ಪಕ್ಷ ಸಂಘಟನೆಗೆ ಸಕ್ರಿಯರಾಗಿ: ನಾಡಗೌಡ


Team Udayavani, Jan 16, 2017, 12:50 PM IST

hub2.jpg

ಹುಬ್ಬಳ್ಳಿ: ರಾಜ್ಯ ರಾಜಕೀಯದಲ್ಲಿ ಬದಲಾವಣೆ ಖಂಡಿತವಾಗಿದ್ದು, ಮುಂಬರುವ ದಿನಗಳಲ್ಲಿ ಸಂಯುಕ್ತ ಜನತಾದಳ(ಜೆಡಿಯು)ಗೆ ಉತ್ತಮ ಅವಕಾಶವಿದೆ. ಹೊರಗಿನಿಂದ ಬರುವ ನಾಯಕರಿಗಾಗಿ ಕಾಯ್ದು ಕುಳಿತುಕೊಳ್ಳದೆ, ಪಕ್ಷದ ಮುಖಂಡರು, ಕಾರ್ಯಕರ್ತರು ಪಕ್ಷ ಸಂಘಟನೆಗೆ ಸಕ್ರಿಯವಾದರೆ ನಿರ್ಣಾಯಕ ಸ್ಥಿತಿಗೆ ಬಂದೇ ಬರುತ್ತೇವೆ ಎಂದು ಜೆಡಿಯು ರಾಜ್ಯಾಧ್ಯಕ್ಷ ಡಾ| ಎಂ.ಪಿ.ನಾಡಗೌಡ ಹೇಳಿದರು. 

ಇಲ್ಲಿನ ಜೆಡಿಯು ಕಚೇರಿಯಲ್ಲಿ ರವಿವಾರ ಆಯೋಜಿಸಿದ್ದ ಪಕ್ಷದ ಚೈತನ್ಯ ಸಭೆ ಹಾಗೂ ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಸ್ತುತ ರಾಜ್ಯದಲ್ಲಿ ಕೆಟ್ಟ ಸರಕಾರ ಇದೆ ಎಂದರೆ, ಅನ್ಯಾಯದ ಬಗ್ಗೆ ಮೌನ ವಹಿಸುವ ಮೂಲಕ ವಿಪಕ್ಷಗಳು ಸರಕಾರಕ್ಕಿಂತ ಹೆಚ್ಚು ಕೆಟ್ಟ ಸ್ಥಿತಿಯಲ್ಲಿವೆ ಎಂದರು.

ಯಡಿಯೂರಪ್ಪಗೆ ಸವಾಲು: ಮುಖ್ಯಮಂತ್ರಿಯಾದರೆ 24 ಗಂಟೆಯಲ್ಲಿ ಮಹದಾಯಿ ಸಮಸ್ಯೆ ಇತ್ಯರ್ಥ ಪಡಿಸುವುದಾಗಿ ಹೇಳಿರುವ ಬಿಜೆಪಿ  ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ, ಸಮಸ್ಯೆ ಇತ್ಯರ್ಥಕ್ಕೆ ಮುಂದಾದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಶೇಷ ಮನವಿ ಮಾಡಿ, ಒಂದು ದಿನದ ಮಟ್ಟಿಗೆ ಯಡಿಯೂರಪ್ಪ ಅವರಿಗೆ ಮುಖ್ಯಮಂತ್ರಿ ಪಟ್ಟ ಕೊಡಿಸಲಾಗುವುದು. ಮಹದಾಯಿ ಇತ್ಯರ್ಥ ಪಡಿಸಿ ತೋರಿಸಲಿ ಎಂದು ಸವಾಲು ಹಾಕಿದರು.  

ಸಾಮೂಹಿಕ ನಾಯಕತ್ವ ಪರಿಕಲ್ಪನೆ: ಜೆಡಿಯು ನಾಯಕ ಮಹಿಮಾ ಪಟೇಲ್‌ ಮಾತನಾಡಿ, ಜನತಾ ಪರಿವಾರ ಮೊದಲಿನಿಂದಲೂ ಸಾಮೂಹಿಕ  ನಾಯಕತ್ವದ ಪರಿಕಲ್ಪನೆಯಲ್ಲಿ ಬಂದಿದೆ. ಪ್ರಸ್ತುತ ಸ್ಥಿತಿಯಲ್ಲಿ ನಾವು ಅಧಿಕಾರಕ್ಕೆ ಬರುತ್ತೇವೆ ಎಂದರೆ ಹಾಸ್ಯ-ಅಪಹಾಸ್ಯ ಮಾಡುವವರೇ ಅಧಿಕ. 1983ರಲ್ಲಿ ಇದೇ ಸ್ಥಿತಿ ಇತ್ತು, ಜನತಾ ಪಕ್ಷ ಅಧಿಕಾರಕ್ಕೆ ಬರುವ ನಿರೀಕ್ಷೆ ಯಾರಿಗೂ ಇರಲಿಲ್ಲ.

ಅಂದು ಮೊದಲ ಬಾರಿಗೆ ಅಧಿಕಾರ ಹಿಡಿದಿತ್ತು. ಇಂದು ಸಹ ಅದೇ ಸ್ಥಿತಿ ಇದೆ. ವಿವಿಧ ಪಕ್ಷಗಳಲ್ಲಿನ ಜನತಾ ಪರಿವಾರದ ಅನೇಕರು ಮತ್ತೆ ಜೆಡಿಯು ಕಡೆ ನೋಡುತ್ತಿದ್ದಾರೆ ಎಂದರು. ಜೆಡಿಯು ಒಂದು ರೀತಿ ವೀಣೆಯ  ಸುಮಧುರ ನಾದವಿದ್ದಂತೆ. ಡೊಳ್ಳು ಬಡಿತದ ಅಬ್ಬರದಲ್ಲಿ ಅದು ಕೇಳಿಸದು. ಅಬ್ಬರ ನಿಂತ ಕೂಡಲೇ ಸುಮಧುರ ಧ್ವನಿ ಹಲವರನ್ನು ಆಕರ್ಷಿಸುತ್ತದೆ.

