ಗಣೇಶ ವಿಸರ್ಜನೆ ಚಿಂತೆಗೆ ಬಿಗ್‌ ರಿಲೀಫ್‌!


Team Udayavani, Aug 19, 2017, 12:09 PM IST

hub5.jpg

ಹುಬ್ಬಳ್ಳಿ: ನಗರದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ಮಹಾಮಂಡಳದವರಿಗೆ ಮೂರ್ತಿಗಳನ್ನು ಎಲ್ಲಿ ವಿಸರ್ಜಿಸಬೇಕೆಂಬ ಬಗ್ಗೆಯೇ ದೊಡ್ಡ ಚಿಂತೆ ಕಾಡುತ್ತದೆ. ಆದರೆ, ಈ ಬಾರಿ ಪಾಲಿಕೆ ಮುಂಜಾಗ್ರತಾ ಕ್ರಮ ಕೈಗೊಂಡಿದ್ದು, ಕಳೆದ ವರ್ಷದಿಂದ ಮೂರ್ತಿ ವಿಸರ್ಜನೆಗೆ ಬಳಕೆ ಮಾಡುತ್ತಿರುವ ಇಲ್ಲಿನ ಹೊಸೂರು ವೃತ್ತ ಸಮೀಪದ ಕೆನರಾ ಹೋಟೆಲ್‌ ಎದುರು ಸರಕಾರಿ ಮಾದರಿ ಪ್ರಾಥಮಿಕ ಶಾಲೆ ನಂ.16ರ ಬಳಿ ಪಾಲಿಕೆ ಜಾಗದಲ್ಲಿದ್ದ ಬ್ರಿಟಿಷರ ಕಾಲದ ಕೆಳಮಟ್ಟದ ವಾಟರ್‌ ಟ್ಯಾಂಕ್‌ಅನ್ನು ಇನ್ನಷ್ಟು ಅಭಿವೃದ್ಧಿ ಪಡಿಸಲಾಗುತ್ತಿದೆ. 

ಪಾಲಿಕೆಯು ಇಂದಿರಾ ಗಾಜಿನ ಮನೆ ಬಳಿ 2002ರಲ್ಲಿ ಬಾವಿಯೊಂದನ್ನು ನಿರ್ಮಿಸಿತ್ತು. ಈ ಬಾವಿಯೂ ಚಿಕ್ಕದಾಗಿದ್ದು, ದೊಡ್ಡಗಾತ್ರದ 15-20 ಗಣೇಶ ವಿಗ್ರಹಗಳನ್ನು ವಿಸರ್ಜಿಸಿದರೆ ಸಾಕು ತುಂಬಿ ಹೋಗುತ್ತಿತ್ತು. ಅನಂತರ ಬರುವ ವಿಗ್ರಹಗಳ ವಿಸರ್ಜನೆಗೆ ಮಂಡಳಿಯವರು ಪರದಾಡಬೇಕಿತ್ತು. ಪರ್ಯಾಯ ವ್ಯವಸ್ಥೆಯೇ ಇರಲಿಲ್ಲ. ಇದನ್ನು ಮನಗಂಡ ಗಣೇಶೋತ್ಸವ ಮಹಾಮಂಡಳ ಪದಾಧಿಕಾರಿಗಳು ಪ್ರತ್ಯೇಕವಾಗಿ ಮತ್ತೂಂದು ಬಾವಿ ನಿರ್ಮಿಸಬೇಕೆಂದು ಪಾಲಿಕೆಗೆ ಮನವಿ ಮಾಡಿದ್ದರು. ಪಾಲಿಕೆಯು ಸಹಿತ ಸೂಕ್ತ ಸ್ಥಳಕ್ಕಾಗಿ ಹುಡುಕಾಟ ನಡೆಸಿತ್ತು.

