ಕೆಲಸ ಸ್ಥಗಿತಗೊಳಿಸಿ ಬ್ಯಾಂಕ್ ಸಿಬ್ಬಂದಿ ಸಂಪು
Team Udayavani, Aug 23, 2017, 12:47 PM IST
ಧಾರವಾಡ: ಕೇಂದ್ರ ಸರಕಾರದ ಅವೈಜ್ಞಾನಿಕ ಬ್ಯಾಂಕಿಂಗ್ ಸುಧಾರಣಾ ಕ್ರಮ ಹಾಗೂ ಬ್ಯಾಂಕ್ಗಳ ಖಾಸಗೀಕರಣ ವಿರೋ ಧಿಸಿ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದ ಹಿನ್ನೆಲೆಯಲ್ಲಿ ನಗರದ ವಿವಿಧ ಬ್ಯಾಂಕುಗಳ ನೌಕರರು ಕೆಲಸ ಸ್ಥಗಿತಗೊಳಿಸಿ ಮಂಗಳವಾರ ಮುಷ್ಕರ ನಡೆಸಿದರು.
ನೌಕರರು ಬೆಳಿಗ್ಗೆಯಿಂದಲೇ ತಮ್ಮ ತಮ್ಮ ಬ್ಯಾಂಕ್ ವ್ಯವಹಾರ ಸ್ಥಗಿತಗೊಳಿಸಿ ನಗರದ ಸ್ಟೇಟ್ ಬ್ಯಾಂಕ್ ಇಂಡಿಯಾದ ಪ್ರಧಾನ ಕಚೇರಿ ಎದುರು ಪ್ರತಿಭಟನೆ ಮಾಡಿ, ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಸಿಂಡಿಕೇಟ್ ಬ್ಯಾಂಕ್ ಎಪ್ಲಾಯ್ ಅಸೋಸಿಯೇಶನ್ ಪ್ರಧಾನ ಕಾರ್ಯದರ್ಶಿ ಭಗವಾನ ಶಾಬಾದಿ ಮಾತನಾಡಿ, ಬ್ಯಾಂಕುಗಳ ಸುಧಾರಣಾ ನೀತಿಗಳನ್ನು ಕೇಂದ್ರ ಸರಕಾರ ಜಾರಿಗೆ ತರುವ ಮೂಲಕ ಬ್ಯಾಂಕ್ಗಳ ಖಾಸಗೀಕರಣಕ್ಕೆ ಹುನ್ನಾರ ನಡೆಸಿದೆ.
ಇದರಿಂದ ಬ್ಯಾಂಕುಗಳ ಆರ್ಥಿಕ ಪರಿಸ್ಥಿತಿ ಮೇಲೆ ಕೆಟ್ಟ ಪರಿಣಾಮ ಬೀರಲಿದೆ. ಹೀಗಾಗಿ ಕೇಂದ್ರ ಸರಕಾರ ಅವೈಜ್ಞಾನಿಕ ಸುಧಾರಣಾ ನೀತಿಗಳನ್ನು ಕೈ ಬಿಡಬೇಕು. ಅಲ್ಲದೇ ಬ್ಯಾಂಕುಗಳ ವೀಲಿನ ಪ್ರಕ್ರಿಯೆಯೂ ಇತ್ತಿಚೀನ ದಿನಗಳಲ್ಲಿ ಹೆಚ್ಚಾಗಿ ನಡೆಯುತ್ತಿರುವದರಿಂದ ಬ್ಯಾಂಕಿಂಗ್ ಕ್ಷೇತ್ರದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.
ಹೀಗಾಗಿ ಮೊದಲು ಬ್ಯಾಂಕ್ ವಿಲೀನ ಪ್ರಕ್ರಿಯೆ ನಿಲ್ಲಿಸಲಿ ಎಂದು ಒತ್ತಾಯಿಸಿದರು. ಆಲ್ ಇಂಡಿಯಾ ಬ್ಯಾಂಕರ್ ಆμàಸರ್ ಅಸೋಸಿಯೇಶನ್ ದ ಸುಭಾಷ ಸುಂಕದ ಮಾತನಾಡಿ, ದೇಶದ ಆರ್ಥಿಕ ವ್ಯವಸ್ಥೆಗೆ ಸಾಕಷ್ಟು ಶ್ರಮವಹಿಸಿ ದುಡಿಯುತ್ತಿರುವ ಬ್ಯಾಂಕ್ ನೌಕರರ ಹಿತ ಕಾಪಾಡುವಲ್ಲಿ ಕೇಂದ್ರ ಸರಕಾರ ವಿಫಲವಾಗಿದೆ.
ಎಫ್.ಆರ್.ಡಿ.ಐ ಮಸೂದೆ ನೌಕರರಿಗೆ ಮಾರಕವಾಗಿದೆ ಎಂದರು. ಹುಬ್ಬಳ್ಳಿ- ಧಾರವಾಡ ಬ್ಯಾಂಕರ್ ಎಂಪ್ಲಾಯಿಸ್ ಅಸೋಸಿಯೇಶನ್ ಸಂಘಟನಾ ಕಾರ್ಯದರ್ಶಿ ಜಗದೀಶ ಆಲದಕಟ್ಟಿ, ಎಸ್.ಬಿ. ಬಾಂಡೆ, ಎಸ್.ಆರ್. ರಾವ್, ಸತೀಶ ರೆಡ್ಡಿ ಸೇರಿದಂತೆ ಅನೇಕ ಬ್ಯಾಂಕ್ ನೌಕರರು ಪ್ರತಿಭಟನೆಯಲ್ಲಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