ಬಂಡವಾಳಶಾಹಿಗಳಿಗೆ ಸ್ವಾಭಿಮಾನ ಮಾರಿಕೊಳ್ಳಬೇಡಿ


Team Udayavani, Jul 7, 2017, 2:32 PM IST

DV-1.jpg

ಹರಪನಹಳ್ಳಿ: ಬಂಡವಾಳಶಾಹಿಗಳ ಹಣಕ್ಕೆ ನಿಮ್ಮ ಸ್ವಾಭಿಮಾನ ಮಾರಾಟ ಮಾಡಿಕೊಂಡು ಮತ ಹಾಕಬಾರದು. ಸ್ಥಳೀಯ ಬಿಜೆಪಿಯಲ್ಲಿ ನಾವು ಒಬ್ಬ ವ್ಯಕ್ತಿ ಪೂಜೆ ಮಾಡಲ್ಲ, ಚುನಾವಣೆಯಲ್ಲಿ ಸ್ಪರ್ಧಿಸಲು ನಮಗೂ ತಾಕತ್ತು ಇದೆ ಎಂದು ಬಿಜೆಪಿ ರಾಜ್ಯ ಕಾರ್ಯಕಾರಣಿ ಸಮಿತಿ ಮಾಜಿ ಸದಸ್ಯ ಜಿ.ನಂಜನಗೌಡ ಅವರು ಕರುಣಾಕರರೆಡ್ಡಿ ಹೆಸರು ಪ್ರಸ್ತಾಪಿಸದೇ ಅವರ ವಿರುದ್ಧ ವಾಗ್ಧಾಳಿ ನಡೆಸಿದರು.

ತಾಲೂಕಿನ ದುಗ್ಗಾವತ್ತಿ, ವಟ್ಲಹಳ್ಳಿ ಗ್ರಾಮದಲ್ಲಿ ಗುರುವಾರ ಸ್ಥಳೀಯ ಬಿಜೆಪಿ  ಮುಖಂಡರು ಹಮ್ಮಿಕೊಂಡಿರುವ ಜನ ಸಂಪರ್ಕ ಅಭಿಯಾನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಹರಪನಹಳ್ಳಿ ಕ್ಷೇತ್ರ ಮೀಸಲಾತಿಯಿಂದ ಸಾಮಾನ್ಯ ವರ್ಗಕ್ಕೆ ಬದಲಾದ ಸಂದರ್ಭದಲ್ಲಿ ಕರುಣಾಕರರೆಡ್ಡಿ ಒಂದು ಬಾರಿ ಸ್ಪರ್ಧೆ ಮಾಡುತ್ತಾರೆ. ನಂತರ ಸ್ಥಳೀಯ ನಾಯಕರಿಗೆ ಅವಕಾಶ ಮಾಡಿಕೊಡುತ್ತೇವೆ ಎಂಬುವುದಾಗಿ ಪಕ್ಷದ ಮುಖಂಡರು ಭರವಸೆ ನೀಡಿದ್ದರು. ಆದರೆ ನಾನೇ ಇರಬೇಕು ಎನ್ನುವ ಧೋರಣೆಯನ್ನು ಕರುಣಾಕರರೆಡ್ಡಿ ಹೊಂದಿದ್ದಾರೆ. ಇಂತವರಿಗೆ ತಕ್ಕ ಪಾಠ ಕಲಿಸಬೇಕು ಎಂದರು. 

ಬಿಜೆಪಿ ಮುಖಂಡ ಅರಸೀಕೆರೆ ಎನ್‌. ಕೊಟ್ರೇಶ್‌ ಮಾತನಾಡಿ, ದುಡ್ಡಿನಿಂದ ಚುನಾವಣೆಯಲ್ಲಿ ಗೆಲ್ಲುತ್ತೀವಿ ಎನ್ನುವ ವಲಸೆ
ನಾಯಕರಿಗೆ ಕ್ಷೇತ್ರದಿಂದ ಗೇಟ್‌ ಪಾಸ್‌ ಕೊಡಬೇಕಿದೆ. ಕಳೆದ 10 ವರ್ಷದಿಂದ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳಾಗಿಲ್ಲ.
ಪಕ್ಷದಲ್ಲಿ ನಮ್ಮ ಹಕ್ಕು ಕೇಳಿದ್ರೆ ನಮ್ಮನ್ನು ಭಿನ್ನಮತೀಯರು, ಉಚ್ಚಾಟಿಸುತ್ತೇವೆ ಎನ್ನುತ್ತಾರೆ. ಸ್ಥಳೀಯ ನಾಯಕರ ಬೆಳವಣಿಗೆಗೆ
ಸಹಿಸದಿರುವ ವಲಸೆ ಬಂದಿರುವ ನಾಯಕರನ್ನು ಜನರು ಕ್ಷೇತ್ರದಿಂದಲೇ ಉಚ್ಚಾಟಿಸಬೇಕು. ಜನರ ಕಷ್ಟ-ಸುಖಕ್ಕೆ ಸ್ಪಂದಿಸುವ ಸ್ಥಳೀಯ ನಾಯಕರನ್ನು ಚುನಾವಣೆಯಲ್ಲಿ ಗೆಲ್ಲಿಸಿ ತಮ್ಮ ಸೇವೆ ಮಾಡಲು ಅವಕಾಶ ಮಾಡಿಕೊಡಬೇಕೆಂದು ಕೋರಿದರು.

