ನಾಳೆಯಿಂದ ಯುಗಾದಿ ಮಹೋತ್ಸವ
Team Udayavani, Mar 22, 2017, 3:42 PM IST
ಹುಬ್ಬಳ್ಳಿ: ಸ್ಥಳೀಯ ಉಣಕಲ್ಲ ಶ್ರೀ ಸದ್ಗುರು ಸಿದ್ದೇಶ್ವರ ಸ್ವಾಮಿಗಳ ಯುಗಾದಿ ಮಹೋತ್ಸವ ಕಾರ್ಯಕ್ರಮಗಳು ಮಾ. 23ರಿಂದ 28ರ ವರೆಗೆ ಹಾಗೂ ರಥೋತ್ಸವ ಮಾ. 29ರಂದು ಸಂಜೆ 5:30 ಗಂಟೆಗೆ ನೆರವೇರಲಿದೆ.
ಯುಗಾದಿ ಮಹೋತ್ಸವದ ಅಂಗವಾಗಿ ಮಾ. 22ರಂದು ರಾತ್ರಿ 10:00 ಗಂಟೆಗೆ ಉಣಕಲ್ಲ ಚಲವಾದಿ ಓಣಿಯ ಸದ್ಗುರು ಸಿದ್ದೇಶ್ವರ ಭಜನಾ ಮಂಡಳಿಯಿಂದ ಮಹಾಜಾಗರಣೆಯೊಂದಿಗೆ ಭಜನೆ, 23ರಂದು ಬೆಳಗ್ಗೆ ಬ್ರಾಹ್ಮಿà ಮುಹೂರ್ತದಲ್ಲಿ ಸದ್ಗುರು ಸಿದ್ದೇಶ್ವರ ಸ್ವಾಮೀಜಿ ಮೂರ್ತಿಯ ಮಹಾರುದ್ರಾಭಿಷೇಕದೊಂದಿಗೆ ಶಿವನಾಮ ಸಪ್ತಾಹ ಆರಂಭ.
28ರ ವರೆಗೆ ಪ್ರತಿದಿನ ಸಂಜೆ 7:00 ಗಂಟೆಗೆ ವಿವಿಧ ಮಠಾಧೀಶರ ಸಾನ್ನಿಧ್ಯದಲ್ಲಿ ಮಹನೀಯರಿಂದ ಪ್ರವಚನ ಹಾಗೂ ರಾತ್ರಿ 10:00 ಗಂಟೆಗೆ ವಿವಿಧ ಭಜನಾ ಮಂಡಳಿಗಳಿಂದ ಭಜನೆ ನಡೆಯಲಿದೆ. 29ರಂದು ಬೆಳಗ್ಗೆ ಶ್ರೀ ಸದ್ಗುರು ಸಿದ್ದೇಶ್ವರ ಸ್ವಾಮೀಜಿ ಗದ್ಗುಗೆಯ ರುದ್ರಾಭಿಷೇಕ, ಮಹಾಪೂಜೆ.
10:05 ಗಂಟೆಗೆ ರುದ್ರಾಕ್ಷಿಮಠದ ಬಸವಲಿಂಗ ಸ್ವಾಮೀಜಿ ಅಧ್ಯಕ್ಷತೆ ಹಾಗೂ ಡಾ| ಸಿದ್ದಯ್ಯನವರು ಹಿರೇಮಠ, ಮಹಾಂತಯ್ಯಸ್ವಾಮಿ ಹಿರೇಮಠ ಪೌರೋಹಿತ್ಯದಲ್ಲಿ ಸಾಮೂಹಿಕ ಕಲ್ಯಾಣ ಮಹೋತ್ಸವ ನಡೆಯಲಿದೆ. ಮಧ್ಯಾಹ್ನ 12:30 ಗಂಟೆಗೆ ಮಹಾಪ್ರಸಾದ ಹಾಗೂ ಸಂಜೆ 5:30 ಗಂಟೆಗೆ ರಥೋತ್ಸವ ಜರುಗಲಿದೆ.
ದುರ್ಗದ ಓಣಿ ಬಯಲಿನಲ್ಲಿ ಐರಾವಣ ಮೈರಾವಣ ಬಯಲಾಟ ನಡೆಯಲಿದೆ. 30ರಿಂದ ಎ. 2ರ ವರೆಗೆ ಪ್ರತಿದಿನ ಸಂಜೆ 4:30 ಗಂಟೆಗೆ ಬಯಲಾಂಗಣ ಕುಸ್ತಿಗಳು ಹಾಗೂ ಮಂದಿರದ ಆವರಣದಲ್ಲಿ ಪ್ರತಿದಿನ ಸಂಜೆ 7:00 ಗಂಟೆಗೆ ಡಾ| ಗಂಗೂಬಾಯಿ ಹಾನಗಲ್ಲ ಮ್ಯೂಸಿಕ್ ಫೌಂಡೇಶನ್ ತಂಡದವರಿಂದ ನೃತ್ಯ ಕಾರ್ಯಕ್ರಮಗಳು ನಡೆಯಲಿವೆ.
ಎ. 2ರಂದು ಸಂಜೆ 7:00 ಗಂಟೆಗೆ ಎರಡೆತ್ತಿನ ಮಠದ ಸಿದ್ಧಲಿಂಗ ಸ್ವಾಮಿಗಳ ಸಾನ್ನಿಧ್ಯದಲ್ಲಿ ತೇರಿನ ಕಳಸ ಇಳಿಸುವ ಪೂಜಾ ಕಾರ್ಯಕ್ರಮ ಹಾಗೂ ಗ್ರಾಮದ ವಯೋವೃದ್ಧರಿಗೆ ಸತ್ಕಾರ ಸಮಾರಂಭ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