ಸಿಲಿಂಡರ್ ಬೆಲೆ ಹೆಚ್ಚಳಕ್ಕೆ ವಿರೋಧ
Team Udayavani, Mar 28, 2017, 1:32 PM IST
ಹುಬ್ಬಳ್ಳಿ: ಅಡುಗೆ ಅನಿಲ ಹಾಗೂ ಇನ್ನಿತರ ಆಹಾರ ಧಾನ್ಯಗಳ ಬೆಲೆ ಹೆಚ್ಚಳ ಹಿನ್ನೆಲೆಯಲ್ಲಿ ಕೇಂದ್ರ ಸರಕಾರದ ಜನವಿರೋಧಿ ನೀತಿ ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ)ದಿಂದ ಸೋಮವಾರ ಪ್ರತಿಭಟಿಸಲಾಯಿತು.
ಕೇಂದ್ರ ಸರಕಾರ ಸಬ್ಸಿಡಿ ರಹಿತ ಅಡುಗೆ ಅನಿಲ ಪ್ರತಿ ಸಿಲಿಂಡರ್ ಬೆಲೆಯನ್ನು 678.50ರೂ.ನಿಂದ 765ರೂ.ಗೆ ಹೆಚ್ಚಿಸಿದೆ. ಪ್ರತಿ ಸಿಲಿಂಡರ್ಗೆ ಸುಮಾರು 86 ರೂ. ಹೆಚ್ಚಳವಾಗಿದ್ದು, ಸಿಲಿಂಡರ್ ವಿತರಿಸುವವರು 20ರಿಂದ 30ರೂ.ಗಳನ್ನು ಪಡೆಯುತ್ತಾರೆ.
ಅಲ್ಲಿಗೆ ಜನ 780ರಿಂದ 790ರೂ. ನೀಡಿ ಅಡುಗೆ ಅನಿಲ ಸಿಲಿಂಡರ್ ಪಡೆಯಬೇಕಾಗಿದೆ. ಫೆಬ್ರವರಿ 1ರಿಂದಲೇ ಸಬ್ಸಿಡಿಯೇತರ ಸಿಲಿಂಡರ್ ಬೆಲೆ ಹೆಚ್ಚವಾಗಿದೆ. ಮಧ್ಯಮ ಮತ್ತು ಬಡವರು ದುಬಾರಿ ಬೆಲೆಯ ಅಡುಗೆ ಅನಿಲ ಸಿಲಿಂಡರ್ ಖರೀದಿಸುವುದು ಕಷ್ಟಕರವಾಗಿದೆ.
ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಬೆಲೆ ಏರಿಕೆ ವಿರುದ್ಧದ ವಿಚಾರಗಳನ್ನೇ ಜನರ ಮುಂದಿಟ್ಟು ಬೆಲೆಗಳನ್ನು ಇಳಿಸುವುದಾಗಿ ಹೇಳಿ ಅಧಿಕಾರಕ್ಕೆ ಬಂದಿತ್ತು. ಆದರೆ ಕಳೆದ ಎರಡು ವರ್ಷಗಳಲ್ಲಿ ಕೇವಲ ಅಡುಗೆ ಅನಿಲ ಸಿಲಿಂಡರ್ ಮಾತ್ರವಲ್ಲದೆ ಆಹಾರ ಧಾನ್ಯ,
ಖಾದ್ಯ ತೈಲಗಳ ಬೆಲೆಗಳು ಹೆಚ್ಚಳವಾಗಿ ಜನಸಾಮಾನ್ಯರ ಬದುಕು ದುಸ್ತರವಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರಲ್ಲದೆ, ಅಡುಗೆ ಅನಿಲ ಸಿಲಿಂಡರ್ ಹಾಗೂ ಆಹಾರ ಪದಾರ್ಥಗಳ ಬೆಲೆ ಇಳಿಸಬೇಕೆಂದು ಒತ್ತಾಯಿಸಿ ತಹಶೀಲ್ದಾರಗೆ ಮನವಿ ಸಲ್ಲಿಸಿದರು. ಎಸ್ಡಿಪಿಐನ ಜಿಲ್ಲಾ ಕಾರ್ಯದರ್ಶಿ ಎಂ.ಜಾಗಿರದಾರ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