ಚಿಂತೆ ಬಿಡಿ, ಭಗವಂತನ ಚಿಂತನೆ ಮಾಡಿ: ಪರಮಾರೂಢ ಶ್ರೀ


Team Udayavani, Jun 28, 2017, 3:02 PM IST

hub3.jpg

ಹುಬ್ಬಳ್ಳಿ: ಸುಖ-ದುಃಖ ಚಿಂತಿಸಿದರೆ ಫ‌ಲವೇನು, ಅದರ ಬದಲಾಗಿ ಭಗವಂತನ ಚಿಂತನೆ ಮಾಡಿದರೆ ದೇವರ ಅನುಗ್ರಹವಾದರೂ ಸಿಕ್ಕೀತು ಎಂದು ಬಾಗಲಕೋಟೆ ರಾಮಾರೂಢಮಠದ ಶ್ರೀ ಪರಮಾರೂಢ ಸ್ವಾಮೀಜಿ ಹೇಳಿದರು. ಇಲ್ಲಿನ ಶ್ರೀ ಸಿದ್ಧಾರೂಢಸ್ವಾಮಿ ಮಠದಲ್ಲಿ ಮಂಗಳವಾರದಿಂದ ಆರಂಭಗೊಂಡ 11ನೇ ವರ್ಷದ ಭಗವತ್‌ಚಿಂತನ ಸಾಧನಾ ಶಿಬಿರದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. 

ಜೀವನದಲ್ಲಿ ಚಿಂತೆ ಮಾಡಿದರೆ ಯಾವುದೇ ಫ‌ಲವಿಲ್ಲ. ಮನಸ್ಸಿಗೆ ಘಾಸಿಯಾಗುವುದು ಬಿಟ್ಟರೆ ಮತ್ತೇನು ಸಿಗುವುದಿಲ್ಲ. ಸಮಯ ವ್ಯರ್ಥ ಮಾಡದೆ ಭಗವಂತನ ಚಿಂತನೆ ಮಾಡಿ ಮನಸ್ಸನ್ನು ಶುದ್ಧೀಕರಿಸಿಕೊಳ್ಳಬೇಕು. ಯಾವುದೇ ಕೆಲಸ ಆರಂಭಿಸುವ ಮುನ್ನ ಅದನ್ನು ಪೂರ್ತಿ ಮಾಡುತ್ತೇವೆ, ಗುರಿ ಮುಟ್ಟುವವರೆಗೂ ನಿಲ್ಲಿಸುವುದಿಲ್ಲ ಎಂಬಂತಿದ್ದರೆ ಮಾತ್ರ ಆ ಕುರಿತು ಚಿಂತನೆ ಮಾಡಿ ಮುನ್ನುಗ್ಗಬೇಕು ಎಂದರು. 

ಹುಬ್ಬಳ್ಳಿ ನಾಶಿಕಶರಣಪ್ಪ ಮಠದ ಶ್ರೀ ವಾಸುದೇವಾನಂದ ಸ್ವಾಮೀಜಿ ಮಾತನಾಡಿ, ಇಂದು ಭಗವಂತನ ಚಿಂತನೆ ಮಾಡುವವರ ಸಂಖ್ಯೆ ತುಂಬಾ ವಿರಳ. ಅನೇಕರಿಗೆ ಸಂಸಾರದ ಚಿಂತೆ, ಸಮಾಜದ ಚಿಂತೆ ಮಾಡಲು ಸಮಯಾವಕಾಶವಿರುವುದಿಲ್ಲ. ಇನ್ನು ಭಗವಂತನ ಚಿಂತನೆ ಮಾಡುವುದೆಲ್ಲಿ. 

