ನಾಳೆಯಿಂದ ನಿತ್ಯವಚನೋತ್ಸವ


Team Udayavani, Jul 23, 2017, 11:54 AM IST

hub4.jpg

ಧಾರವಾಡ: ಬಸವ ಕೇಂದ್ರ ವತಿಯಿಂದ ಶ್ರಾವಣ ಮಾಸದ ಅಂಗವಾಗಿ ಹಮ್ಮಿಕೊಂಡಿರುವ ನಿತ್ಯ ವಚನೋತ್ಸವ ಜು. 24ರಿಂದ ಆರಂಭಗೊಳ್ಳಲಿದ್ದು, ನಗರದ 15 ಬಡಾವಣೆಯಲ್ಲಿ ಆ. 20ರ ವರೆಗೆ ನಡೆಯಲಿದೆ ಎಂದು ಸಾಹಿತಿ ಡಾ| ವೀರಣ್ಣ ರಾಜೂರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.  

24ರಂದು ಸಂಜೆ 5:00 ಗಂಟೆಗೆ ಮುರುಘಾಮಠದಲ್ಲಿ ನಿತ್ಯ ವಚನೋತ್ಸವಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಚಾಲನೆ ನೀಡಲಿದ್ದು, ಮಲ್ಲಿಕಾರ್ಜುನ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ವಚನ ಚಿಂತನೆಗಾಗಿ ಆಯ್ದುಕೊಂಡ ವಚನ ಪರಿಮಳ ಭಾಗ-2 ಪುಸ್ತಕ ಲೋಕಾರ್ಪಣೆಗೊಳ್ಳಲಿದೆ. 

ವಚನೋತ್ಸವ ಕಾರ್ಯಕ್ರಮದಲ್ಲಿ 95 ಸಂಚಾಲಕರ ನೇತೃತ್ವದಲ್ಲಿ 600ಕ್ಕೂ ಅಧಿಕ ಮನೆಗಳಲ್ಲಿ ಏಕಕಾಲಕ್ಕೆ ವಚನ ವಿಶ್ಲೇಷಣೆ ಹಾಗೂ ಪ್ರತಿ ರವಿವಾರ ಸಾಮೂಹಿಕ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು. ಈ ಬಾರಿ ಮಕ್ಕಳಿಗೆ, ಯುವಕರಿಗೆ ಮತ್ತು ಮಹಿಳೆಯರಿಗೆ ಆದ್ಯತೆ ನೀಡಲಾಗಿದೆ. 

ಮಕ್ಕಳಿಗೆ ವಚನ ಲೇಖನ ಸ್ಪರ್ಧೆ, ಭಾಷಣ ಸ್ಪರ್ಧೆ ಏರ್ಪಡಿಸಲಾಗುವುದು. ಶಾಲಾ ಮಕ್ಕಳಿಗಾಗಿ ಬಸವಾದಿ ಶರಣ-ಶರಣೆಯರ ರೂಪಕ ಪ್ರದರ್ಶನ, ಛದ್ಮವೇಷ ಸ್ಪರ್ಧೆಗಳು ನಡೆಯಲಿವೆ. ಗ್ರಾಮಾಂತರ ಪ್ರದೇಶದಲ್ಲಿ ಇಷ್ಟಲಿಂಗ ಧಾರಣೆ ಹಾಗೂ ಬಸವತತ್ವ ಸಂದೇಶ ಸಾರುವ ಕಾರ್ಯಕ್ರಮ ನಡೆಯಲಿದೆ.

ಬಸವ ಪಂಚಮಿ ನಿಮಿತ್ತ ಜು. 27ರಂದು ಬೆಳಗ್ಗೆ 10:00 ಗಂಟೆಗೆ ಬುದ್ಧರಕ್ಕಿತ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಹಾಲು, ಉಂಡಿ ವಿತರಣೆ ಮಾಡಲಾಗುವುದು ಎಂದು ಹೇಳಿದರು. ಜು. 30ರಂದು ಬೆಳಗ್ಗೆ 10:00 ಗಂಟೆಗೆ ನಗರದ ಆರ್‌ಎಲ್‌ಎಸ್‌ ಶಾಲೆಯಲ್ಲಿ 5ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ವಚನ ಕಂಠಪಾಠ, ಬರೆಯುವ ಸ್ಪರ್ಧೆ ಹಾಗೂ ಭಾಷಣ ಸ್ಪರ್ಧೆ ನಡೆಯಲಿದೆ.

