ನಾಲ್ಕು ವರ್ಷದಲ್ಲಿ ಪೋಕ್ಸೋ ಕಾಯ್ದೆಯಡಿ 202 ಪ್ರಕರಣ


Team Udayavani, Jul 22, 2017, 1:34 PM IST

22-GUB-7.jpg

ದಾವಣಗೆರೆ: ಹೆಣ್ಣುಮಕ್ಕಳ ಮೇಲಿನ ಅತ್ಯಾಚಾರ, ಲೈಂಗಿಕ ದೌರ್ಜನ್ಯ ತಡೆಗೆ ಜಾರಿಯಾದ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ (ಪೋಕ್ಸೋ)ಯಡಿ ಈವರೆಗೆ ಜಿಲ್ಲೆಯಲ್ಲಿ 202 ಪ್ರಕರಣ ದಾಖಲಾಗಿದ್ದು, ಈ ಪ್ರಕರಣದ ಆರೋಪಿಗಳಲ್ಲಿ ಜೈಲು ಪಾಲಾಗುತ್ತಿರುವುದು 25 ವರ್ಷ ತುಂಬದ ಯುವಕರೇ ಹೆಚ್ಚು.

ಪೊಕ್ಸೋ ಕಾಯ್ದೆ ಜಾರಿಯಾದ(2013ರಿಂದ) ನಾಲ್ಕು ವರ್ಷಗಳಲ್ಲಿ ಜಿಲ್ಲೆಯ 18 ಪೊಲೀಸ್‌ ಠಾಣೆಗಳಲ್ಲಿ ದಾಖಲಾದ ಪ್ರಕರಣಗಳ ಸಂಖ್ಯೆ ಅಚ್ಚರಿಮೂಡಿಸುವಂತಿದೆ. ಅಪ್ರಾಪ್ತ ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿರುವ ಪ್ರಮಾಣ ನಿಬ್ಬೆರಗಾಗಿಸುವಂತಿದೆ. ವರ್ಷದಿಂದ ವರ್ಷಕ್ಕೆ ಏರುತ್ತಲೇ ಇರುವ ಈ ಪ್ರಕರಣಗಳಲ್ಲಿ ಈವರೆಗೆ ಬಂಧನಕ್ಕೆ ಒಳಗಾದವರಲ್ಲಿ 25 ವರ್ಷಕ್ಕಿಂತ ಕಡಮೆ ಇರುವವರ ಸಂಖ್ಯೆಯೇ ಹೆಚ್ಚು. ಬಂಧನಕ್ಕೆ ಒಳಗಾದವರ ಪೈಕಿ ಒಟ್ಟು 235 ಆರೋಪಿಗಳು 25 ವರ್ಷದೊಳಗಿನವರಾಗಿದ್ದಾರೆ.

ದಾವಣಗೆರೆ ತಾಲೂಕು ವ್ಯಾಪ್ತಿಯಲ್ಲಿ ದಾಖಲಾದ ಪ್ರಕರಣಗಳ ಪೈಕಿ ದಾವಣಗೆರೆ ನಗರ ವ್ಯಾಪ್ತಿಯಲ್ಲಿಯೇ ಅತಿ ಹೆಚ್ಚಿನ ಪ್ರಕರಣಗಳು ದಾಖಲಾಗಿವೆ. ನಗರ ವ್ಯಾಪ್ತಿಯ ಎಲ್ಲಾ ಠಾಣೆಗಳಲ್ಲಿ ದಾಖಲಾದ ಪ್ರಕರಣಗಳ ಸಂಖ್ಯೆ 76 ಆಗಿವೆ. ಇದರಲ್ಲಿ ಬಂಧಿತರಾದ ಆರೋಪಿಗಳ ಪೈಕಿ 95 ಜನರು 25 ವರ್ಷದೊಳಗಿನ ಯುವಕರಾಗಿದ್ದಾರೆ.

