ಕೋಲು ಮುರಿಯಲಿಲ್ಲ,ಹಾವೂ ಸಾಯಲಿಲ್ಲ,ಜನಪ್ರಿಯ ಬಜೆಟ್‌ ನಿರೀಕ್ಷೆ ಸಾಕಾರ


Team Udayavani, Mar 16, 2017, 3:50 AM IST

15-ras-7.jpg

ಸಿದ್ದರಾಮಯ್ಯ ಎಲ್ಲ ವರ್ಗದವರನ್ನು ಖುಷಿಪಡಿಸುವ ಬಜೆಟ್‌ ಮಂಡಿಸಿದ್ದಾರೆ. ಕೇಂದ್ರವಾಗಲಿ, ರಾಜ್ಯವಾಗಲಿ ಜನರನ್ನು ಓಲೈಸುವ ಬಜೆಟ್‌ ಮಂಡಿಸುವುದು ಅತ್ಯಂತ ಸಹಜ. ಆದರೆ ಘೋಷಣೆಗಳಲ್ಲಿ ಎಷ್ಟು ಅನುಷ್ಠಾನವಾಗುತ್ತದೆ ಎಂಬುದೇ ಪ್ರಶ್ನೆ.

ಯಾವುದೇ ಸರಕಾರ ಚುನಾವಣೆ ಎದುರಿಗಿರುವಾಗ ಮಂಡಿಸುವ ಬಜೆಟ್‌ನಲ್ಲಿ ಜನರನ್ನು ಓಲೈಸುವ ಭರಪೂರ ಕೊಡುಗೆಗಳಿರುತ್ತವೆ ಎನ್ನುವ ಸಹಜ ವಿದ್ಯಮಾನಕ್ಕೆ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ 2017-18ನೇ ಸಾಲಿನ ರಾಜ್ಯ ಬಜೆಟ್‌ ಹೊರತಾಗಿಲ್ಲ. ಮುಂದಿನ ಚುನಾವಣೆಗೂ ಮೊದಲು ಬಜೆಟ್‌ ಮಂಡನೆಗೆ ಅವಕಾಶವಿದ್ದರೂ, ಈಗಲೇ ಚುನಾವಣೆ ಮನಸ್ಸಿನಲ್ಲಿಟ್ಟು ಜನರನ್ನು ಖುಷಿಪಡಿಸುವ ಪ್ರಯತ್ನ ಮಾಡಿದ್ದಾರೆ. ತನ್ನದು ಸಾಮಾಜಿಕ ನ್ಯಾಯ ಪರಿಕಲ್ಪನೆಯ ಬಜೆಟ್‌ ಎಂದು ಸಿಎಂ ಹೇಳಿ ಕೊಂಡಿದ್ದರೂ ಇದು ಸಂಪೂರ್ಣ ನಿಜವಲ್ಲ ಎನ್ನುವುದನ್ನು ಬಜೆಟ್‌ನ ಜನಪ್ರಿಯ ಕೊಡುಗೆಗಳೇ ಹೇಳುತ್ತಿವೆ. 

ರಾಜ್ಯ ಭೀಕರ ಬರಕ್ಕೆ ತುತ್ತಾಗಿರುವ ಹಿನ್ನೆಲೆಯಲ್ಲಿ ಬರದ ಬವಣೆಯನ್ನು ತಪ್ಪಿಸುವ ತತ್‌ಕ್ಷಣದ ಮತ್ತು ದೀರ್ಘಾವಧಿ ಯೋಜನೆಗಳಿಗೆ ಆದ್ಯತೆ ನೀಡಬಹುದು ಎನ್ನುವ ನಿರೀಕ್ಷೆಯೂ ಇತ್ತು. ಇದು ಮಾತ್ರ ಸಂಪೂರ್ಣ ಹುಸಿಯಾಗಿದೆ. ರೈತರ ಸಾಲ ಮನ್ನಾ ಮಾಡಬೇಕೆಂಬ ಬಲವಾದ ಆಗ್ರಹ ಇದ್ದರೂ ಇದನ್ನು ಈಡೇರಿಸಿಲ್ಲ. ಬದಲಾಗಿ ರೈತರಿಗೆ ಶೂನ್ಯ ಬಡ್ಡಿಯಲ್ಲಿ ಸಾಲ ನೀಡುವ ಪ್ರಸ್ತಾವವಿದೆ.  

