ಮಂಡಳಿ ಕಾರ್ಯದರ್ಶಿ ಪಿ.ವಿ.ಲೋಕೇಶ್‌ ಮಾತನಾಡಿ, ನರೇಂದ್ರ ಮೋದಿ ಬಹುದೊಡ್ಡ ಕನಸುಗಳ ತೋರಿಸಿ ಕಳೆದ ಕೆಲ ತಿಂಗಳ ಹಿಂದೆ ಗರಿಷ್ಠ ಮುಖಬೆಲೆಯ ನೋಟುಗಳ ಚಲಾವಣೆ ರದ್ದು ಮಾಡಿದರು. ಭಾರೀ ದೊಡ್ಡ ಬದಲಾವಣೆ ದೇಶದಲ್ಲಿ ಆಗಲಿದೆ. ಕಪ್ಪುಹಣ ಹೊರ ಬರುತ್ತದೆ ಎಂದೆಲ್ಲಾ ಹೇಳಿದರು.

ದೇಶದ ನಾಗರಿಕರು ಭ್ರಷ್ಟಾಚಾರ ತಡೆಗೆ ಸಹಕರಿಸಬೇಕು ಕೋರಿದರು. ಆದರೆ, ಆದದ್ದೇನು? ಜನರ ಯಾವ ಸಮಸ್ಯೆಯೂ ನಿವಾರಣೆ ಆಗಲಿಲ್ಲ.  ಬದಲಿಗೆ ಸಮಸ್ಯೆಗಳ ಜೊತೆ ಇನ್ನಷ್ಟು ಸಮಸ್ಯೆಗಳು ಸೇರಿಕೊಂಡವು ಎಂದು ಟೀಕಿಸಿದರು. ಇನ್ನೂ ರಾಜ್ಯದಲ್ಲಿ ಬರ ತಾಂಡವಾಡುತ್ತಿದೆ. ಜನರು ನೀರು, ಕಾಳಿಗಾಗಿ ಹೋರಾಟ ಮಾಡುತ್ತಿದ್ದಾರೆ. 

ಆದರೆ, ರಾಜ್ಯದ ಪ್ರಮುಖ ರಾಜಕೀಯ ಪಕ್ಷಗಳು ಚುನಾವಣಾ ತಯಾರಿಯಲ್ಲಿ ತೊಡಗಿರುವುದು ಅತ್ಯಂತ ವಿಷಾದಕರ ಸಂಗತಿ. ಇತ್ತೀಚೆಗೆ ನಡೆದ ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷಗಳು ಹಣದ ಹೊಳೆಯನ್ನೇ ಹರಿಸಿ, ಜನರನ್ನು ವಾಮಮಾರ್ಗದ ಮೂಲಕ ಒಲಿಸಿಕೊಳ್ಳಲು ಪ್ರಯತ್ನ ಮಾಡಿವೆ ಎಂದು ಅವರು ಆರೋಪಿಸಿದರು. 

ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ಅಧಿಕಾರ ಮತ್ತು ಚುನಾವಣೆಗಾಗಿ ರಾಜಕಾರಣ ಮಾಡುತ್ತವೆ. ಆದರೆ, ನಮ್ಮ ಪಕ್ಷ ದೇಶದ ಕೂಲಿ ಕಾರ್ಮಿಕರು, ಮಹಿಳೆಯರು, ರೈತಾಪಿ ವರ್ಗದವರ ಜೀವನ ಸುಧಾರಣೆ ಆಗಬೇಕು ಎಂಬ ಉದ್ದೇಶ ಇಟ್ಟುಕೊಂಡು  ರಾಜಕೀಯ ಮಾಡುತ್ತಿದೆ. ಇದನ್ನು ಜನತೆ ಮರೆಯಬಾರದು.

ಮುಂದಿನ ದಿನಗಳಲ್ಲಿ ಚುನಾವಣೆಗಾಗಿ ರಾಜಕಾರಣ ಮಾಡದೆ ಜನಸಾಮಾನ್ಯರ ಸಮಸ್ಯೆಗಳ ಪರಿಹಾರಕ್ಕಾಗಿ ನಾವು ಹೋರಾಟ ಮಾಡುವ ಕುರಿತು ಎರಡು ದಿನಗಳ ಕಾಲ ಸಭೆ ಮೂಲಕ ಚರ್ಚೆ ನಡೆಸಲಾಗುತ್ತದೆ ಎಂದು ಅವರು ತಿಳಿಸಿದರು. ಸಿಪಿಐ ಕಾರ್ಯದರ್ಶಿ ಎಚ್‌. ಕೆ.ರಾಮಚಂದ್ರಪ್ಪ ಅಧ್ಯಕ್ಷತೆ ವಹಿಸಿದ್ದರು. ಎನ್‌. ಶಿವಣ್ಣ, ಸ್ವಾತಿ ಸುಂದರೇಶ್‌, ಜಿಲ್ಲಾ ಮಂಡಳಿ ಖಜಾಂಚಿ ಆನಂದ್‌ರಾವ್‌ ಇತರರು ವೇದಿಕೆಯಲ್ಲಿದ್ದರು.  

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.