ಆದ್ದರಿಂದ ಎಲ್ಲರೂ ಆ ಭಗವಂತನ ಚಿಂತನೆ ಮಾಡುವ ಮೂಲಕ ಮನಸ್ಸು ಹಾಗೂ ಬುದ್ಧಿ ಶುದ್ಧೀಕರಿಸಿಕೊಳ್ಳಬೇಕು ಎಂದು ಹೇಳಿದರು. ಶ್ರೀ ಸಚ್ಚಿದಾನಂದ ಸ್ವಾಮೀಜಿ ಮಾತನಾಡಿ, ಸದ್ಗುರು ಶ್ರೀ ಸಿದ್ಧಾರೂಢರಂತಹ ಮಹಾತ್ಮರು ಮತ್ಯಾರು ಇಲ್ಲ. ಸಿದ್ಧಾರೂಢಸ್ವಾಮಿ ಮಠದಲ್ಲಿ ನಿರಂತರ ಜ್ಞಾನ ದಾಸೋಹ, ಅನ್ನದಾಸೋಹ ನಡೆಯುತ್ತಿರುವುದು ಶ್ಲಾಘನೀಯ ಎಂದರು. 

ರಾಜವಿದ್ಯಾಶ್ರಮದ ಶ್ರೀ ಷಡಕ್ಷರಿ ಸ್ವಾಮೀಜಿ ಮಾತನಾಡಿ, ಶ್ರೀಮಠದಲ್ಲಿ ಈ ಹಿಂದೆ ನಡೆದುಕೊಂಡು ಬಂದ ಸಂಗೀತ, ಜ್ಞಾನಾರ್ಜನೆಯಂತಹ ಕಾರ್ಯಕ್ರಮಗಳು ಯಾವುದೇ ಬದಲಾವಣೆಗೆ ಆಸ್ಪದ ನೀಡದೆ ನಿರಂತರವಾಗಿ ನಡೆಯಬೇಕು ಎಂದು ಹೇಳಿದರು. ಕಾಡರಕೊಪ್ಪದ ಶ್ರೀ ದಯಾನಂದ ಸರಸ್ವತಿ ಸ್ವಾಮೀಜಿ, ಇಂಚಲ ಸಾಧುಸಂಸ್ಥಾನಮಠದ ಶ್ರೀ ಶಿವಾನಂದ ಭಾರತಿ ಸ್ವಾಮೀಜಿ ಇನ್ನಿತರರು ಮಾತನಾಡಿದರು. 

ಶ್ರೀಮಠದ ಟ್ರಸ್ಟ್‌ ಚೇರನ್‌ ಧರಣೇಂದ್ರ ಜವಳಿ ಅಧ್ಯಕ್ಷತೆ ವಹಿಸಿದ್ದರು. ಯೋಗಿರಾಜ ಶ್ರೀ ಸದಾಶಿವ ಗುರೂಜಿ, ಶ್ರೀ ಅತ್ಯಾನಂದ ಸ್ವಾಮೀಜಿ, ಶ್ರೀ ರಾಮಾನಂದ ಶ್ರೀಗಳು, ಪ್ರಭುದೇವ ಪಾಟೀಲ, ಶ್ರೀ ಶಶಿಕಲಾ ಮಾತಾಜೀ, ಶ್ರೀ ಸ್ವರೂಪಾನಂದ ಸ್ವಾಮೀಜಿ, ಧರ್ಮದರ್ಶಿಗಳಾದ ಗೀತಾ ಎಸ್‌.ಜಿ. ಜ್ಯೋತಿ ಸಾಲಿಮಠ, ನಾರಾಯಣಪ್ರಸಾದ ಪಾಠಕ, ಬಸವರಾಜ ಕಲ್ಯಾಣಶೆಟ್ಟರ, ನಾರಾಯಣ ನಿರಂಜನ ಇತರರಿದ್ದರು. ಧರ್ಮದರ್ಶಿ ಶಾಮಾನಂದ ಪೂಜೇರಿ ಸ್ವಾಗತಿಸಿದರು. ಶಿವಪುತ್ರಪ್ಪ ಪೂಜಾರ ಪ್ರಾರ್ಥಿಸಿದರು. ಎಸ್‌.ಐ. ಕೋಳಕೋರ ನಿರೂಪಿಸಿದರು.  

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.