ಪಕ್ಷ ಸಂಘಟನೆ ದೃಷ್ಟಿಯಿಂದ ಮುಂದಿನ ತಿಂಗಳು ಕೋಲಾರದಲ್ಲಿ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದರು. ರೈತ ಮುಖಂಡ ಎಂ.ಗೋಪಾಲ ಮಾತನಾಡಿ, ಜನರ ಬಗೆಗಿನ ಪ್ರೀತಿ ಹೃದಯದಿಂದ ಬರಬೇಕೆ ವಿನಃ ತುಟಿಯಿಂದ ಅಲ್ಲ. ರಾಜಕೀಯ ಪಕ್ಷಗಳು ಜನರ ಸಮಸ್ಯೆ ಜೀವಂತವಾಗಿರಿಸಿ ಪರಿಹಾರದ ನಾಟಕವಾಡುತ್ತಿವೆ ಎಂಬುದಕ್ಕೆ ಮಹದಾಯಿ ಜ್ವಲಂತ ಸಾಕ್ಷಿ.

ಪ್ರಧಾನಿ ಮನಸ್ಸು ಮಾಡಿದರೆ ಒಂದು ತಾಸಿನಲ್ಲಿ ಇತ್ಯರ್ಥವಾಗಲಿದೆ ಎಂದರು. ಮಾಜಿ ಶಾಸಕ ಧರ್ಮಪ್ಪ ಮಾತನಾಡಿ, ಭ್ರಷ್ಟಾಚಾರ-ಕಪ್ಪು ಹಣ ತಡೆ ನೆಪದಲ್ಲಿ ಜಾರಿಗೊಂಡ ನೋಟುಗಳ ಅಪನಗದೀಕರಣ ಹಲವು ಸಮಸ್ಯೆ ಸೃಷ್ಟಿಸಿದೆ. ಆದರೆ, ಸಾವಿರಾರು ಕೋಟಿ ಸಂಪತ್ತು ಹೊಂದಿದ ಒಬ್ಬರೇ ಒಬ್ಬ ರಾಜಕಾರಣಿ ಮನೆ ಮೇಲೆ ದಾಳಿ ನಡೆದಿಲ್ಲ.

ಭ್ರಷ್ಟಾಚಾರ ತಡೆಯ ಅಣಕು ಪ್ರದರ್ಶನವಷ್ಟೇ ಇದು ಎಂದು ವ್ಯಂಗ್ಯವಾಡಿದರು. ಪಕ್ಷದ ಮುಖಂಡರಾದ ಸಾವಿತ್ರಿ ಗುಂಡಿ, ಎಸ್‌.ಹೈಬತ್ತಿ, ಜಿ.ಕೆ.ಸಿ.ರೆಡ್ಡಿ ಇನ್ನಿತರರು ಮಾತನಾಡಿದರು. ಮುಖಂಡರಾದ ಶಶಿಕಾಂತ ತಾವರೆಗೆ, ಶ್ರೀಶೈಲಗೌಡ ಕಮತರ, ರತ್ನಾ ಗಂಗಣ್ಣವರ, ಜಿ.ಎಸ್‌. ತೋಬದ, ಉಸ್ಮಾನ್‌ ಶರೀಫ್, ಪದ್ಮಾ ಸೂರ್ಯವಂಶ, ಕೋರಿಶೆಟ್ಟರ, ಶೇಖಣ್ಣ ಹೊರಕೇರಿ ಇನ್ನಿತರರು ಇದ್ದರು.   

ಟಾಪ್ ನ್ಯೂಸ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MONEY (2)

Hubli ಅಪಾರ್ಟಮೆಂಟ್‌ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ

8-

Hubli: ದಿಂಗಾಲೇಶ್ವರರು ಸ್ಪರ್ಧಿಸುತ್ತಿರುವ ಸಮಯ, ಜಾಗ ಸರಿಯಿಲ್ಲ: ಗುಣಧರನಂದಿ ಮಹಾರಾಜ

L.S Polls: ನಮ್ಮದು ಧರ್ಮ ಯುದ್ಧ, ಧರ್ಮದ ಹಾದಿಯಲ್ಲೇ ಸಾಗುತ್ತೇವೆ: ದಿಂಗಾಲೇಶ್ವರ ಶ್ರೀ

L.S Polls: ನಮ್ಮದು ಧರ್ಮ ಯುದ್ಧ, ಧರ್ಮದ ಹಾದಿಯಲ್ಲೇ ಸಾಗುತ್ತೇವೆ: ದಿಂಗಾಲೇಶ್ವರ ಶ್ರೀ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

5-fusion

UV Fusion: ನಾಟಕದ ಜೀವನಕ್ಕೆ ಯಾತಕ್ಕಾಗಿ ದೇವರ ಹೊಣೆ

4-uv-fusion

Women: ಜಗದೆಲ್ಲ ನೋವನುಂಡರೂ ಹಿತ ಬಯಸುವವಳು ಮಾತೇ

3-uv-fusion

Holi: ಬಣ್ಣಗಳ ಹಬ್ಬ ಹೋಳಿ ಹಬ್ಬ, ಉಲ್ಲಾಸ ತರುವ ಬಣ್ಣಗಳ ಹಬ್ಬ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.