ಮಾದಕ ವ್ಯಸನಗಳಿಗೆ ಸೋಲಬೇಡಿ: ನ್ಯಾ| ದಾಕ್ಷಾಯಿಣಿ


Team Udayavani, Jul 23, 2017, 11:54 AM IST

hub6.jpg

ಕಲಘಟಗಿ: ಉಜ್ವಲ ಭವಿಷ್ಯ ನಿರ್ಮಿಸುವ ವಿದ್ಯಾರ್ಥಿ ಜೀವನದಲ್ಲಿ ಮಾದಕ ವ್ಯಸನಗಳಿಗೆ ಮನಸೋಲದೆ ರಾಷ್ಟ್ರ ನಿರ್ಮಾಣದ ಕಾಯಕದತ್ತ ಸಾಗಬೇಕೆಂದು ಹಿರಿಯ ದಿವಾಣಿ ನ್ಯಾಯಾಧೀಶೆ ದಾಕ್ಷಾಯಿಣಿ ಜಿ.ಕೆ. ಕಿವಿಮಾತು ಹೇಳಿದರು. ದಾಸ್ತಿಕೊಪ್ಪದ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ ಅಂಗವಾಗಿ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. 

ಕಾಲೇಜು ಆವರಣಗಳಲ್ಲಿ ನೂತನ ವಿದ್ಯಾರ್ಥಿಗಳನ್ನು ಸ್ವಾಗತಿಸುವ ನಿಟ್ಟಿನಲ್ಲಿ ಹಿರಿಯ ವಿದ್ಯಾರ್ಥಿಗಳು ತಮ್ಮ ಮೋಜಿಗೋಸ್ಕರ ರ್ಯಾಗಿಂಗ್‌ ಮಾಡುವುದು ಕಾನೂನುಬಾಹಿರ. ಕುತೂಹಲಕ್ಕಾಗಿ ಮಾದಕ ವಸ್ತುಗಳನ್ನು ಬಳಸುವ ಯುವ ಜನಾಂಗ ನಂತರದ ದಿನಗಳಲ್ಲಿ ವ್ಯಸನಗಳಿಗೆ ಆಧೀನರಾಗಿ ತಮ್ಮ ಭವಿಷ್ಯವನ್ನೇ ಹಾಳು ಮಾಡಿಕೊಳ್ಳುತ್ತಾರೆ.

ಯುವಸಮೂಹ ವ್ಯಸನ ತಡೆಗಟ್ಟುವಲ್ಲಿ ಸಹಕರಿಸಬೇಕೆಂದರು. ಕಿರಿಯ ದಿವಾಣಿ ನ್ಯಾಯಾ ಧೀಶ ಗಿರಿಗೌಡ ಬಿ. ಮಾತನಾಡಿ, ಮಾದಕ ವಸ್ತುಗಳ ಸೇವನೆಗೆ ಅಂಟಿಕೊಂಡಿರುವ ಪ್ರಕರಣಗಳಿಗೂ ಅಪಘಾತ ಮತ್ತು ಅಪರಾಧಗಳ ಪ್ರಮಾಣ-ತೀವ್ರತೆಗೂ ನೇರ ಸಂಬಂಧವಿದೆ. ಯುವ ಜನತೆ ಒಳ್ಳೆಯ ವಿಚಾರಗಳಿಂದ ಸುಂದರ ಸಮಾಜ ನಿರ್ಮಿಸುವತ್ತ ಯೋಚಿಸಬೇಕು ಎಂದರು. 

ಮಾನಸಿಕ ಆರೋಗ್ಯ ತಜ್ಞ ಡಾ| ಶಿವಶಂಕರ ಪೋಳ ಉಪನ್ಯಾಸ ನೀಡಿ, ಸಂತೋಷಕ್ಕೆ ಆಲ್ಕೋಹಾಲ್‌ ಸೇವನೆಯೊಂದೇ ಮಾರ್ಗವಲ್ಲ. ಮಾನವ ತಾನು ಅನುಭವಿಸುವ ಸಂತೋಷ ಮತ್ತು ದುಃಖ ಎರಡರ ಆಚರಣೆಗೂ ಮದ್ಯಪಾನಕ್ಕೆ ಶರಣಾಗುತ್ತಿರುವುದು ವಿಷಾದನೀಯ. ಮದ್ಯ ವ್ಯಸನ ಬಿಡಿಸಲು ಆಪ್ತ ಸಮಾಲೋಚನೆಯೇ ಬಹುಮುಖ್ಯ ಮಾರ್ಗವಾಗಿದೆ ಎಂದರು. 

ಸಹಾಯಕ ಸರ್ಕಾರಿ ಅಭಿಯೋಜಕ ಮಲ್ಲಿಕಾರ್ಜುನ ದೊಡ್ಡಗೌಡ್ರ, ವಕೀಲರ ಸಂಘದ ನೂತನ ಅಧ್ಯಕ್ಷ ಎಸ್‌.ಜೆ. ಸುಂಕದ, ತಾಲೂಕಾ ಆರೋಗ್ಯಾ ಧಿಕಾರಿ ಡಾ| ಪಿ.ವಿ. ಕಾಡರಕೊಪ್ಪ ಹಾಗೂ ತಾಲೂಕಾ ಆರೋಗ್ಯ ಶಿಕ್ಷಣಾ ಧಿಕಾರಿ ಭರತ ಬಹುರೂಪಿ ಮಾತನಾಡಿದರು. ಪಿಎಸ್‌ಐ ಪರಮೇಶ್ವರ ಕವಟಗಿ ಉಪನ್ಯಾಸ ನೀಡಿದರು. ಪ್ರಾಚಾರ್ಯ ಗಂಗಾಧರ ಗುಮ್ಮಗೋಳಮಠ ಅಧ್ಯಕ್ಷತೆ ವಹಿಸಿದ್ದರು.

ನ್ಯಾಯವಾದಿ ಬಿ.ವಿ.ಪಾಟೀಲ, ಎಂ.ಎಸ್‌. ಧನಿಗೊಂಡ, ವಿ.ಬಿ. ಶಿವನಗೌಡ್ರ, ಡಾ| ಫರ್ಜಾನಾ ಪಠಾಣ, ಪ್ರೊ| ಬಿ.ಎಸ್‌. ಶಿರಿಯಪ್ಪಗೌಡ್ರ, ಡಾ| ಗಿರೀಶ ದೇಸೂರ, ಪ್ರೊ| ಶೈಲಜಾ ಹುದ್ದಾರ, ಪ್ರೊ| ಪ್ರೀತಿ ಪಾಟೀಲ, ಪ್ರೊ| ಭಾರತಿ ದಂಡಿನ್‌, ಪ್ರೊ| ಸುಜಾತಾ ತಲ್ಲೂರ ಇತರರಿದ್ದರು. ನ್ಯಾಯವಾದಿ ಕೆ.ಬಿ. ಗುಡಿಹಾಳ ನಿರೂಪಿಸಿದರು. ಡಾ|ಜಯಾನಂದ ಹಟ್ಟಿ ಸ್ವಾಗತಿಸಿದರು. ಡಾ| ಬಸವರಾಜೇಶ್ವರಿ ಪಾಟೀಲ ವಂದಿಸಿದರು.  

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.