ಪ್ರೇಮ ಪ್ರಕರಣಗಳೇ ಹೆಚ್ಚು….
ದಾಖಲಾದ ಪ್ರಕರಣಗಳಲ್ಲಿ ಪ್ರೇಮ ಪ್ರಕರಣಗಳೇ ಶೇ.80ಕ್ಕೂ ಹೆಚ್ಚಿವೆ ಎಂದು ಅಂದಾಜಿಸಲಾಗಿದೆ. 18 ವರ್ಷ ತುಂಬದ ಯುವತಿ ಪ್ರೇಮ ಪಾಶಕ್ಕೆ ಬೀಳುವ ಯುವಕ, ಆಕೆಯನ್ನು ಪುಸಲಾಯಿಸಿಕೊಂಡು ಓಡಿಹೋಗಿ ಮದುವೆಯಾಗುತ್ತಾರೆ. ಇತ್ತ ಹುಡುಗಿ
ಕಡೆಯವರು ದೂರು ದಾಖಲಿಸುತ್ತಾರೆ. ಅಪ್ರಾಪ್ತ ಬಾಲಕಿಯ ಜೊತೆ ಸಮ್ಮತಿಯಿಂದ ಲೈಂಗಿಕ ಸಂಪರ್ಕ ಹೊಂದಿದರೂ ಅದು ಪೋಕ್ಸೋ ಕಾಯ್ದೆಯಡಿ ಅತ್ಯಾಚಾರ ಎಂದೇ ಪರಿಗಣಿಸಲಾಗುವುದು. 2012ರಲ್ಲಿ ದೆಹಲಿಯ ನಿರ್ಭಯ ಅತ್ಯಾಚಾರ ಪ್ರಕರಣ ಸೇರಿದಂತೆ ದೇಶದ ವಿವಿಧ ಕಡೆ ನಡೆದ ದೌರ್ಜನ್ಯ ತಡೆಗೆ ಜಾರಿಗೆ ಬಂದ ಕಾನೂನಿನಡಿ ಬಂಧಿತರಾಗುತ್ತಿರುವ ಆರೋಪಿಗಳು ಪ್ರೇಮಿಗಳೇ ಹೆಚ್ಚು ಎಂಬುದು ಗಮನಿಸಬೇಕಾಗಿದೆ.

ಪತ್ನಿ-ಮಗು ಮನೇಲಿ, ಗಂಡ ಜೈಲಲಿ: ನ್ಯಾಯಾಲಯದಲ್ಲಿರುವ ವಿಚಾರಣೆ ಹಂತದಲ್ಲಿರುವ ಪ್ರಕರಣಗಳ ಪೈಕಿ ಕೆಲವು ವಿಚಿತ್ರವಾಗಿವೆ. ಮೂರು ವರ್ಷ ಪ್ರೀತಿಸಿದ ಯುವಕ ಒಂದೂವರೆ ವರ್ಷದ ಹಿಂದೆ ಅಪ್ರಾಪ್ತೆ ಪ್ರೇಯಸಿಯನ್ನು ಕರೆದುಕೊಂಡು
ದೂರದ ಊರೊಂದಕ್ಕೆ ಹೋದ. ಅಲ್ಲಿ ದೇವಸ್ಥಾನವೊಂದರಲ್ಲಿ ಪೂಜಾರಿ ಸಮ್ಮುಖದಲ್ಲಿ ಮದುವೆಯಾದ. ಒಂದು ವರ್ಷ ಸಂಸಾರ ಸಹ ನಡೆಸಿದ. ಅವರಿಗೊಂದು ಮಗು ಸಹ ಜನಿಸಿತು. ನಂತರ ತನ್ನವರೊಂದಿಗೆ ಜೀವನ ಕಳೆಯುವ ಉದ್ದೇಶದಿಂದ ಸ್ವಂತ
ಊರಿಗೆ ಬಂದ. ಆದರೆ, ಅಲ್ಲಿಯವರೆಗೆ ನೊಂದು, ಆಕ್ರೋಶ ತಡೆಹಿಡಿದಿದ್ದ ಹುಡುಗಿಯ ಪೋಷಕರು ನೇರ ಪೊಲೀಸರಿಗೆ ದೂರು ನೀಡಿದ್ರು. ಪೊಕ್ಸೋ ಅಡಿ ಪ್ರೇಮಿ ಬಂಧಿತನಾಗಿ, ಜೈಲು ಸೇರಿದ. ಪ್ರೇಯಸಿ ಅರ್ಥಾತ್‌ ಅಪ್ರಾಪ್ತ ಹೆಂಡತಿ ತಮ್ಮ ಪ್ರೇಮದ ದ್ಯೋತಕವಾದ ಮಗುವಿನಿಂದ ತನ್ನ ಪ್ರೇಮಿಯ ಪೋಷಕರೊಂದಿಗೆ ಗಂಡನ ಆಗಮನಕ್ಕೆ ಕಾಯುತ್ತಿರುವ ಪ್ರಕರಣಗಳು ಸಹ
ಇವೆ. ಮುಂದೆ ನ್ಯಾಯಾಲಯ ನೀಡುವ ತೀರ್ಪು ಆಧರಿಸಿ, ಪ್ರೇಮಿಗಳ ಬದುಕು ನಿರ್ಧಾರವಾಗಲಿದೆ.

ಪಾಟೀಲ ವೀರನಗೌಡ

ಟಾಪ್ ನ್ಯೂಸ್

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.