ನವೆಂಬರ್‌ ವೇಳೆಗೆ ಬಿಆರ್‌ಟಿಎಸ್‌ ಪೂರ್ಣ: ದರ್ಪಣ ಜೈನ್‌ ವಿಶ್ವಾಸ


Team Udayavani, Jun 24, 2017, 2:27 PM IST

hub4.jpg

ಹುಬ್ಬಳ್ಳಿ: ತ್ವರಿತ ಗತಿಯಲ್ಲಿ ಬಿಆರ್‌ಟಿಎಸ್‌ ಕಾಮಗಾರಿ ನಡೆದಿದ್ದು, ಇದೇ ಗತಿಯಲ್ಲಿ ಕಾಮಗಾರಿ ಮುಂದುವರಿದರೆ ನವೆಂಬರ್‌ ತಿಂಗಳಿನಲ್ಲಿ ಬಿಆರ್‌ಟಿಎಸ್‌ ಬಸ್‌ ಸೇವೆ ಆರಂಭಗೊಳ್ಳಲಿದೆ ಎಂದು ನಗರ ಭೂ ಸಾರಿಗೆ ನಿರ್ದೇಶನಾಲಯದ ಆಯುಕ್ತ ದರ್ಪಣ ಜೈನ್‌ ತಿಳಿಸಿದರು. 

ನಗರದ ಗೋಕುಲ ರಸ್ತೆಯ ಬಿಆರ್‌ ಟಿಎಸ್‌ ಡೀಪೋ ಕಾಮಗಾರಿ ಪರಿವೀಕ್ಷಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಭೂ ಸ್ವಾಧೀನ, ಕೆಲ ಗುತ್ತಿಗೆದಾರರ ನಿಧಾನ ಗತಿಯ ಕಾಮಗಾರಿಯಿಂದಾಗಿ ಯೋಜನೆ ಅನುಷ್ಠಾನ ವಿಳಂಬವಾಗುತ್ತಿದೆ. ಸದ್ಯದ ಸ್ಥಿತಿಯನ್ನು ಪರಿಶೀಲಿಸಿದರೆ ನವೆಂಬರ್‌ನಲ್ಲಿ ಯೋಜನೆ ಪೂರ್ಣಗೊಳ್ಳುವ ವಿಶ್ವಾಸವಿದೆ ಎಂದರು. 

ಹುಬ್ಬಳ್ಳಿ-ಧಾರವಾಡ ಬಿಆರ್‌ಟಿಎಸ್‌ 800 ಕೋಟಿ ರೂ. ಯೋಜನೆಯಾಗಿದ್ದು, ಅದರಲ್ಲಿ  ಈಗಾಗಲೇ 72 ಎಕರೆ ಭೂ ಸ್ವಾಧೀನಕ್ಕಾಗಿ 300 ಕೋಟಿ ವೆಚ್ಚ ತಗುಲಿದೆ. ಅವಳಿ ನಗರದ ಮಧ್ಯೆ 8 ಫ‌ುಟ್‌ ಓವರ್‌ ಬ್ರಿಡ್ಜ್ ನಿರ್ಮಿಸಲಾಗುತ್ತಿದ್ದು, ಅದರಲ್ಲಿ 6 ಫ‌ುಟ್‌ ಓವರ್‌ ಬ್ರಿಡ್ಜ್ಗಳ ಕಾಮಗಾರಿ ಮುಗಿಯುವ ಹಂತದಲ್ಲಿದೆ ಎಂದರು. 

ಮುಂದಿನ 20 ವರ್ಷಗಳಲ್ಲಿ ಅವಳಿ ನಗರದ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ಯೋಜನೆ ರೂಪಿಸಲಾಗುತ್ತಿದೆ. ಸಾರ್ವಜನಿಕ ಸಾರಿಗೆಗೆ ಹೆಚ್ಚಿನ ಆದ್ಯತೆ ನೀಡಿದರೆ ಸಂಚಾರ ದಟ್ಟಣೆ ನಿಯಂತ್ರಿಸಲು ಸಾಧ್ಯವಾಗುತ್ತದೆ. ಆಗ ಜನರು ಕಾರ್‌, ಬೈಕ್‌ ಕಡಿಮೆ ಮಾಡಿ ಸಾರ್ವಜನಿಕ ಸಂಚಾರ ಬಳಕೆ ಮಾಡುತ್ತಾರೆ ಎಂದು ತಿಳಿಸಿದರು. 

