ಮೃತ ಕುಸ್ತಿಪಟು ಸಂತೋಷ ಕುಟುಂಬಕ್ಕೆ ಜೋಶಿ ಸಾಂತ್ವನ
Team Udayavani, Feb 18, 2017, 3:00 PM IST
ಧಾರವಾಡ: ಒಲಿಂಪಿಕ್ಸ್ನ ಕುಸ್ತಿ ಸ್ಪರ್ಧೆಯಲ್ಲಿ ಕಾಲು ಮುರಿತದಿಂದ ಕಿಮ್ಸ್ಗೆ ದಾಖಲಾಗಿ ಶಸ್ತ್ರಚಿಕಿತ್ಸೆ ಬಳಿಕ ಮೃತಪಟ್ಟ ಚಿಕ್ಕಮಲ್ಲಿಗವಾಡ ಗ್ರಾಮದ ಕುಸ್ತಿಪಟು ಸಂತೋಷ ಹೊಸಮನಿ ಅವರ ಮನೆಗೆ ಸಂಸದ ಪ್ರಹ್ಲಾದ ಜೋಶಿ ಹಾಗೂ ಶಾಸಕ ಅರವಿಂದ ಬೆಲ್ಲದ ಭೇಟಿ ನೀಡಿದರು.
ಚಿಕ್ಕಮಲ್ಲಿಗವಾಡ ಗ್ರಾಮದ ಸಂತೋಷ ಅವರ ಮನೆಗೆ ಭೇಟಿ ನೀಡಿ ಕುಟುಂಬ ವರ್ಗಕ್ಕೆ ಸಾಂತ್ವನ ಹೇಳಿದ ಸಂಸದರು, ಬಿಜೆಪಿ ಪಕ್ಷದಿಂದ ಒಂದು ಲಕ್ಷ ರೂ. ಹಣ ನೀಡುವುದಾಗಿ ಭರವಸೆ ನೀಡಿದರು. ಬಳಿಕ ಮಾತನಾಡಿದ ಸಂಸದ ಜೋಶಿ, ಓಲಿಂಪಿಕ್ಸ್ ಸಮಿತಿ ಕೈಗೊಳ್ಳಬೇಕಿದ್ದ ಮುಂಜಾಗ್ರತೆಯಲ್ಲಿ ಎಡವಿದ್ದು ಮತ್ತು ಬೇಜವಾಬ್ದಾರಿಯಿಂದ ಉತ್ಸಾಹಿ ಕ್ರೀಡಾ ಪಟುವನ್ನು ಕಳೆದುಕೊಂಡಂತಾಗಿದೆ.
ಇದಕ್ಕೆ ಜಿಲ್ಲಾಡಳಿತ ಮತ್ತು ಜಿಲ್ಲಾ ಮಂತ್ರಿಗಳು ಕಾರಣ. ಸಮಯಕ್ಕೆ ಸರಿಯಾಗಿ ಕ್ರೀಡಾಪಟುವಿಗೆ ಯೋಗ್ಯ ಚಿಕ್ಸಿತೆ ನೀಡಲು ಕ್ರಮ ಕೈಗೊಳ್ಳದೇ ಹೋಗಿದ್ದರಿಂದ ಒಂದು ಜೀವ ಬಲಿಯಾಗಿದೆ. ಸದ್ಯ ಮೃತ ಕುಟುಂಬ ವರ್ಗಕ್ಕೆ ಸರಕಾರದಿಂದ ಸಹಾಯ ಹಸ್ತ ನೀಡುವ ಜವಾಬ್ದಾರಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಮೇಲಿದೆ ಎಂದರು. ಮಾಜಿ ಶಾಸಕಿ ಸೀಮಾ ಮಸೂತಿ, ಈರೇಶ ಅಂಚಟಗೇರಿ, ಬಸವರೆಡ್ಡಿ, ಮೋಹನ ರಾಮದುರ್ಗ, ಮಂಜು ಜೋಳಪ್ಪನವರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ
ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್
ರಾಜ್ಯದಲ್ಲಿ ಎನ್ಕೌಂಟರ್ ಕಾನೂನು ಜಾರಿ ಅವಶ್ಯ: ಸಂತೋಷ್ ಲಾಡ್
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