ವಿಶಾಲ ಟ್ಯಾಂಕ್‌: ಗಣೇಶ ಮೂರ್ತಿಗಳ ವಿಸರ್ಜನೆಗಾಗಿ ವಿಶಾಲ ಬಾವಿ ಹುಡುಕಾಟ ನಡೆಸುತ್ತಿದ್ದ ಇಲ್ಲವೆ ಹೊಸದಾಗಿ ವಿಶಾಲವಾದ ಹೊಂಡ ನಿರ್ಮಿಸಲು ಯೋಜಿಸುತ್ತಿದ್ದ ಪಾಲಿಕೆ ಮತ್ತು ಗಣೇಶ ಮಹಾಮಂಡಳದವರಿಗೆ ಹೊಸೂರ ಸರಕಾರಿ ಶಾಲೆ ಬಳಿ ನಿರ್ಮಿಸಲಾಗಿದ್ದ ಹಳೆಯದಾದ ಹಾಳು ಬಿದ್ದಿದ್ದ ವಾಟರ್‌ ಟ್ಯಾಂಕ್‌ ವರವಾಗಿ ಪರಿಣಮಿಸಿತು. 

ಗಣೇಶ ಮೂರ್ತಿಗಳ ವಿಸರ್ಜನೆಗೆ ಆಯ್ಕೆ ಮಾಡಲಾದ ಟ್ಯಾಂಕ್‌ ವಿಶಾಲವಾಗಿದ್ದು, 100 ಅಡಿ ಅಗಲ, 100 ಅಡಿ ಉದ್ದ ಹಾಗೂ 16 ಅಡಿ ಆಳದ್ದಾಗಿದೆ. ಇದು ಎರಡು ಎಕರೆ ಜಾಗದಲ್ಲಿದ್ದು, ವಾಹನಗಳ ನಿಲುಗಡೆಗೆ ಹಾಗೂ ಸಾರ್ವಜನಿಕರಿಗೆ ನಿಲ್ಲಲ್ಲು ಸಾಕಷ್ಟು ಸ್ಥಳಾವಕಾಶವಿದೆ ಹಾಗೂ ಯಾವುದೇ ಗಡಿಬಿಡಿಯಿಲ್ಲದೆ ಮಹಾಮಂಡಳದವರು ಗಣೇಶ ಮೂರ್ತಿಗಳನ್ನು ನಿರಾಯಾಸವಾಗಿ ವಿಸರ್ಜನೆ ಮಾಡಬಹುದು. 

50 ಲಕ್ಷ ರೂ. ವೆಚ್ಚದಲ್ಲಿ ನವೀಕರಣ: ಗಣೇಶ ಮೂರ್ತಿಗಳ ವಿಸರ್ಜನೆ ಆಯ್ಕೆ ಮಾಡಲಾದ ವಿಶಾಲವಾದ ಟ್ಯಾಂಕ್‌ ಅನ್ನು ಪಾಲಿಕೆಯು ಅಂದಾಜು 50 ಲಕ್ಷ ರೂ. ವೆಚ್ಚದಲ್ಲಿ ನವೀಕರಿಸುತ್ತಿದೆ. ಟ್ಯಾಂಕ್‌ ತಳಮಟ್ಟದಲ್ಲಿದ್ದು, ಸುರಕ್ಷತೆ ದೃಷ್ಟಿಯಿಂದ ಅದರ ಸುತ್ತಲೂ ಆವರಣ ಗೋಡೆ ನಿರ್ಮಾಣ, 

-ವಿಸರ್ಜನೆಗೂ ಮುನ್ನ ಗಣೇಶ ಮೂರ್ತಿಗಳನ್ನು ಇಟ್ಟು ಪೂಜೆ ಮಾಡಲು ವೇದಿಕೆ, ಸಾರ್ವಜನಿಕರು ಮೂರ್ತಿಗಳ ವಿಸರ್ಜನೆಯನ್ನು ಕುಳಿತುಕೊಂಡು ನೋಡಲು ಆಸನ ವ್ಯವಸ್ಥೆ, ದೊಡ್ಡ ಗಾತ್ರದ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲು ಕ್ರೇನ್‌ ವ್ಯವಸ್ಥೆ, ವಾಹನಗಳು ಸುಗಮವಾಗಿ ಬರಲು ಮತ್ತು ಹೋಗಲು ಪ್ರತ್ಯೇಕ ರಸ್ತೆ ಹಾಗೂ ಫ್ಲಡ್‌ ವಿದ್ಯುತ್‌ ದೀಪಗಳ ವ್ಯವಸ್ಥೆ ಮಾಡಲಾಗುತ್ತಿದೆ.

* ಶಿವಶಂಕರ ಕಂಠಿ

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.