ಧಾರವಾಡದ ಮಿಲನ್ ವಾರಿಯರ್ ಚಾಂಪಿಯನ್
Team Udayavani, Jan 16, 2017, 12:47 PM IST
ಹುಬ್ಬಳ್ಳಿ: ಹುಬ್ಬಳ್ಳಿ ಪ್ರೀಮಿಯರ್ ಲೀಗ್ ದ್ವಿತೀಯ ಆವೃತ್ತಿಯಲ್ಲಿ ಮಿಲನ್ ವಾರಿಯರ್ ಧಾರವಾಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ರವಿವಾರ ನಡೆದ ಅಂತಿಮ ಪಂದ್ಯದಲ್ಲಿ ಮಿಲನ್ ವಾರಿಯರ್ ತಂಡ 89 ರನ್ ಗಳಿಂದ ಕರಾವಳಿ ಕಿಂಗ್ಸ್ ತಂಡವನ್ನು ಪರಾಭವಗೊಳಿಸಿ, ಟ್ರೋಫಿಗೆ ಮುತ್ತಿಟ್ಟಿತು.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಮಿಲನ್ ವಾರಿಯರ್ತಂಡ 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 140 ರನ್ ಗಳಿಸಿತು. ಸಮರ್ಥ ಊಟಿ ತಂಡದ ಪರ ವೈಯಕ್ತಿಕ ಗರಿಷ್ಠ ಮೊತ್ತ (39) ದಾಖಲಿಸಿದರು. ನವೀನ್ ಗಡದಿನ್ನಿ, ರಾಹುಲ್ ನಾಯಕ್ ತಲಾ 2 ವಿಕೆಟ್ ಪಡೆದರು.
ನಂತರ ಬ್ಯಾಟ್ ಮಾಡಿದ ಕರಾವಳಿ ಕಿಂಗ್ಸ್ ಇಶ್ಫಾಕ್ ನಜೀರ್ ಹಾಗೂ ಆನಂದ ಕುಂಬಾರ ಅವರ ದಾಳಿಗೆ ತತ್ತರಿಸಿತು. ಕಿಶೋರ ಕಾಮತ (10) ತಂಡದ ಪರ ಗರಿಷ್ಠ ಮೊತ್ತ ಗಳಿಸಿದ ಬ್ಯಾಟ್ಸ್ಮನ್. ಉಳಿದ ಯಾವುದೇ ಬ್ಯಾಟ್ಸ್ಮನ್ಗಳು ಎರಡಂಕಿ ಮೊತ್ತ ದಾಖಲಿಸುವಲ್ಲಿ ಸಫಲರಾಗಲಿಲ್ಲ.
ತಂಡ 10.5 ಓವರ್ಗಳಲ್ಲಿ ಎಲ್ಲ ವಿಕೆಟ್ ಕಳೆದುಕೊಂಡು ಕೇವಲ 51 ರನ್ ಗಳಿಸಿ ಹೀನಾಯ ಸೋಲು ಕಂಡಿತು.ಆನಂದ ಕುಂಬಾರ 2 ಓವರ್ಗಳಲ್ಲಿ 3 ರನ್ ನೀಡಿ 3 ವಿಕೆಟ್ ಪಡೆದರೆ, ಇಶ್ಫಾಕ್ ನಜೀರ್ 3.5 ಓವರ್ಗಳಲ್ಲಿ 23 ರನ್ ನೀಡಿ 3 ವಿಕೆಟ್ ಪಡೆದರು.
ಮಿಲನ್ ವಾರಿಯರ್ ತಂಡದ ಇಶ್ಫಾಕ್ ನಜಿರ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು. ಸಮರ್ಥ ಊಟಿ (ಮಿಲನ್ ವಾರಿಯರ್) ಉತ್ತಮ ಬ್ಯಾಟ್ಸ್ ಮನ್ ಪ್ರಶಸ್ತಿ, ಇಶ್ಫಾಕ್ ನಜಿರ್ (ಮಿಲನ್ ವಾರಿಯರ್) ಉತ್ತಮ ಬೌಲರ್ ಪ್ರಶಸ್ತಿ, ಕಿಶೋರ ಕಾಮತ (ಕರಾವಳಿ ಕಿಂಗ್ಸ್) ಸರಣಿ ಶ್ರೇಷ್ಠ ಪ್ರಶಸ್ತಿ, ಸ್ವಪ್ನಿಲ್ ಯೆಳವೆ (ಕರಾವಳಿ ಕಿಂಗ್ಸ್) ಭರವಸೆಯ ಆಟಗಾರ ಪ್ರಶಸ್ತಿಗೆ ಭಾಜನರಾದರು.
ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಟ್ರೋಫಿ ನೀಡಲಾಯಿತು. ಈ ಸಂದರ್ಭದಲ್ಲಿ ಕೆಎಸ್ಸಿಎ ಧಾರವಾಡ ವಲಯದ ಅಧ್ಯಕ್ಷ ವೀರಣ್ಣ ಸವಡಿ, ಸಂಯೋಜಕ ಬಾಬಾ ಭೂಸದ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ
Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ
Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