ಉಣಕಲ್‌ ಕೆರೆ ಮತ್ತೆ ನಿರ್ಲಕ್ಷ್ಯ!


Team Udayavani, Apr 22, 2017, 2:14 PM IST

hub1.jpg

ಹುಬ್ಬಳ್ಳಿ: ಉಣಕಲ್‌ ಕೆರೆ ಜಿಲ್ಲಾಡಳಿತದಿಂದ ಮಹಾನಗರ ಪಾಲಿಕೆ ಸುಪರ್ದಿಗೆ ಬಂದಿದ್ದು, ಕೆರೆಯನ್ನು ಅಂತರಗಂಗೆ (ಜಲಕಳೆ) ಮುಕ್ತಗೊಳಿಸಲು ಪಾಲಿಕೆ ಅಗತ್ಯ ಕ್ರಮ ಕೈಗೊಳ್ಳುವುದು ಅವಶ್ಯವಾಗಿದೆ. ಹೊಲ-ಗದ್ದೆಗಳಲ್ಲಿ ಮಳೆ ಇಲ್ಲದೇ ಬೆಳೆ ಒಣಗಿದೆ, ಆದರೆ ಉಣಕಲ್‌ ಕೆರೆಯಲ್ಲಿ ಮಾತ್ರ ಜಲಕಳೆ ಬೆಳೆಯುತ್ತಲೇ ಇದೆ. 

ಅಂತರ್ಜಲ ಹೆಚ್ಚಿಸುವಲ್ಲಿ ಮಹತ್ವದ ಪಾತ್ರ ವಹಿಸುವ ಉಣಕಲ್‌ ಕೆರೆ ಮತ್ತೆ ನಿರ್ಲಕ್ಷ್ಯಕ್ಕೊಳಗಾಗಿದ್ದು, ಕೆರೆಯಾದ್ಯಂತ ಜಲಕಳೆ ವ್ಯಾಪಿಸುತ್ತಿದೆ. ಗ್ರಾಮಸ್ಥರು ಹಾಗೂ ಪರಿಸರ ಪ್ರೇಮಿಗಳ ಆಗ್ರಹದಿಂದ ಕಳೆದ ವರ್ಷ ಮೇ 18ರಂದು ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಹಾಗೂ ಅಂದಿನ ಜಿಲ್ಲಾಧಿಕಾರಿ ರಾಜೇಂದ್ರ ಚೋಳನ್‌ ಉಣಕಲ್‌ ಕೆರೆಗೆ ಭೇಟಿ ನೀಡಿದ್ದರು. 

ಕೆರೆಯಲ್ಲಿನ ಜಲಕಳೆ ತೆಗೆಯುವ ಕಾರ್ಯವನ್ನು ಹೈದರಾಬಾದ್‌ನ ಕ್ಲೀನ್‌ ಟೆಕ್‌ ಸಂಸ್ಥೆಗೆ ವಹಿಸಿಕೊಡಲಾಗಿತ್ತು. 2016 ಜೂನ್‌ 10ರಂದು ನೀರಿನಲ್ಲಿನ ಕಳೆಯನ್ನು ತೆಗೆಯುವ ಕ್ರೇನ್‌ ಹೊಂದಿದ ಬೋಟ್‌ ಯಂತ್ರದಿಂದ ಜಲಕಳೆ ತೆರವು ಕಾರ್ಯ ಆರಂಭಿಸಲಾಯಿತು. ಆದರೆ 5-6 ದಿನಗಳ ನಂತರ ತಾಂತ್ರಿಕ ತೊಂದರೆಯಿಂದ ಯಂತ್ರ ಸ್ಥಗಿತಗೊಂಡಿತು.

ಕೆಲ ದಿನಗಳವರೆಗೆ ಮತ್ತೆ ಪಾಲಿಕೆ ಸಿಬ್ಬಂದಿ ಜಲಕಳೆ ಅಂತರಗಂಗೆಯನ್ನು ತೆಗೆದು ಹಾಕಿದ್ದರು. ಆದರೆ ಈ ಪ್ರಕ್ರಿಯೆ ಹೆಚ್ಚು ದಿನ ನಡೆಯಲಿಲ್ಲ. ಆದರೆ ಮತ್ತೆ ಈಗ ಜಲಕಳೆ ಹಬ್ಬುತ್ತಿದೆ.ಕೆರೆಯ ಸೌಂದರ್ಯಕ್ಕೆ ಹಾನಿ ಮಾಡುತ್ತಿದೆ. ಕೆರೆಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಉಣಕಲ್‌ ಕೆರೆಯನ್ನು ಮಾದರಿ ಕೆರೆಯಾಗಿ ರೂಪಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಕಳೆದ ವರ್ಷ ಹೇಳಿಕೆ ನೀಡಿದ್ದರು. 