ಬಿಜೆಪಿ ಜಿಲ್ಲಾ ಮಾಜಿ ಉಪಾಧ್ಯಕ್ಷ ಪಿ.ಮಹಾಬಲೇಶ್ವರಗೌಡ ಮಾತನಾಡಿ, 371ಜೆ ಕಲಂ ಸೌಲಭ್ಯದಿಂದ ತಾಲೂಕು ವಂಚಿತವಾಗಲು ಕರುಣಾಕರರೆಡ್ಡಿಯೇ ಕಾರಣವಾಗಿದ್ದಾರೆ. ಅಂದು ಕಂದಾಯ ಮಂತ್ರಿಯಾಗಿದ್ದ ರೆಡ್ಡಿ ಇದರ ಬಗ್ಗೆ ತುಟಿ ಬಿಚ್ಚಲಿಲ್ಲ. ನಿಮ್ಮ ಆಶೀರ್ವಾದ ಪಡೆದ ರೆಡ್ಡಿ ಮೈಸೂರಿನಲ್ಲಿ ಭೂಮಿ ಡಿನೋಟಿμಕೇಷನ್‌ ಮಾಡಿ 800 ಕೋಟಿರೂ ಅಕ್ರಮ ಆಸ್ತಿ ಗಳಿಸಿದ ಆರೋಪ ಎದುರಿಸುತ್ತಿದ್ದಾರೆ. ಕ್ಷೇತ್ರದ ಜನರನ್ನು ಚುನಾವಣೆ ಸಂದರ್ಭದಲ್ಲಿ ಹಣದಿಂದ ಕೊಂಡುಕೊಳ್ಳಲು ಹವಣಿಸುತ್ತಿರುವ ಇವರಿಗೆ
ಜನರು ತಕ್ಕ ಉತ್ತರ ನೀಡಬೇಕು ಎಂದರು.  ದುಗ್ಗಾವತ್ತಿ, ಶಾಂತಿನಗರ, ಖಂಡಿಕೇರಿ ತಾಂಡಾ, ವಟ್ಲಹಳ್ಳಿ, ಕಡತಿ, ನಂದ್ಯಾಲ,
ನಿಟ್ಟೂರು, ನಿಟ್ಟೂರು ಬಸಾಪುರ, ತಾವರಗೊಂದಿ, ಮತ್ತೂರು, ಯರಬಾಳು ಗ್ರಾಮದಲ್ಲಿ ಜನ ಸಂಪರ್ಕ ಅಭಿಯಾನ ನಡೆಯಿತು. ತಾಲೂಕು ಬಿಜೆಪಿ ಮಾಜಿ ಅಧ್ಯಕ್ಷ ಆರುಂಡಿ ನಾಗರಾಜ್‌, ವೀರಶೈವ ಸಮಾಜದ ತಾಲೂಕಾಧ್ಯಕ್ಷ ಗುಂಡಗತ್ತಿ ಮಂಜುನಾಥ್‌,
ಮುಖಂಡರಾದ ಮೈದೂರು ರಾಮಪ್ಪ, ಶೆಟ್ಟಿನಾಯ್ಕ, ಗುಂಡಗತ್ತಿ ಕೋಟ್ರಪ್ಪ, ಕಸವನಹಳ್ಳಿ ನಾಗೇಂದ್ರಪ್ಪ, ಪರುಶುರಾಮ, ದುಗ್ಗಾವತ್ತಿ
ವಿಶ್ವನಾಥ್‌ ಮಾತನಾಡಿದರು. 

ಮುಖಂಡರಾದ ನಾಗರಾಜ್‌ ಪಾಟೀಲ್‌, ಓಂಕಾರಗೌಡ, ಚಿಕ್ಕೇರಿ ವೆಂಕಪ್ಪ, ಕಂಚಿಕೇರಿ ಕೆಂಚಪ್ಪ, ಬೇವಿನಹಳ್ಳಿ ನಿಂಗಪ್ಪ, ತೆಲಿಗಿ
ಮಂಜುನಾಥ್‌, ಎಚ್‌.ಎಂ.ಜಗದೀಶ್‌, ಡಿ.ಚನ್ನನಗೌಡ, ಹಲುವಾಗಲು ಕೃಷ್ಣಪ್ಪ, ಕುಂಚೂರು ಮಹಬೂಬ್‌ಬಸಾಬ್‌, ತೇಜು,
ಹರ್ಷ, ಸೋಮಣ್ಣ, ವಟ್ಲಹಳ್ಳಿ ಎಂ.ಬೆಟ್ಟಪ್ಪ, ಶಿವಮೂರ್ತೆಪ್ಪ, ಮಹೇಶಪ್ಪ, ಗೌಡರ ಚಿಕ್ಕಪ್ಪ, ಎಸ್‌.ಗಂಗಾಧರ್‌, ಮಲ್ಲಿಕಾರ್ಜುನಪ್ಪ, ವಾಸಪ್ಪ, ಬಿ.ಸುರೇಶಪ್ಪ ಇತರರಿದ್ದರು. 

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.