ಎಚ್ಡಿಕೆ ನೇತೃತ್ವದ ಸರ್ಕಾರಕ್ಕೆ ಶ್ರಮಿಸಿ


Team Udayavani, May 23, 2017, 4:35 PM IST

hub4.jpg

ಹುಬ್ಬಳ್ಳಿ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ನೇತೃತ್ವದ ಸರಕಾರ ರಚನೆ ಆಗಲೇಬೇಕೆನ್ನುವ ನಿಟ್ಟಿನಲ್ಲಿ ಪರಿಶ್ರಮ ಹಾಗೂ ಪ್ರಾಮಾಣಿಕವಾಗಿ ಕಾರ್ಯಕರ್ತರು ಶ್ರಮಿಸುವ ಅವಶ್ಯಕತೆ ಇದೆ ಎಂದು ಜೆಡಿಎಸ್‌ ಪಕ್ಷದ ಧಾರವಾಡ ಜಿಲ್ಲಾ ವೀಕ್ಷಕ ಮರಿಲಿಂಗೇಗೌಡರು ಹೇಳಿದರು. 

ಜೆ.ಸಿ. ನಗರದ ಅಕ್ಕನ ಬಳಗದಲ್ಲಿ ಹುಬ್ಬಳ್ಳಿ ಶಹರ, ಹುಬ್ಬಳ್ಳಿ ಕೇಂದ್ರ, ಗ್ರಾಮೀಣ ಮತ್ತು ತಾಲೂಕು ಘಟಕದ ಕಾರ್ಯಕರ್ತರ ಸಭೆ ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು. ಕೇಂದ್ರದಲ್ಲಿ ಅಧಿಕಾರ ಹಿಡಿಯಲು ನರೇಂದ್ರ ಮೋದಿಯವರು ಏನೆಲ್ಲ ತಂತ್ರಗಾರಿಕೆ, ಪ್ರಚಾರ ಕೈಗೊಂಡರೋ ಅದೇ ಮಾದರಿಯ ಪ್ರಚಾರಕ್ಕೆ ನಾವು ಮುಂದಾಗಬೇಕಾಗಿದೆ. 

ಟಿಕೆಟ್‌ ಇನ್ನಿತರ ಗೊಂದಲಗಳನ್ನು ತಪ್ಪಿಸುವ ನಿಟ್ಟಿನಲ್ಲಿ ವಿಧಾನಸಭೆ ಚುನಾವಣೆಗೆ 10 ತಿಂಗಳು ಕಾಲಾವಕಾಶ ಇರುವಾಗಲೇ ಪಕ್ಷದ ಅಭ್ಯರ್ಥಿಗಳಿಗೆ ಟಿಕೆಟ್‌ ಘೋಷಣೆ ಮಾಡುವುದಾಗಿ ಹೇಳಿದರು. ರಾಜ್ಯ ಸರಕಾರ ರೈತರ ಸಾಲಮನ್ನಾ ಮಾಡಲು ಹಿಂದೇಟು ಹಾಕುತ್ತಿದೆ. ರೈತರ ಸಾಲಮನ್ನಾ ಮಾಡಲು ಕೇಂದ್ರದತ್ತ ಬೊಟ್ಟು ಮಾಡುತ್ತಿದೆ.

ಆದರೆ ರಾಜ್ಯದ ರೈತರ ಸಾಲವನ್ನು ಕೇಂದ್ರ ಸರಕಾರ ಯಾಕೆ ಮನ್ನಾ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದರು. ಬೆಂಗಳೂರು ಹಾಗೂ ಸುತ್ತಮುತ್ತ ಪ್ರದೇಶದಲ್ಲಿ ನೂರಾರು ಕೋಟಿ ರೂ. ಮೌಲ್ಯದ ಸರಕಾರಿ ಭೂಮಿ ಹಾಗೂ ಕೆರೆಗಳು ಅತಿಕ್ರಮಣಗೊಂಡಿದ್ದು, ಅವುಗಳನ್ನು ತೆರವುಗೊಳಿಸಿ ಸಕ್ರಮ ಮಾಡಿದರೂ ಸರಕಾರಕ್ಕೆ ಸಾವಿರಾರು ಕೋಟಿ ರೂ. ಆದಾಯ ಬರಲಿದೆ.

ಅದೇ ಹಣದಿಂದ ರಾಜ್ಯ ರೈತರ ಸಂಪೂರ್ಣ ಸಾಲಮನ್ನಾ ಮಾಡಬಹುದು ಎಂದು ಸಲಹೆ ನೀಡಿದರು. ಶಾಸಕ ಎನ್‌.ಎಚ್‌. ಕೋನರಡ್ಡಿ ಮಾತನಾಡಿ, ಪಕ್ಷದಲ್ಲಿ ಶಿಸ್ತು-ಸಂಯಮ ಕಾಯ್ದುಕೊಳ್ಳಬೇಕು. ತಳಮಟ್ಟದದಿಂದ ಪಕ್ಷ ಸಂಘಟನೆ ಮಾಡಿದ್ದೆ ಆದಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಕನಿಷ್ಠ 45 ಸ್ಥಾನಗಳನ್ನು ಗೆಲ್ಲಬಹುದು.

