ಸೆಪ್ಟೆಂಬರ್‌ 5ರಂದು ರಾಜ್ಯಾದ್ಯಂತ ಕರಾಳ ದಿನಾಚರಣೆ


Team Udayavani, Jun 23, 2017, 3:15 PM IST

hub2.jpg

ಹುಬ್ಬಳ್ಳಿ: ಅನುದಾನಿತ ಶಾಲಾ-ಕಾಲೇಜು ನೌಕರರಿಗೆ ಸರಕಾರ ಪಿಂಚಣಿ ಯೋಜನೆ ಜಾರಿಗೊಳಿಸದಿದ್ದರೆ ಸೆಪ್ಟಂಬರ್‌ 5ರ ಶಿಕ್ಷಕರ ದಿನಾಚರಣೆಯಂದು ರಾಜ್ಯಾದ್ಯಂತ ಕರಾಳ ದಿನ ಹಾಗೂ ಆಗಸ್ಟ್‌ 16ರಂದು ಜಿಲ್ಲಾ ಕೇಂದ್ರಗಳಲ್ಲಿ ಧರಣಿ ಸತ್ಯಾಗ್ರಹ ನಡೆಸಲು ಕರ್ನಾಟಕ ರಾಜ್ಯ ಅನುದಾನಿತ ಶಾಲಾ-ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘ ತೀರ್ಮಾನಿಸಿದೆ. 

ನಗರದ ಸಿದ್ಧಾರೂಢ ಮಠದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸಂಘದ ರಾಜ್ಯ ಕಾರ್ಯಕಾರಣಿಯಲ್ಲಿ ಸದಸ್ಯರು ಈ ತೀರ್ಮಾನ ಕೈಗೊಂಡರು. 1-4- 2006ರ ಪೂರ್ವದಲ್ಲಿ ನೇಮಕಗೊಂಡು ನಂತರ ಅನುದಾನಕ್ಕೊಳಪಟ್ಟ ಹಾಗೂ 1-4-2006ರ ನಂತರ ಅಧಿಕೃತವಾಗಿ ನೇಮಕಗೊಂಡು ವೇತನ ಪಡೆಯುತ್ತಿರುವ ಯಾವೊಬ್ಬ ಅನುದಾನಿತ ಶಾಲಾ-ಕಾಲೇಜಿನ ನೌಕರನಿಗೆ ಸರಕಾರ ಪಿಂಚಣಿ ಯೋಜನೆ ಜಾರಿಗೊಳಿಸಿರುವುದಿಲ್ಲ.

ಈ ಯೋಜನೆ ಜಾರಿಗಾಗಿ ಸಂಘಟನೆಯು ಅನೇಕ ಬಾರಿ ಹೋರಾಟ ಮಾಡಿತು. ಆದರೂ ಇದುವರೆಗೆ ಸರಕಾರ ಸಂಘದ ಬೇಡಿಕೆಗಳನ್ನು ಈಡೇರಿಸಿಲ್ಲ. ಆದ್ದರಿಂದ ದೊಡ್ಡ ಪ್ರಮಾಣದಲ್ಲಿ ಹೋರಾಟ ಮಾಡುವುದು ಅನಿವಾರ್ಯವಾಗಿದೆ.

ಈ ಎರಡು ಹಂತಗಳ ಪ್ರತಿಭಟನೆಗೆ ಸರಕಾರ ಸ್ಪಂದಿಸದಿದ್ದರೆ ಅಕ್ಟೋಬರ್‌ ನಲ್ಲಿ ರಾಜ್ಯಮಟ್ಟದಲ್ಲಿ ಪಿಂಚಣಿ ವಂಚಿತ ನೌಕರರ ಬೃಹತ್‌ ಸಮಾವೇಶ ಆಯೋಜಿಸುವ ಮೂಲಕ ಅನಿದಿಷ್ಟಾವಧಿಯ ಹೋರಾಟ ಮಾಡಲು ಹಾಗೂ ಸಮಾವೇಶದ ದಿನಾಂಕವನ್ನು ನಂತರ ನಿಗದಿಪಡಿಸಲು ತೀರ್ಮಾನಿಸಿದರು.

ಸಭೆಯಲ್ಲಿ ರಾಜ್ಯಾಧ್ಯಕ್ಷ ಜಿ. ಹನಮಂತಪ್ಪ ಮಾತನಾಡಿ, ಸರಕಾರ ಅನುದಾನಿತ ನೌಕರರ ಸೇವೆಗೆ ಸೇರಿದ ದಿನಾಂಕ ಪರಿಗಣಿಸಿ ಅಖಂಡ ಸೇವೆ ಆಧಾರದ ಮೇಲೆ ವೇತನ ನಿಗದಿಗೊಳಿಸಿ ಪಿಂಚಣಿ ನೀಡಬೇಕು. 1-4-2006ರ ನಂತರ ನೇಮಕಗೊಂಡ ಪ್ರತಿಯೊಬ್ಬ ನೌಕರನಿಗೂಹಳೆಯ ನಿಶ್ಚಿತ ಪಿಂಚಣಿಯನ್ನೆ ನೀಡಬೇಕು. 

ಸಮಸ್ಯೆಯ ಶಾಶ್ವತ ಪರಿಹಾರಕ್ಕಾಗಿ ಭವಿಷ್ಯದಲ್ಲಿ ನೇಮಕವಾಗುವ ಅನುದಾನಿತ ನೌಕರನಿಗೆ ಸರಕಾರಿ ನೌಕರರಿಗೆ ಇರುವಂತೆ ನೂತನ ಪಿಂಚಣಿ ಯೋಜನೆಯನ್ನು ಯಥಾವತ್ತಾಗಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು. ಅಲ್ಲದೆ ಅನುದಾನಿತ ನೌಕರರು ಒಗ್ಗಟ್ಟಾಗಿ ಹೋರಾಟ ಮಾಡಿದಿದ್ದರೆ ಸರಕಾರ ನಮ್ಮ ಸಮಸ್ಯೆ ಪರಿಹರಿಸಲಾರದು ಎಂದರು. 

ಸಭೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಸಂಘಟನೆ ಮುಖಂಡರಾದ ಕೆ.ವೈ. ಹಡಗಲಿ, ಆರ್‌.ಎ. ಸನದಿ, ಎಚ್‌.ಎಂ. ಶಶಿಕುಮಾರ, ಆರ್‌. ಎಸ್‌. ಗಂಗನಹಳ್ಳಿ, ಅಜಮೀರ ನಂದಾಪುರ, ಗಣೇಶ ಶೆಟ್ಟಿಗಾರ, ಆಂಜನೇಯ, ಗಂಗೂರ, ಡಾ| ಸರ್ವಮಂಗಳಾ ಕುದರಿ, ಮಲ್ಲಿಕಾರ್ಜುನ ಬಿರಾದಾರ, ಬಿ.ಜಿ. ಕೊರಗ, ದಳವಾಯಿ, ಚಂದಪ್ಪ ಯಾದವ, ಅಂತ್ಯಪ್ಪ ಬಿರಾದಾರ, ಡಿ.ಕೆ. ಬಳಗಾನೂರ, ವಿನಾಯಕ ಶೇಟ್‌ ಮೊದಲಾದವರು ಪಾಲ್ಗೊಂಡಿದ್ದರು.  

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.