ವಿವಾದಿತ ಎತ್ತಿನಹೊಳೆ ಯೋಜನೆಯಿಂದಾಗಿ  ಸಿಟ್ಟಿಗೆ ದ್ದಿರುವ ಕರಾವಳಿಯ ಜನರನ್ನು ಸಮಾಧಾನಿಸಲು ಪಶ್ಚಿಮ ವಾಹಿನಿ ಯೋಜನೆಯನ್ನು ಜಾರಿಗೊಳಿಸಲಿದ್ದಾರೆಂಬ ನಿರೀಕ್ಷೆ ನಿಜವಾಗಿದೆ. ಬಜೆಟ್‌ನಲ್ಲಿ ಇದಕ್ಕಾಗಿ 100 ಕೋ. ರೂ. ಅನುದಾನ ಘೋಷಿಸಲಾಗಿದೆ. ಪಶ್ಚಿಮ ವಾಹಿನಿ ಕಡಿಮೆಯೆಂದರೂ 1000 ಕೋ. ರೂ. ವೆಚ್ಚ ಬೇಡುವ ಯೋಜನೆ. ಈ ದೃಷ್ಟಿಯಲ್ಲಿ ಹೇಳುವುದಾದರೆ ಯೋಜನೆಗೆ ಒದಗಿಸಿರುವ ಅನುದಾನ ಏನೇನೂ ಸಾಲದು. ಇದೇ ರೀತಿ ವೃದ್ಧಾಪ್ಯ ಪಿಂಚಣಿ ಮೊತ್ತ ಏರಿಕೆಯೂ ಹೆಚ್ಚಿನ ಪ್ರಯೋಜನಕಾರಿಯಲ್ಲ. 

ತಮಿಳುನಾಡಿನ ಅಮ್ಮ ಕ್ಯಾಂಟೀನ್‌ ಮಾದರಿಯಲ್ಲಿ ರಾಜ್ಯದಲ್ಲೂ ಅಗ್ಗದ ದರದ ನಮ್ಮ ಕ್ಯಾಂಟೀನ್‌ ಈ ಬಜೆಟ್‌ನಲ್ಲಿ ಸಾಕಾರವಾಗಿದೆ. ಖಾಸಗಿ ಉದ್ಯಮಗಳ ಸಿ ಮತ್ತು ಡಿ ದರ್ಜೆಯ ನೌಕರಿಗಳನ್ನು ಸಂಪೂರ್ಣವಾಗಿ ಕನ್ನಡಿಗರಿಗೆ ಮೀಸಲಿಡುವುದು, ಮಲ್ಟಿಪ್ಲೆಕ್ಸ್‌ಗಳ ಟಿಕೆಟ್‌ ದರಕ್ಕೆ ಲಗಾಮು ಹಾಕುವಂತಹ ಪ್ರಸ್ತಾವಗಳು ಯುವ ಜನತೆಯನ್ನು ಆಕರ್ಷಿಸುವ ಗುರಿಯಿರಿಸಿಕೊಂಡಿವೆ. ಲ್ಯಾಪ್‌ಟಾಪ್‌, ಟ್ಯಾಬ್‌, ಆ್ಯಪ್‌ ಮತ್ತಿತರ ಕೊಡುಗೆಗಳ ಮೂಲಕ ತಾನು ಟೆಕ್‌ ಪ್ರಿಯ ಎಂದು ತೋರಿಸಲು ಪ್ರಯತ್ನಿಸಿದ್ದಾರೆ. 

ಬಹುಕಾಲದಿಂದ ಚರ್ಚೆಯಲ್ಲಿದ್ದ ಒಂದನೇ ತರಗತಿಯಿಂದಲೇ ಇಂಗ್ಲಿಷ್‌ ಕಲಿಸುವ ಪ್ರಸ್ತಾವವನ್ನು ಬಜೆಟ್‌ನಲ್ಲಿ ಘೋಷಿಸಿರುವುದು ಸ್ವಾಗತಾರ್ಹ. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಮುಖ್ಯಮಂತ್ರಿಗಳು ಹೆಚ್ಚಿನ ಒತ್ತು ನೀಡಿರುವಂತೆ ಕಾಣಿಸುತ್ತಿದೆ. ಆದರೆ ನಿರುದ್ಯೋಗ ನಿವಾರಣೆಗೆ ಕೈಗಾರಿಕೋದ್ಯಮ ಪ್ರೋತ್ಸಾಹಿಸುವಂತಹ ಪರಿಣಾಮಕಾರಿ ಕ್ರಮಗಳು ಕಾಣಿಸುತ್ತಿಲ್ಲ. ಒಟ್ಟಾರೆಯಾಗಿ ಹೇಳುವುದಾದರೆ ಕೋಲೂ ಮುರಿಯದೆ ಹಾವೂ ಸಾಯದಂತೆ ಸರ್ಕಸ್‌ ಮಾಡಿರುವ ಬಜೆಟ್‌ ಇದು. ಬಜೆಟ್‌ನಲ್ಲಿ ಘೋಷಣೆಗಳನ್ನು ಮಾಡುವುದು ಸುಲಭ. ಚುನಾವಣೆಗೆ ಇರುವುದು ಒಂದೇ ವರ್ಷ. ಇಷ್ಟು ಕಡಿಮೆ ಅವಧಿಯಲ್ಲಿ ಇವುಗಳಲ್ಲಿ ಎಷ್ಟನ್ನು ಅನುಷ್ಠಾನಕ್ಕೆ ತರಲು ಸಾಧ್ಯ ಎಂಬುದೇ ಪ್ರಶ್ನೆ. ಅದು ಅಸಾಧ್ಯವಾದಾಗ ಸರಕಾರವೇ ವಿಪಕ್ಷಗಳಿಗೆ ಚುನಾವಣಾ ಕಾಲಕ್ಕೆ ಅಸ್ತ್ರವೊಂದನ್ನು ಕೊಟ್ಟ ಹಾಗಾಗುತ್ತದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.