ವಾಯವ್ಯ ಸಾರಿಗೆಗೆ ವಾಹನ ತೆರಿಗೆ ವಿನಾಯಿತಿ ಮುಂದುವರಿಕೆ ಅಗತ್ಯ
Team Udayavani, May 22, 2017, 4:27 PM IST
ಹುಬ್ಬಳ್ಳಿ: ವಾಯವ್ಯ ಸಾರಿಗೆ ಸಂಸ್ಥೆಗೆ ಬಿಜೆಪಿ ಸರಕಾರದ ಅವಧಿಯಲ್ಲಿ ವಾಹನ ತೆರಿಗೆ ವಿನಾಯಿತಿ ನೀಡಿತ್ತು. ಸದ್ಯ ಅದರ ಅವಧಿ ಮುಕ್ತಾಯದ ಹಂತಕ್ಕೆ ಬಂದಿದೆ, ಅದನ್ನು ಮುಂದುವರಿಸುವ ಮೂಲಕ ಸಂಸ್ಥೆಗೆ ಆಗುತ್ತಿರುವ ಹಾನಿಯಲ್ಲಿ ಅಲ್ಪ ಕಡಿಮೆ ಮಾಡಿಕೊಳ್ಳಬಹುದು ಎಂದು ವಿಧಾನ ಸಭೆ ಪ್ರತಿಪಕ್ಷದ ನಾಯಕ ಜಗದೀಶ ಶೆಟ್ಟರ ಹೇಳಿದರು.
ನೃಪತುಂಗ ಬೆಟ್ಟದಲ್ಲಿ ಸಿಬಿಟಿಯಿಂದ ನೃಪತುಂಗ ಬೆಟ್ಟ ನಗರ ಸಾರಿಗೆ ಸಂಸ್ಥೆ ಬಸ್ಗೆ ರವಿವಾರ ಚಾಲನೆ ನೀಡಿ ಮಾತನಾಡಿದರು. ಈಶಾನ್ಯ ಸಾರಿಗೆ ಸಂಸ್ಥೆಯಲ್ಲಿ ವಿನಾಯಿತಿ ನೀಡಿದಂತೆ ಅಂದು ಬಿಜೆಪಿ ಸರಕಾರ ಇದ್ದಾಗ ವಾಯವ್ಯ ಸಾರಿಗೆ ಸಂಸ್ಥೆಗೂ ನೀಡಬೇಕೆಂಬ ನಿರ್ಧಾರದಿಂದ ಸಂಸ್ಥೆ ಆಗುತ್ತಿರುವ ಹಾನಿಯನ್ನು ತಪ್ಪಿಸಲಾಗಿತ್ತು.
ಇದರಿಂದ ಸಂಸ್ಥೆಗೂ ಹಾಗೂ ಸಂಸ್ಥೆಯಲ್ಲಿಸೇವೆ ಸಲ್ಲಿಸುತ್ತಿರುವವರಿಗೂ ಹೆಚ್ಚಿನ ಅನುಕೂಲವಾಯಿತು. ಆದರೆ ಇದೀಗ ವಿನಾಯಿತಿ ಅವಧಿ ಮುಕ್ತಾಯ ಹಂತದಲ್ಲಿದ್ದು ಮುಖ್ಯಮಂತ್ರಿಗಳಿಗೆ ಒತ್ತಡ ಹಾಕುವ ಮೂಲಕ ಇದನ್ನು ಮುಂದುವರಿಸುವುದು ಅವಶ್ಯವಾಗಿದೆ.
ಈ ಕುರಿತು ಮುಖ್ಯಮಂತ್ರಿ ಜೊತೆ ತಾವು ಚರ್ಚಿಸುವುದಾಗಿ ಹೇಳಿದರು. ಇನ್ನು ಸಂಸ್ಥೆಯಿಂದ ಬಸ್ ಶೆಲ್ಟರ್ ಮಾಡುವ ಕುರಿತು ನಗರದಲ್ಲಿರುವ ಪಾಲಿಕೆ ಜಾಗವನ್ನು ಗುರುತಿಸಿದರೆ ಶೆಲ್ಟರ್ ನಿರ್ಮಾಣಕ್ಕೆ ಕೊಡಿಸುವ ವ್ಯವಸ್ಥೆ ಮಾಡಲಾಗುವುದು ಎಂದರು.
ವಾಕರಸಾ ಸಂಸ್ಥೆಯ ಅಧ್ಯಕ್ಷ ಸದಾನಂದ ಡಂಗನವರ ಮಾತನಾಡಿ, ನೃಪತುಂಗ ಬೆಟ್ಟ ವಾಯುವಿಹಾರಿಗಳ ಸಂಘ ಹಾಗೂ ಹಲವು ಹಿರಿಯರ ಬಹುದಿನಗಳ ಬೇಡಿಕೆ ಈಡೇರಿದೆ. ಬೆಟ್ಟಕ್ಕೆ ಬಸ್ ಸಂಚಾರ ಆರಂಭಿಸಿ ಎಂಬ ಬೇಡಿಕೆಗೆ ಇಲಾಖೆ ಸ್ಪಂದಿಸಿದ್ದು, ಅದನ್ನು ಸರಿಯಾಗಿ ನಡೆಸಿಕೊಂಡು ಹೋಗುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.
ನಗರದ ಹಾಗೂ ಗ್ರಾಮೀಣ ಭಾಗದಲ್ಲಿ ಯಾವ ಪ್ರದೇಶಕ್ಕೆ ಸರಿಯಾದ ಬಸ್ ಸೌಲಭ್ಯ ಇಲ್ಲ ಎಂಬುದನ್ನು ಮಾಹಿತಿ ನೀಡಿದ್ದರೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದರು. ಸಾರ್ವಜನಿಕರು ಸಾರಿಗೆ ಸಂಸ್ಥೆ ಬಸ್ನಲ್ಲಿ ಪ್ರಯಾಣಿಸುವ ಮೂಲಕ ಸಂಸ್ಥೆಯನ್ನು ಉಳಿಸಿ-ಬೆಳೆಸಬೇಕು ಎಂದು ಮನವಿ ಮಾಡಿಕೊಂಡರು.
ನಂತರ ಸಂಸ್ಥೆಯ ಕಲಾವಿದ ನೌಕರರಿಂದ ಸಾಂಸ್ಕೃತಿಕ ಸಂಜೆ ರಸಮಂಜರಿ ಕಾರ್ಯಕ್ರಮ ನಡೆಯಿತು. ಸಂಸದ ಪ್ರಹ್ಲಾದ ಜೋಶಿ, ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ವೇದವ್ಯಾಸ ಕೌಲಗಿ, ಎಂ.ಎಸ್. ಪಾಟೀಲ, ಸಿದ್ದು ಮೊಗಲಿಶೆಟ್ಟರ, ಮಂಜುನಾಥ, ವಿವೇಕಾನಂದ ವಿಶ್ವಜ್ಞ, ರಾಠೊಡ, ಅಂಗಡಿ, ನಾಯ್ಕ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ
Hubli ಅಪಾರ್ಟಮೆಂಟ್ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು