ಬೀದಿ ನಾಯಿ ಕಾಟಕ್ಕೆ ಬೆಚ್ಚಿದ ಮಂದಿ!


Team Udayavani, May 24, 2017, 4:41 PM IST

hub5.jpg

ಹುಬ್ಬಳ್ಳಿ: ರಾತ್ರಿ, ತಡರಾತ್ರಿ ಇರಲಿ, ಇದೀಗ ನಗರದಲ್ಲಿ ಬೆಳಿಗ್ಗೆ-ಮಧ್ಯಾಹ್ನದಲ್ಲೇ ನಾಯಿಗಳ ಹಾವಳಿ ಹೆಚ್ಚಾಗಿದೆ. ಇದರಿಂದ ತಪ್ಪಿಸಿಕೊಳ್ಳಲು ದ್ವಿಚಕ್ರ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣಗೊಂಡಿದೆ. ಮಹಾನಗರ ಅಷ್ಟರ ಮಟ್ಟಿಗೆ “ಸ್ಮಾರ್ಟ್‌’ ಆಗಿದೆ..! 

ಹಂದಿಮುಕ್ತ ನಗರ, ನಾಯಿಗಳ ನಿಯಂತ್ರಣಕ್ಕೆ ವಿವಿಧ ಕ್ರಮಗಳು ಎಂದೆಲ್ಲ ಮಹಾನಗರ ಪಾಲಿಕೆ ಬಡಬಡಿಸುತ್ತಿದೆ. ಆದರೆ ವಾಸ್ತವ ಮಾತ್ರ ದಿನದಿಂದ ದಿನಕ್ಕೆ ಹದಗೆಡುತ್ತಿದೆ ಎಂಬುದಕ್ಕೆ ಅನೇಕ ಬಡಾವಣೆಗಳಲ್ಲಿ ರಾತ್ರಿ-ಬೆಳಿಗ್ಗೆ ಎನ್ನದೆ ಬೀದಿ ನಾಯಿಗಳು ದ್ವಿಚಕ್ರ ವಾಹನ ಸವಾರರ ಮೇಲೆ ಎರಗುತ್ತಿರುವುದು ಸಾಕ್ಷಿಯಾಗಿದೆ. 

ಕೆಲವು ಕಡೆ ಮಧ್ಯಾಹ್ನ ವೇಳೆಗೆ ನಾಯಿಗಳು ದ್ವಿಚಕ್ರ ವಾಹನಗಳ ಬೆನ್ನು ಹತ್ತಿದ್ದು, ಮಹಿಳೆಯರು ಸಾಕಷ್ಟು ಸಮಸ್ಯೆ ಎದುರಿಸುವಂತಾಗಿದೆ. ಮಹಿಳೆಯರು ಹಾಗೂ ಮಕ್ಕಳನ್ನು ಕೂಡಿಸಿಕೊಂಡುವ ಹೋಗುವ ದ್ವಿಚಕ್ರ ವಾಹನ ಸವಾರರು ಸ್ಥಿತಿ ಹೇಳತೀರದಾಗಿದೆ. ಹೆಚ್ಚಿನ ನಾಯಿ-ಹಂದಿ ಕಾಟ: ಮಹಾನಗರ ಪಾಲಿಕೆಯವರು ಹಂದಿಗಳ ವಿರುದ್ಧ ಕಾರ್ಯಾಚಣೆ ಮಾಡುತ್ತೇವೆ ಎಂದು ಆಗಾಗ ಗುಡುಗುತ್ತಿದ್ದಾರೆ.

ಅಲ್ಲಿ ಇಲ್ಲಿ ಎನ್ನುವಂತೆ ಅಷ್ಟು ಇಷ್ಟು ಕಾರ್ಯಾಚರಣೆ ನಡೆಯುತ್ತದೆ. ಆದರೆ ಇಂದಿಗೂ ಅವಳಿನಗರದಲ್ಲಿ ಹಂದಿಗಳ ಹಾವಳಿ ಸಾಕಷ್ಟಿದೆ ಎಂಬುದಕ್ಕೆ ಯಾವುದೇ ಬಡಾವಣೆಗೆ ಹೋದರೂ ಹಿಂಡು ಹಿಂಡಾಗಿ ಹಂದಿಗಳು ಕಾಣ ಸಿಗುತ್ತವೆ. ನಾಯಿಗಳ ಕಾಟವೂ ಇದಕ್ಕಿಂತ ಭಿನ್ನವಾಗಿಲ್ಲ. ಹಂದಿ ಹಾಗೂ ನಾಯಿಗಳ ದಾಳಿಯಿಂದ ಅನೇಕ ಮಕ್ಕಳು ಗಾಯಗೊಂಡಿದ್ದರು, ಹಲವು ದ್ವಿಚಕ್ರ ವಾಹನ ಸವಾರರು ನೆಲಕ್ಕೆ ಬಿದ್ದರು.

ಸಣ್ಣ ಪುಟ್ಟ ಅಪಘಾತಗಳಿಗೆ ಹಂದಿ ಮತ್ತು ನಾಯಿಗಳು ತಮ್ಮದೇ ಕೊಡುಗೆ ನೀಡುತ್ತಲೇ ಸಾಗಿವೆ. ಇಷ್ಟಾದರೂ ಪಾಲಿಕೆ ಅಧಿಕಾರಿಗಳು, ಆಡಳಿತ ನಡೆಸುವವರು ಮಾತ್ರ ಹಂದಿ ಮುಕ್ತ ನಗರ ಮಾಡುತ್ತೇವೆ ನೋಡುತ್ತೀರಿ ಎಂದು ಕಳೆದ ಆರೇಳು ವರ್ಷಗಳಿಂದ ಭರವಸೆಗಳ ಮೇಲೆ ಭರವಸೆ ನೀಡುತ್ತಲೇ ಸಾಗಿದ್ದಾರೆ. 

ನಗರದ ವಿಜಯನಗರ, ಅಶೋಕ ನಗರ, ದೇಶಪಾಂಡೆ ನಗರ, ಕೇಶ್ವಾಪುರ ವೃತ್ತ, ಪಿಂಟೋ ರಸ್ತೆ, ನವನಗರದ ಬಸವೇಶ್ವರ ವೃತ್ತ, ಮಾರುಕಟ್ಟೆ, ಅರವಿಂದ ನಗರ, ಕಾರವಾರ ರಸ್ತೆ, ಬಮ್ಮಾಪುರ ಓಣಿ, ಪ್ರಥಮಶೆಟ್ಟಿ ಓಣಿ, ಗೋಪನಕೊಪ್ಪ ರಸ್ತೆ, ಹಳೇ ಹುಬ್ಬಳ್ಳಿ, ಆನಂದನಗರ, ನೇಕಾನಗರ, ಸಿದ್ದಾರೂಢಮಠ, ಸುಳ್ಳ ರಸ್ತೆ, ಕಾರವಾರ ರಸ್ತೆ, ಗೋಕುಲ ರಸ್ತೆ, ರಾಧಾಕೃಷ್ಣ ನಗರ, ಗಾಂಧಿನಗರ, ಉಣಕಲ್ಲ, ಸಾಯಿನಗರ ಸೇರಿದಂತೆ ಹಲವೆಡೆ ಬೀದಿ ನಾಯಿಗಳ ಕಾಟ ಹೇಳತೀರದಾಗಿದೆ. 

ಈ ಹಿಂದೆ ತಡರಾತ್ರಿ ಮನೆಗೆ ಹೋಗುವವರು ಬೀದಿ ನಾಯಿಗಳ ಕಾಟದಿಂದ ಹೆದರಿಕೊಂಡು ಹೋಗಬೇಕಿತ್ತು. ಇದೀಗ ಬೆಳಿಗ್ಗೆ, ಮಧ್ಯಾಹ್ನ ಸಮಯದಲ್ಲೇ ನಾಯಿಗಳು ದ್ವಿಚಕ್ರ ವಾಹನಕ್ಕೆ ಬೆನ್ನು ಹತ್ತುತ್ತಿವೆ. ಕೆಲವು ಕಡೆ ಮೂರ್‍ನಾಲ್ಕು ನಾಯಿಗಳು ದ್ವಿಚಕ್ರ ವಾಹನಗಳಿಗೆ ಮುಗಿ ಬೀಳುತ್ತಿದ್ದು, ದ್ವಿಚಕ್ರ ವಾಹನ ಸವಾರರು ವಾಹನ ನಿಲ್ಲಿಸಿ ನಾಯಿಗಳನ್ನು ಎದುರಿಸಬೇಕು. 

ಇಲ್ಲವೆ ಅತಿವೇಗದಲ್ಲಿ ವಾಹನ ಚಾಲನೆ ಮಾಡಬೇಕಿದೆ. ಸ್ವಲ್ಪ ಹೆಚ್ಚು ಕಡಿಮೆಯಾದರೂ ಒಂದು ನಾಯಿಯಿಂದ ಕಚ್ಚಿಸಿಕೊಳ್ಳಬೇಕು ಇಲ್ಲವೆ ವೇಗದ ವಾಹನ ಸಂಚಾರ ವೇಳೆ ಅಪಘಾತಕ್ಕೊಳಗಾಗಬೇಕು ಎನ್ನುವ ಸ್ಥಿತಿ ಇದೆ. ಇದು ಪಾಲಿಕೆಯವರ ಕಣ್ಣಿಗೆ ಮಾತ್ರ ಕಾಣುತ್ತಿಲ್ಲವಾಗಿದೆ. 

ಇಂದಿರಾ ಗಾಜಿನ ಮನೆಯ ಮಹಾತ್ಮಗಾಂಧಿ ಉದ್ಯಾನವನದಲ್ಲಿ ಹಿಂಡು ಹಿಂಡು ಬೀದಿ ನಾಯಿಗಳಿದ್ದು, ಕೆಲ ದಿನಗಳ ಹಿಂದೆ ನಾಯಿಗಳನ್ನು ಹಿಡಿಯುವ ಕಾರ್ಯ ಕೈಗೊಳ್ಳಲಾಯಿತು. ಇದು ಒಂದೇ ದಿನಕ್ಕೆ ಸೀಮಿತವಾಯಿತು. ಮರುದಿನವೇ ಹತ್ತಾರು ನಾಯಿಗಳು ಉದ್ಯಾನವನದಲ್ಲಿ ಪ್ರತ್ಯಕ್ಷವಾಗಿ ತಮ್ಮ ಸಾಮರ್ಥ್ಯ ಪ್ರದರ್ಶಿಸುವ ಮೂಲಕ ಪಾಲಿಕೆಗೆ ಅಣಕಿಸುವ ಕಾರ್ಯ ತೋರಿದವು. 

ಹಣ ವೆಚ್ಚವಾಗಿದ್ದಷ್ಟೇ ಬಂತು: ಮಹಾನಗರದಲ್ಲಿ ಬೀದಿ ನಾಯಿಗಳ ಸಂತತಿ ಹೆಚ್ಚಳ ತಡೆ ನಿಟ್ಟಿನಲ್ಲಿ ಮಹಾನಗರ ಪಾಲಿಕೆ ನಾಯಿಗಳಿಗೆ ಸಂತಾನ ಶಕ್ತಿಹರಣ ಶಸ್ತ್ರಚಿಕಿತ್ಸೆಗೆ ಮುಂದಾಗಿತ್ತು. ಇದಕ್ಕಾಗಿ ಪಾಲಿಕೆ ಬಜೆಟ್‌ನಲ್ಲಿ 5ಲಕ್ಷ ರೂ.ಗಳವರೆಗೆ ಹಣ ನಿಗದಿ ಪಡಿಸಲಾಗುತ್ತಿತ್ತು.