ಪಕ್ಷದ ಅಭ್ಯರ್ಥಿಗಳ ಆಯ್ಕೆಗಾಗಿ ಮೂರು ಬಾರಿ ಸಮೀಕ್ಷೆ ನಡೆಯಲಿದೆ. ಆನಂತರವಷ್ಟೇ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಹಾಗಾಗಿ ಟಿಕೆಟ್‌ ಆಕಾಂಕ್ಷಿಗಳು ಹಾಗೂ ಕಾರ್ಯಕರ್ತರು ಪಕ್ಷವನ್ನು ಕೆಳಮಟ್ಟದಿಂದ ಸಂಘಟಿಸಲು ಕೈಜೋಡಿಸಬೇಕು ಎಂದರು. ಇನ್ನೋರ್ವ ವೀಕ್ಷಕ ಬಿ.ಎಸ್‌. ಚಂದ್ರಶೇಖರ ಮಾತನಾಡಿ, 2018ರ ವಿಧಾನಸಭೆ ಚುನಾವಣೆ ನಿಮಿತ್ತ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರು ವೀಕ್ಷಕರನ್ನು ನಿಯೋಜಿಸಿದ್ದಾರೆ.

ವೀಕ್ಷಕರು ಕಾರ್ಯಕರ್ತರನ್ನು ಭೇಟಿ ಮಾಡಿ ಪಕ್ಷ ಸಂಘಟನೆಗೆ  ಒತ್ತು ನೀಡುವಂತೆ ಮನವರಿಕೆ ಮಾಡಲಿದ್ದಾರೆ.ಎಲ್ಲೆಡೆ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಬೇಕು ಎಂಬುದೇ ಒತ್ತಾಸೆಯಾಗಿದೆ. ಆದರೆ, ಹಣ ಹಾಗೂ ಜನ ಬಲ ಹೊಂದಿರುವ ಜಗದೀಶ ಶೆಟ್ಟರ, ಬಿ.ಎಸ್‌. ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೋಲಿಸುವುದು ಸುಲಭದ ಕೆಲಸವಲ್ಲ.

ಆ ನಿಟ್ಟಿನಲ್ಲಿ ಸಂಘಟನೆಯೊಂದಿಗೆ ಚುನಾವಣೆಯಲ್ಲಿ ಹೋರಾಡಿದಾಗ ಮಾತ್ರ ಯಶಸ್ಸು ಗಳಿಸಲು ಸಾಧ್ಯವಾಗುತ್ತದೆ ಎಂದರು. ಮಹಾನಗರ ಜಿಲ್ಲಾಧ್ಯಕ್ಷ ರಾಜಣ್ಣ ಕೊರವಿ ಮಾತನಾಡಿದರು. ವಿಜಯ್‌ ಅಳಗುಂಡಗಿ, ಶಿವಣ್ಣ ಹುಬ್ಬಳ್ಳಿ, ಗಂಗಾಧರ ಪೆರೂರ, ದಮಯಂತಿ ಹಂಡಗಿ ಸೇರಿದಂತೆ ಹಲವು ಮುಖಂಡರು ತಮ್ಮ ವಿಚಾರಗಳನ್ನು ವೀಕ್ಷಕರಿಗೆ ತಿಳಿಸಿದರು.

ಧಾರವಾಡ ಗ್ರಾಮೀಣ ಜಿಲ್ಲಾಧ್ಯಕ್ಷ ಬಿ.ಬಿ.ಗಂಗಾಧರಮಠ, ಧಾರವಾಡ ಜಿಲ್ಲಾಧ್ಯಕ್ಷ ಮುಜಾಯಿದ್‌ ಕಂಟ್ರಾಕ್ಟರ್‌, ರೈತ ಮುಖಂಡ ಗಂಗಾಧರ ಪಾಟೀಲ, ಮಹಾನಗರ ಪಾಲಿಕೆ ಸದಸ್ಯರಾದ ಅಲ್ತಾಫ್‌ ಕಿತ್ತೂರ, ಫ‌ಮೀದಾ ಕಿಲ್ಲೇದಾರ, ನಾಗನಗೌಡ ಪಾಟೀಲ, ಕಿರಣ್‌ ಹಿರೇಮಠ ಸೇರಿದಂತೆ ಮೊದಲಾದವರು ಇದ್ದರು.  

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.