ಬಸವಣ್ಣ ಓರ್ವ ವಿಸ್ಮಯ ವ್ಯಕ್ತಿಯಾಗಿದ್ದರು


Team Udayavani, Apr 24, 2017, 1:16 PM IST

dvg1.jpg

ದಾವಣಗೆರೆ: ಬಸವಣ್ಣ ಎಂದರೆ ವಿಸ್ಮಯ ವ್ಯಕ್ತಿ. 12ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಿಸಿ, ಕ್ರಾಂತಿ ಮಾಡಿದರು ಎಂದು ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿ ಹೇಳಿದರು. ವಿರಕ್ತ ಮಠದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಪ್ರಭಾತ್‌ ಪೇರಿ ಶತಮಾನೋತ್ಸವಕ್ಕೆ ಚಾಲನೆನೀಡಿ ಮಾತನಾಡಿದರು.

ಬಸವಣ್ಣನವರ ಜಯಂತಿಯನ್ನು ರಾಷ್ಟ್ರಮಟ್ಟದಲ್ಲಿ ಕಾಯಕ ದಿನಾವನ್ನಾಗಿ ಆಚರಣೆ ಮಾಡುವುದರ ಜೊತೆಗೆ ಆ ದಿನದ ರಜೆಯನ್ನು ರದ್ದುಮಾಡಿ ಒಂದು ಗಂಟೆ ಹೆಚ್ಚು ಕಾಲ ಕಾಯಕ ಮಾಡಲು ಸರ್ಕಾರ ಕ್ರಮಕೈಗೊಳ್ಳಬೇಕೆಂದು ಎಂದರು. ವಿವಿಧ ಮಹಾತ್ಮರ ಜಯಂತಿ ಹೆಸರಿನಲ್ಲಿ ಸರ್ಕಾರ ರಜೆ ಘೋಷಿಸಿ, ಕಾಯಕಕ್ಕೆ ಇರುವ ಮಹತ್ವವನ್ನು ಹಾಳು ಮಾಡುತ್ತಿದೆ.

ಇದರಿಂದ ದೇಶದ ಅಭಿವೃದ್ಧಿಗೂ ಹಿನ್ನಡೆಯಾಗುತ್ತಿದೆ ಎಂದು ವಿಷಾದಿಸಿದರು. ಬಸವಣ್ಣನ ತತ್ವಗಳು ಎಂದರೆ ಕೇವಲ ಒಂದು ಸಮಾಜದ, ರಾಜ್ಯದ, ದೇಶದ ಉದ್ದಾರಕ್ಕಾಗಿ ಇಲ್ಲ. ಅವು ವಿಶ್ವದ ಉದ್ಧಾರಕ್ಕೆ ಸಂಬಂಧಿಸಿದ್ದರಿಂದ ಈ ಬಗ್ಗೆ ಪ್ರಮುಖವಾದ ಹೆಜ್ಜೆಯನ್ನಿಟ್ಟು, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಸವಣ್ಣನವರ ಜಯಂತಿ ಆಚರಣೆಗೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರ ಒತ್ತಡ ತರಬೇಕು ಎಂದು ತಿಳಿಸಿದರು.

ದೇಶದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಅಂದರೆ 1913ರಲ್ಲಿ ವಿಶ್ವಗುರು ಬಸವಣ್ಣನವರ ಜಯಂತಿ ಆಚರಿಸಿದ ಕೀರ್ತಿ ದಾವಣಗೆರೆಯ ವಿರಕ್ತಮಠಕ್ಕೆ ಸಲ್ಲುತ್ತದೆ. ಅದೇ ರೀತಿಯಾಗಿ ಇದೇ ಮಠದಿಂದ 1917ರಲ್ಲಿ ಶ್ರೀ ಮೃತ್ಯುಂಜಯ ಅಪ್ಪಗಳು, ಹಡೇìಕರ್‌ ಮಂಜಪ್ಪನವರು ಬಸವ ಪ್ರಭಾತ್‌ ಫೇರಿಯನ್ನು ಪ್ರಾರಂಭಿಸಿದರು.

ನಂತರ ಚಿತ್ರದುರ್ಗ ಜಗದ್ಗುರುಗಳ ಅಪ್ಪಣೆಯಂತೆ ಕಣಕುಪ್ಪಿ ಕೊಟ್ರಬಸಪ್ಪ, ಗುರುಪಾದಪ್ಪನವರು ಯಶಸ್ವಿಯಾಗಿ ನಡೆಸಿಕೊಂಡು ಬಂದರು. ಈಗ ನೂರು ವರ್ಷಗಳು ಸಂದಿವೆ ಎಂದು ಸ್ಮರಿಸಿದರು.  ಚಿತ್ರದುರ್ಗ ಮೇದಾರ ಕೇತೇಶ್ವರ ಮಠದ ಶ್ರೀ ಬಸವ ಕೇತೇಶ್ವರ ಹಣಮಂತಯ್ಯ ಸ್ವಾಮೀಜಿ, ಮುಖಂಡರಾದ ಕಣಕುಪ್ಪಿ ಮುರುಗೇಶಪ್ಪ,

ಬೂಸನೂರು ಗುರುಬಸಪ್ಪ, ಚಿತ್ರನಟ ಜ್ಯೂನಿಯರ್‌ ನರಸಿಂಹರಾಜ್‌, ಎಂ.ಜಯಕುಮಾರ್‌, ಪಲ್ಲಾಗಟ್ಟಿ ಕೊಟ್ರೇಶಪ್ಪ, ಬಾಳೆಕಾಯಿ ಮುರಿಗೇಶ, ಬಾವಿಕಟ್ಟಿ ಜಗದೀಶ, ಶಾಂತಕುಮಾರ ಸೋಗಿ, ಬಿ.ಎಸ್‌.ಹಿರೇಮಠ, ಮೈಸೂರು ಮಠದ ಮುಪ್ಪಯ್ಯ, ಎಂ.ಕೆ.ಬಕ್ಕಪ್ಪ, ತಿಪ್ಪಣ್ಣ, ವೀರೇಶ್‌ ಇತರರಿದ್ದರು.

ಟಾಪ್ ನ್ಯೂಸ್

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.