ಪ್ರತಿಭಟನೆ-ಸಭೆ-ಮನವಿ ಸ್ವಾಮೀಜಿ ಉಪವಾಸಾಂತ್ಯ
Team Udayavani, Oct 16, 2017, 2:14 PM IST
ಕುಂದಗೋಳ: ಪಟ್ಟಣದಲ್ಲಿ ಟಿಪ್ಪು ಸ್ಮಾರಕ ಉದ್ಘಾಟನೆಗೆ ಅವಕಾಶ ನೀಡುವುದಿಲ್ಲ ಎಂದು ಹಿರೇಮಠದಿಂದ ಭೂತೇಶ್ವರ ದೇವಸ್ಥಾನದ ವರೆಗೆ ಶ್ರೀ ಶಿತಿಕಂಠೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ರವಿವಾರ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಪ್ರತಿಭಟನಾ ಸ್ಥಳಕ್ಕೆ ಎಸಿ ಮಹೇಶ ಕರ್ಜಗಿ ಹಾಗೂ ಡಿಎಸ್ಪಿ ಬಿ.ಪಿ. ಚಂದ್ರಶೇಕರ, ತಹಶೀಲ್ದಾರ್ ನವೀನ ಹುಲ್ಲೂರ, ಪಪಂ ಮುಖ್ಯಾಧಿಕಾರಿ ಎಸ್.ಎಸ್. ಇಬ್ರಂಡಿ ಆಗಮಿಸಿ ಪ್ರತಿಭಟನಾಕಾರರ ಜೊತೆಗೆ ಮಾತುಕತೆಗೆ ಮುಂದಾದರು.
ಆದರೆ, ಜನರ ಗಲಾಟೆ ಹೆಚ್ಚಾದ್ದರಿಂದ ಅಧಿಕಾರಿಗಳು ಮುಖಂಡರೊಂದಿಗೆ ದೇವಾಲಯದ ಕೋಣೆ ಸೇರಿ ಸಭೆ ನಡೆಸಿದರು. ಇದರಿಂದ ರೊಚ್ಚಿಗೆದ್ದ ಜನರು ಜೈಘೋಷ ಕೂಗುತ್ತ ಸ್ಮಾರಕದ ಕಡೆ ತೆರಳಲು ಅಣಿಯಾದರು. ಪರಿಸ್ಥಿತಿ ವಿಕೋಪಕ್ಕೆ ಹೋಗುವುದನ್ನು ಅರಿತ ಶ್ರೀಗಳು ದೇವಸ್ಥಾನದಿಂದ ಹೊರ ಬಂದು ಮಾತನಾಡಿ, ಅಧಿಕಾರಿಗಳೊಂದಿಗೆ ಸಮಾಲೋಚಿಸುತ್ತಿದ್ದು, ಭಾವೋದ್ವೇಗಗೊಳ್ಳದೆ ಸ್ವಲ್ಪ ಕಾಯಿರಿ.
ಮಾತುಕತೆ ನಂತರ ಮುಂದಿನ ಹೆಜ್ಜೆ ಇಡೋಣ ಎಂದು ಜನರನ್ನು ಶಾಂತಗೊಳಿಸಿದರು. ಸಭೆಯ ನಂತರ ಜನರನ್ನುದ್ದೇಶಿಸಿ ಎಸಿ ಮಹೇಶ ಕರ್ಜಗಿ ಮಾತನಾಡಿ, ಸ್ಮಾರಕ ಉದ್ಘಾಟನೆಗೆ ಇಲಾಖೆಯಿಂದ ಯಾವುದೇ ಅನುಮತಿ ಇಲ್ಲದೆ ಮುಂದಾಗಿರುವುದು ಕಂಡುಬಂದಿದೆ.
ಈ ಕುರಿತು ಪಪಂ ಮುಖ್ಯಾಧಿಕಾರಿಗೆ ಸೂಚಿಸಲಾಗಿದೆ. ಯಾವುದೇ ಕಾರಣಕ್ಕೂ ಸ್ಮಾರಕ ಉದ್ಘಾಟನೆಗೊಳ್ಳದಂತೆ ಮುಂಬಾಲಿಗೆ ಬೀಗ ಹಾಕಿ ಬಂದೋಬಸ್ತ್ ಮಾಡಲಾಗಿದೆ. ಟಿಪ್ಪು ಉತ್ಸವ ಮಾಡಲು ಅವಕಾಶ ನೀಡಲಾಗಿದೆ. ಯಾರೂ ಕಾನೂನು ಬಾಹಿರವಾಗಿ ಮುಂದುವರಿಯ ಬಾರದು ಎಂದು ಹೇಳಿದರು. ಪರಿಸ್ಥಿತಿ ತಿಳಿಗೊಂಡಿತು. ಪ್ರತಿಭಟನಾಕಾರರು ಎಸಿಗೆ ಮನವಿ ನೀಡಿದರು.
ಪಟ್ಟಣದಲ್ಲಿ ರವಿವಾರ ಬೆಳಗಿನಿಂದಲೆ ವ್ಯಾಪಾರಸ್ಥರು ಸ್ವಯಂಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿರುವುದು ಕಂಡುಬಂತು. ಯಾವುದೇ ಅಹಿತಕರ ಘಟನೆಯಾಗದಂತೆ ಪೊಲೀಸ್ ಇಲಾಖೆ ಸೂಕ್ತ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿತ್ತು. ಡಿಎಸ್ಪಿ, 6 ಜನ ಪಿಎಸ್ಐ, 15 ಎಎಸ್ಐ, 4 ಡಿಆರ್ ತುಕಡಿ, 2 ಕೆಎಸ್ಆರ್ಪಿ, 100 ಪೊಲೀಸ್ ಸಿಬ್ಬಂದಿ ನಿಯೋಜನೆಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ
Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ
Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