ಮಹಿಳಾ ಸ್ವಾತಂತ್ರ್ಯಕ್ಕೆ ಮುನ್ನುಡಿ ಬರೆದ ಅಣ್ಣ


Team Udayavani, Mar 28, 2017, 3:17 PM IST

hub7.jpg

ಧಾರವಾಡ: ಇಂದು ಮಹಿಳೆ ಎಲ್ಲಾ ಕ್ಷೇತ್ರಗಳಲ್ಲಿ ಇಷ್ಟು ಎತ್ತರಕ್ಕೆ ಬೆಳೆಯಲು ಮೊದಲು ಪ್ರೇರಣೆಯಾಗಿದ್ದು 12ನೇ ಶತಮಾನದ ಶರಣ ವಿಶ್ವಗುರು ಬಸವಣ್ಣನವರು ಎಂದು ಅಕ್ಕ ಪ್ರಶಸ್ತಿ ಪುರಸ್ಕೃತ ಪ್ರೇಮಕ್ಕಾ ಬಿಂಕದಕಟ್ಟಿ ಹೇಳಿದರು. ಇಲ್ಲಿನ ಅಕ್ಕನ ಬಳಗದಲ್ಲಿ  ಸಚಿವ ವಿನಯ ಕುಲಕರ್ಣಿ ಅವರ ತಾಯಿ ಸುವರ್ಣಮ್ಮ ಕುಲಕರ್ಣಿ ಸ್ಮರಣಾರ್ಥ ಆಯೋಜಿಸಿದ್ದ ದತ್ತಿ ಕಾರ್ಯಕ್ರಮದಲ್ಲಿ ಅಕ್ಕ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು. 

ಮಹಿಳೆಯರು ನಾಲ್ಕು ಗೋಡೆಗಳ ಧ್ಯೆ ಕಾಲ ಕಳೆದು ಜೀವನ ತ್ಯಜಿಸುವಂತಹ ಘಟನೆಗಳು ಶತಮಾನಗಳ ಹಿಂದೆ ನಡೆಯುತ್ತಿದ್ದವು. ಆ ಸಂದರ್ಭದಲ್ಲಿ ವಿಶ್ವಗುರು ಬಸವಣ್ಣನವರು ಮಹಿಳೆಯರ ನೋವುಗಳನ್ನು ಕಣ್ಣಾರೆ ಕಂಡು ಪುರುಷರಿಗಷ್ಟೇ ಯಾಕೆ ಸ್ತ್ರೀಯರಿಗೂ ಸ್ವಾತಂತ್ರ ಸಿಗಬೇಕು ಎಂದರು. 

ಸ್ತ್ರೀ ಸ್ವಾತಂತ್ರ್ಯ ಕೊಡಿಸಿದ ಕಾರಣ ಇಂದು ಮಹಿಳೆಯರು ಅನೇಕ ಕ್ಷೇತ್ರದಲ್ಲಿ ಹೆಜ್ಜೆಯನ್ನಿಡುತ್ತಿದ್ದಾರೆ. ಮಹಿಳೆ ಆಧುನಿಕ ಯುಗದಲ್ಲಿ ಧರ್ಮದ ಹಾದಿ ಬಿಟ್ಟು ವೈಚಾರಿಕತೆ ಹಾಗೂ ವೈಜ್ಞಾನಿಕ ಹಾದಿಯಲ್ಲಿ ನಡೆಯಬೇಕು. ಮೂಢ ನಂಬಿಕೆಯಂತಹ ಕಟ್ಟುಪಾಡುಗಳನ್ನು ಮುರಿದು ಮಹಿಳೆ ಶಿಕ್ಷಣ ಪಡೆದು,ಶರಣರ ಕಾಲದಿಂದಲೂ ಮಹಿಳೆಯ ಸಬಲೀಕರಣ, ಮಹಿಳಾ ಹಕ್ಕುಗಳ ಕುರಿತು ಚರ್ಚೆಗಳು ನಡೆಯುತ್ತಿವೆಯೇ ಹೊರತು ಅನುಷ್ಠಾನಗಳಾಗುತ್ತಿಲ್ಲ ಎಂದರು. 

ಜಿಲ್ಲಾಧಿಕಾರಿ ಡಾ| ಎಸ್‌. ಬಿ.ಬೊಮ್ಮನಹಳ್ಳಿ ಮಾತನಾಡಿ, ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರು ಉತ್ತಮ ಸಾಧನೆ ಮಾಡಿದ್ದರೂ ಇನ್ನೂ ಅನೇಕ ಮಹಿಳೆಯರಿಗೆ ಪ್ರಶಸ್ತಿ ಮತ್ತು ಗೌರವಗಳು ಸಿಗುತ್ತಿಲ್ಲ. ಮಹಿಳಾ ಸಬಲೀಕರಣ ತುಂಬಾ ಬಹಳ ಪ್ರಾಮುಖ್ಯತೆ ಪಡೆಯುತ್ತಿದ್ದು ಸರಕಾರದ ಜೊತೆಗೆ ಸಂಘ-ಸಂಸ್ಥೆಗಳು ಮಹಿಳೆಯರಿಗೆ ಮಾರ್ಗದರ್ಶನ ಮಾಡಬೇಕಿದೆ ಎಂದರು. 

ವೈಶುದೀಪ ಫೌಂಡೇಶನ್‌ ಕಾರ್ಯದರ್ಶಿ ಶಿವಲೀಲಾ ವಿನಯ ಕುಲಕರ್ಣಿ ಮಾತನಾಡಿ, ಯಾವುದೇ ಉತ್ತಮ ಕಾರ್ಯ ಮಾಡುವಾಗ ಸಾಕಷ್ಟು ವಿರೋಧ ಬರುವುದು ಸಹಜ. ಅವೆಲ್ಲವನ್ನು ಮೀರಿ ಮಹಿಳೆ ಸಮಾಜದಲ್ಲಿ ಸಾಧನೆ ಮಾಡಲು ಮುಂದಾಗಬೇಕು. ಮಹಿಳೆ ಸಮಾಜ ಸುಧಾರಕಿಯಾಗಿ ಸಾಕಷ್ಟು ಕೆಲಸ ಮಾಡಿ ಮಹಿಳಾ ಸಾಧಕಿಯರಾಗಬೇಕು ಎಂದರು. 

ಅಕ್ಕನ ಬಳಗದ ಅಧ್ಯಕ್ಷೆ ಭಾರತಿದೇವಿ ರಾಜಗುರು ಅಧ್ಯಕ್ಷತೆ ವಹಿಸಿದ್ದರು. ಕುಸಮಾ ಓತಗೇರಿ, ಭಾಗ್ಯವತಿ ನಡಕಟ್ಟಿ, ಶಶಿಕಲಾ ಬಸವರಡ್ಡಿ, ಮುಕ್ತಾ ಸವಡಿ ಉಪಸ್ಥಿತರಿದ್ದರು. ಗೌರಾ ಹಾಲಭಾವಿ ನಿರೂಪಿಸಿದರು. ಸುನಂದಾ ಗುಡ್ಡದ ವಂದಿಸಿದರು.  

ಟಾಪ್ ನ್ಯೂಸ್

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

vijayendra

Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Hubli ಅನ್ಯಕೋಮಿನ ಯುವಕನಿಂದ ಅತ್ಯಾಚಾರ

Hubli ಅನ್ಯಕೋಮಿನ ಯುವಕನಿಂದ ಅತ್ಯಾಚಾರ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.