ನವನಗರ, ಭೈರಿದೇವರಕೊಪ್ಪ ಭಾಗದಿಂದ ನಿರಂತರ ಕೊಳಚೆ ಹರಿದು ಬಂದು ಉಣಕಲ್‌ ಕೆರೆ ಸೇರುತ್ತಿರುವುದರಿಂದ ಜಲಕಳೆ ಬೆಳೆಯುತ್ತಿದೆ. ಕೊಳಚೆ ನೀರು ಕೆರೆಗೆ ಸೇರದಂತೆ ತಡೆಯಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಸಂಸ್ಕರಣಾ ಘಟಕ ಆರಂಭಿಸಿ ಸಂಸ್ಕರಿತ ನೀರನ್ನು ಕೆರೆಗೆ ಬಿಡಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದರು. 

ಆದರೆ ಪ್ರಗತಿಯಾಗಿಲ್ಲ. ಇನ್ನೊಂದು ತಿಂಗಳಲ್ಲಿ ಮಳೆಗಾಲ ಆರಂಭಗೊಳ್ಳಲಿದ್ದು, ಮಳೆ ನೀರಿನೊಂದಿಗೆ ಕೊಳಚೆ ಕೂಡ ಕೆರೆ ಸೇರುತ್ತದೆ. ಆಗ ಜಲಕಳೆ ಇನ್ನಷ್ಟು ವ್ಯಾಪಕ ಪ್ರಮಾಣದಲ್ಲಿ ಕೆರೆಯಲ್ಲಿ ಹರಡುವುದು. ಕೆರೆಯ ನಿರ್ವಹಣೆಯನ್ನು ದೇಶಪಾಂಡೆ ಫೌಂಡೇಶನ್‌ಗೆ 1 ವರ್ಷ ಅವಧಿಗೆ ವಹಿಸಿಕೊಡಲಾಗಿತ್ತು. 

ನ್ಯುವಾಲಿ ರಾಸಾಯನಿಕ ಬಳಕೆ ಮಾಡಿ ಜಲಕಳೆ ಹರಡದಂತೆ ಕ್ರಮ ಕೈಗೊಳ್ಳಲು ಫೌಂಡೇಶನ್‌ ಕ್ರಮ ಕೈಗೊಂಡಿತ್ತು. ಆದರೆ ಅದರಿಂದ ಯಾವುದೇ ಫ‌ಲ ಸಿಕ್ಕಿಲ್ಲ. ಸದ್ಯ ಅಂತರಗಂಗೆ ಕೆರೆಯಲ್ಲಿ ವ್ಯಾಪಿಸುತ್ತಿದೆ. ಹುಬ್ಬಳ್ಳಿಯ ಹಲವಾರು ಕೆರೆಗಳು ಬಡಾವಣೆಗಳು, ಮೈದಾನಗಳಾಗಿ ರೂಪಾಂತರ ಗೊಂಡಿವೆ.

ಹಳೇ ಹುಬ್ಬಳ್ಳಿಯ ಹೆಗ್ಗೇರಿ ಕೆರೆ ಮೈದಾನವಾಗಿದ್ದರೆ, ಇನ್ನೊಂದು ಕೆರೆ ನೆಹರು ಮೈದಾನವಾಗಿದೆ. ತಿರಕಾರಾಮನ ಕೆರೆ ಐಟಿ ಪಾರ್ಕ್‌ ಆಗಿ ರೂಪಾಂತರಗೊಂಡಿದೆ. ನಗರದಲ್ಲಿ ದೊಡ್ಡ ಕೆರೆ ಉಳಿದಿದ್ದೆಂದರೆ ಉಣಕಲ್‌ ಕೆರೆ ಮಾತ್ರ. ಅದರ ನಿರ್ವಹಣೆ ಮಾಡಲು ಸಾಧ್ಯವಾಗುತ್ತಿಲ್ಲ. ಉಣಕಲ್‌ ಕೆರೆಯ ಪಕ್ಕದ ಉದ್ಯಾನ ಬಿಆರ್‌ಟಿಎಸ್‌ ರಸ್ತೆ ಅಗಲೀಕರಣದಿಂದ ಧೂಳು ಮಯವಾಗಿದೆ. ಕೆ

ರೆಯಲ್ಲಿ ದೋಣಿ ವಿಹಾರಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಆದರೆ ಜಲ ಕಳೆಯಿಂದ ಅದು ಕೂಡ ಪ್ರಯೋಜನಕ್ಕೆ ಬಾರದಂತಾಗಿದೆ. ಜನರು ಮನಸಿಗೆ ಉಲ್ಲಾಸ ಮೂಡಲೆಂದು ಕೆರೆಗೆ ಹೋದರೆ ಅಲ್ಲಿ ಜಲಕಳೆ ನೋಡಬೇಕಾದ ಸ್ಥಿತಿಯಿದೆ. ಇನ್ನಾದರೂ ಜಿಲ್ಲಾಡಳಿತ, ಮಹಾನಗರ ಪಾಲಿಕೆ ಕೆರೆ ಉಳಿಸಿಕೊಳ್ಳುವ ದಿಸೆಯಲ್ಲಿ ಕ್ರಮ ಕೈಗೊಳ್ಳಬೇಕು. ಜಲಕಳೆ ನಿರ್ಮೂಲನೆಗೆ ಪೂರಕ ಕ್ರಮ ತೆಗೆದುಕೊಳ್ಳಬೇಕಿದೆ. 

* ವಿಶ್ವನಾಥ ಕೋಟಿ  

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.