ಅಂದು ಬೆಳಗ್ಗೆ 10:30 ಗಂಟೆಗೆ ಚರಂತಿಮಠ ಗಾರ್ಡನ್‌ನ ಶ್ರೀ ಬನಶಂಕರಿ ಭವನದಲ್ಲಿ, ನಾರಾಯಣ ಹೃದಯಾಲಯದಲ್ಲಿ ವೈದ್ಯರಿಂದ ಸಾರ್ವಜನಿಕರಿಗೆ ಹೃದಯ ತಪಾಸಣೆ, ರಕ್ತದೊತ್ತಡ, ರಕ್ತ ತಪಾಸಣೆ, ಇಸಿಜಿ ಮತ್ತು ಇಕೋ ತಪಾಸಣೆ ಶಿಬಿರ ಜರುಗಲಿದೆ ಎಂದು ವಿವರಿಸಿದರು.

ಆ. 6ರಂದು ಮಧ್ಯಾಹ್ನ 3:30 ಗಂಟೆಗೆ ರಂಗಾಯಣದ ಸುವರ್ಣ ಸಾಂಸ್ಕೃತಿಕ ಸಮುತ್ಛಯ ಭವನದಲ್ಲಿ 1ರಿಂದ 7ನೇ ತರಗತಿಯ ಮಕ್ಕಳಿಗಾಗಿ ಬಸವಾದಿ ಶರಣ-ಶರಣೆಯರ ರೂಪಕಗಳು, ಛದ್ಮವೇಷ ಸ್ಪರ್ಧೆಗಳು ನಡೆಯಲಿವೆ. ವೇಷಭೂಷಣ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ಮಕ್ಕಳು ಜು. 30 ರೊಳಗಾಗಿ ಹೆಸರು ನೋಂದಾಯಿಸಬೇಕು.

ಆ. 7ರಂದು ಬೆಳಗ್ಗೆ 10:00 ಗಂಟೆಗೆ ಹೆಬ್ಬಳ್ಳಿ ಗ್ರಾಮದ ಕಲ್ಮೇಶ್ವರ ದೇವಸ್ಥಾನ ಆವರಣದಲ್ಲಿ ಇಷ್ಟಲಿಂಗ ದೀûಾ ಕಾರ್ಯಕ್ರಮ, ಸಹಜ ಶಿವಯೋಗ ಕಾರ್ಯಕ್ರಮ ಜರುಗಲಿದೆ. ಆ. 13ರಂದು ಸಂಜೆ 5:00 ಗಂಟೆಗೆ ಜಯನಗರದಲ್ಲಿ ಶರಣ ಸಂಗಮ ನಡೆಯಲಿದ್ದು, ವಿಶೇಷ ಉಪನ್ಯಾಸ ಹಾಗೂ ಅನುಭಾವಗೋಷ್ಠಿ ಜರುಗಲಿದೆ.

ಆ. 20ರಂದು ಸಂಜೆ 4:00 ಗಂಟೆಗೆ ನಾಡೋಜ ಡಾ| ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ವಚನೋತ್ಸವದ ಸಮಾರೋಪ ಸಮಾರಂಭ ಜರುಗಲಿದೆ ಎಂದರು. ಹೆಚ್ಚಿನ ಮಾಹಿತಿಗೆ ಮಲ್ಲಿಕಾರ್ಜುನ ನಡಕಟ್ಟಿ (9480323411), ಶಂಕ್ರಪ್ಪ ಕೋರಿಶೆಟ್ಟಿ(8892789392), ಸುಲೋಚನಮ್ಮ ಲಕಮನಹಳ್ಳಿ(9611685027), ಶಾರದಾ ಕುಮಾರಮಠ (9741164699) ಅವರನ್ನು ಸಂಪರ್ಕಿಸಬಹುದು ಎಂದರು. 

ಪತ್ರಿಕಾಗೋಷ್ಠಿಯಲ್ಲಿ ಬಸವ ಕೇಂದ್ರದ ಅಧ್ಯಕ್ಷ ಶಿವಣ್ಣ ಶರಣವರ, ಮಲ್ಲಿಕಾರ್ಜುನ ನಡಕಟ್ಟಿ, ಶಿವಶರಣ ಕಲಬಶೆಟ್ಟರ, ಉಮೇಶ ಕಟಗಿ, ಶಿವಾನಂದ ಲೋಲೆನವರ ಇತರರಿದ್ದರು. 

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.