ಅವಳಿ ನಗರದ ಮಧ್ಯೆ ಒಟ್ಟು 130 ಬಸ್‌ಗಳ ಸೇವೆ ಒದಗಿಸಲಾಗುವುದು. 100 ಸ್ಟಾಂಡರ್ಡ್‌ ಬಸ್‌ಗಳು ಹಾಗೂ 30 ಆರ್ಟಿಕ್ಯುಲೇಟೆಡ್‌ ಬಸ್‌ಗಳು ಸಂಚರಿಸಲಿವೆ. ಇಂಟಲಿಜೆಂಟ್‌ ಟ್ರಾನ್ಸ್‌ಪೊàರ್ಟ್‌ ಸಿಸ್ಟಮ್‌ ಇದಾಗಿದೆ. ನೂತನ ಬಸ್‌ಗಳು ಲೋ ಫ್ಲೋರ್‌ ಬಸ್‌ಗಳಾಗಿದ್ದು, ಪ್ರಯಾಣಿಕರು ಕೂಡಲು ಉತ್ತಮ ಆಸನ ವ್ಯವಸ್ಥೆಯಿದೆ.

ಕಡಿಮೆ ನಿಲುಗಡೆ ಹಾಗೂ ಹೆಚ್ಚು ನಿಲುಗಡೆಯ ಸೇವೆಯನ್ನು ಒದಗಿಸಲಾಗುವುದು. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ  60 ಚಾಲಕರಿಗೆ ವೋಲ್ವೊ ಕಂಪನಿಯಿಂದ ತರಬೇತಿ ಕೊಡಿಸಲಾಗುತ್ತಿದೆ ಎಂದು ತಿಳಿಸಿದರು. ಪಾದಚಾರಿಗಳು ರಸ್ತೆ ದಾಟಲು ಸಿಗ್ನಲ್‌ಗ‌ಳ ವ್ಯವಸ್ಥೆಯಿದ್ದು, ಕೆಲವೆಡೆ ಫ‌ುಟ್‌ ಓವರ್‌ ಬ್ರಿಡ್ಜ್ ಕಲ್ಪಿಸಲಾಗಿದೆ.

ಬಿಆರ್‌ಟಿಎಸ್‌ ಆರಂಭಗೊಂಡ ನಂತರ ವಾಹನಗಳು ವೇಗದ ಗತಿಯಲ್ಲಿ ಸಾಗುವುದರಿಂದ ಜಾಗರೂಕತೆಯಿಂದ ಸಂಚರಿಸುವ ಕುರಿತು ಸಾರ್ವಜನಿಕರಿಗೆ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದರು. ಸದ್ಯ ಪ್ರತಿನಿತ್ಯ 1 ಲಕ್ಷ ಜನರು ಅವಳಿ ನಗರದ ಮಧ್ಯೆ ಸಂಚರಿಸುತ್ತಿದ್ದಾರೆ.

ಮುಂದೆ ಅವಳಿ ನಗರದ ಮಧ್ಯೆ ಸಂಚರಿಸುವವರ ಸಂಖ್ಯೆ ಹೆಚ್ಚಾಗಿ ಪ್ರತಿ ದಿಕ್ಕಿನಲ್ಲಿ ಗಂಟೆಗೆ 10,000 ಜನರು ಸಂಚರಿಸಲು ಕೂಡ ಯೋಜನೆ ಪೂರಕವಾಗಿದೆ. ಬೆಳಗ್ಗೆ 6ರಿಂದ ಸಂಚಾರ ಸೇವೆ ಆರಂಭಿಸಿ ರಾತ್ರಿ 10ರವರೆಗೆ ಸೇವೆ ನೀಡಬೇಕೋ ಅಥವಾ ಮಧ್ಯರಾತ್ರಿ 12ರ ವರೆಗೆ ಸೇವೆ ನೀಡಬೇಕೋ ಎಂಬ ಬಗ್ಗೆ ಇನ್ನೂ ನಿರ್ಧರಿಸಿಲ್ಲ ಎಂದು ಅಭಿಪ್ರಾಯಪಟ್ಟರು.

ಇದಕ್ಕೂ ಮುನ್ನ ದರ್ಪಣ ಜೈನ್‌ ಧಾರವಾಡದ ಬಿಆರ್‌ಟಿಎಸ್‌ ಬಸ್‌ ನಿಲ್ದಾಣ, ಹೊಸೂರಿನ ಬಸ್‌ ನಿಲ್ದಾಣ ಪರಿವೀಕ್ಷಣೆ ಮಾಡಿದರು. ರಾಯಾಪುರದ ಬಿಆರ್‌ಟಿಎಸ್‌ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿ ಪ್ರಗತಿ ಕುರಿತು ಚರ್ಚಿಸಿದರು. ಬಿಆರ್‌ಟಿಎಸ್‌ ವಿಶೇಷ ಅಧಿಕಾರಿ ಮುರಳಿಕೃಷ್ಣ, ವ್ಯವಸ್ಥಾಪಕ ನಿರ್ದೇಶಕ ಎಂ.ಜಿ. ಹಿರೇಮಠ, ಉಪಪ್ರಧಾನ ವ್ಯವಸ್ಥಾಪಕ ಬಸವರಾಜ ಕೇರಿ ಇದ್ದರು. 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.