ಸ್ವಯಂ ಸೇವಾ ಸಂಸ್ಥೆಯೊಂದರ ಸಹಾಯದೊಂದಿಗೆ ಮಹಾನಗರ ಬಹುತೇಕ ನಾಯಿಗಳಿಗೆ ಶಸ್ತ್ರಚಿಕಿತ್ಸೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಲೆಕ್ಕ ಒಪ್ಪಿಸುತ್ತಿದ್ದಾರೆಯಾದರೂ, ಯಾವ ಬಡಾವಣೆಯಲ್ಲಿ, ಎಷ್ಟು ನಾಯಿಗಳಿಗೆ ಶಸ್ತ್ರ ಚಿಕಿತ್ಸೆ ಕೈಗೊಳ್ಳಲಾಗಿದೆ, ಅದಕ್ಕೇನಾದರೂ ಗುರುತು ಹಾಕಲಾಗಿದೆಯೇ ಎಂಬ ಪ್ರಶ್ನೆಗೆ ಅಧಿಕಾರಿಗಳಲ್ಲಿ ಸಮರ್ಪಕ ಉತ್ತರ ಇಲ್ಲವಾಗಿದೆ. 

ಮತ್ತೂಂದು ವಿಚಾರವೆಂದರೆ ಲಕ್ಷ ಲಕ್ಷಗಳ ವೆಚ್ಚದಲ್ಲಿ ಹಲವು ವರ್ಷಗಳಿಂದ ಕೈಗೊಂಡ ನಾಯಿಗಳ ಸಂತಾನ ಶಕ್ತಿ ಹರಣ ಶಸ್ತ್ರಚಿಕಿತ್ಸೆ ಸಮರ್ಪಕ ಜಾರಿಯಾಗಿದ್ದೇಯಾದಲ್ಲಿ ಅವಳಿ ನಗರದಲ್ಲಿ ಈ ವೇಳೆಗೆ ಬೀದಿ ನಾಯಿಗಳ ಸಂಖ್ಯೆಯಲ್ಲಿ ಕನಿಷ್ಠ ಅರ್ಧದಷ್ಟಾದರೂ ಕಡಿಮೆ ಆಗಬೇಕಿತ್ತು. ಆದರೆ ನಾಯಿಗಳ ಸಂಖ್ಯೆಯಲ್ಲಿ ಮಹತ್ತರ ಹೆಚ್ಚಳವಾಗಿದೆ ಎಂಬುದಕ್ಕೆ ವಿವಿಧ ಬಡಾವಣೆಗಳಲ್ಲಿನ ನಾಯಿಗಳೇ ಸಾಕ್ಷಿಯಾಗಿವೆ. 

ಕೆಲವೊಂದು ಕಡೆ ಮಾಂಸದ ಅಂಗಡಿಗಳು, ತ್ಯಾಜ್ಯ ತೊಟ್ಟಿಗಳು ಬೀದಿ ನಾಯಿ ಹಾಗೂ ಹಂದಿಗಳನ್ನು ಸಾಕುತ್ತಿದ್ದರೆ, ಇನ್ನು ಕೆಲವು ಕಡೆ ಕೆಲವೊಂದು ಮನೆಯವರು ಬೀದಿ ನಾಯಿಗಳಿಗೆ ಬ್ರೇಡ್‌, ರೊಟ್ಟಿ, ಚಪಾತಿ, ಅನ್ನ ಹಾಕಿ ಬೀದಿಯಲ್ಲಿಯೇ ಸಾಕುತ್ತಿದ್ದಾರೆ. 

* ಬಸವರಾಜ ಹೂಗಾರ 

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.