ಕೋಲು ಮುರಿಯಲಿಲ್ಲ,ಹಾವೂ ಸಾಯಲಿಲ್ಲ,ಜನಪ್ರಿಯ ಬಜೆಟ್‌ ನಿರೀಕ್ಷೆ ಸಾಕಾರ


Team Udayavani, Mar 16, 2017, 3:50 AM IST

15-ras-7.jpg

ಸಿದ್ದರಾಮಯ್ಯ ಎಲ್ಲ ವರ್ಗದವರನ್ನು ಖುಷಿಪಡಿಸುವ ಬಜೆಟ್‌ ಮಂಡಿಸಿದ್ದಾರೆ. ಕೇಂದ್ರವಾಗಲಿ, ರಾಜ್ಯವಾಗಲಿ ಜನರನ್ನು ಓಲೈಸುವ ಬಜೆಟ್‌ ಮಂಡಿಸುವುದು ಅತ್ಯಂತ ಸಹಜ. ಆದರೆ ಘೋಷಣೆಗಳಲ್ಲಿ ಎಷ್ಟು ಅನುಷ್ಠಾನವಾಗುತ್ತದೆ ಎಂಬುದೇ ಪ್ರಶ್ನೆ.

ಯಾವುದೇ ಸರಕಾರ ಚುನಾವಣೆ ಎದುರಿಗಿರುವಾಗ ಮಂಡಿಸುವ ಬಜೆಟ್‌ನಲ್ಲಿ ಜನರನ್ನು ಓಲೈಸುವ ಭರಪೂರ ಕೊಡುಗೆಗಳಿರುತ್ತವೆ ಎನ್ನುವ ಸಹಜ ವಿದ್ಯಮಾನಕ್ಕೆ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ 2017-18ನೇ ಸಾಲಿನ ರಾಜ್ಯ ಬಜೆಟ್‌ ಹೊರತಾಗಿಲ್ಲ. ಮುಂದಿನ ಚುನಾವಣೆಗೂ ಮೊದಲು ಬಜೆಟ್‌ ಮಂಡನೆಗೆ ಅವಕಾಶವಿದ್ದರೂ, ಈಗಲೇ ಚುನಾವಣೆ ಮನಸ್ಸಿನಲ್ಲಿಟ್ಟು ಜನರನ್ನು ಖುಷಿಪಡಿಸುವ ಪ್ರಯತ್ನ ಮಾಡಿದ್ದಾರೆ. ತನ್ನದು ಸಾಮಾಜಿಕ ನ್ಯಾಯ ಪರಿಕಲ್ಪನೆಯ ಬಜೆಟ್‌ ಎಂದು ಸಿಎಂ ಹೇಳಿ ಕೊಂಡಿದ್ದರೂ ಇದು ಸಂಪೂರ್ಣ ನಿಜವಲ್ಲ ಎನ್ನುವುದನ್ನು ಬಜೆಟ್‌ನ ಜನಪ್ರಿಯ ಕೊಡುಗೆಗಳೇ ಹೇಳುತ್ತಿವೆ. 

ರಾಜ್ಯ ಭೀಕರ ಬರಕ್ಕೆ ತುತ್ತಾಗಿರುವ ಹಿನ್ನೆಲೆಯಲ್ಲಿ ಬರದ ಬವಣೆಯನ್ನು ತಪ್ಪಿಸುವ ತತ್‌ಕ್ಷಣದ ಮತ್ತು ದೀರ್ಘಾವಧಿ ಯೋಜನೆಗಳಿಗೆ ಆದ್ಯತೆ ನೀಡಬಹುದು ಎನ್ನುವ ನಿರೀಕ್ಷೆಯೂ ಇತ್ತು. ಇದು ಮಾತ್ರ ಸಂಪೂರ್ಣ ಹುಸಿಯಾಗಿದೆ. ರೈತರ ಸಾಲ ಮನ್ನಾ ಮಾಡಬೇಕೆಂಬ ಬಲವಾದ ಆಗ್ರಹ ಇದ್ದರೂ ಇದನ್ನು ಈಡೇರಿಸಿಲ್ಲ. ಬದಲಾಗಿ ರೈತರಿಗೆ ಶೂನ್ಯ ಬಡ್ಡಿಯಲ್ಲಿ ಸಾಲ ನೀಡುವ ಪ್ರಸ್ತಾವವಿದೆ.  

ವಿವಾದಿತ ಎತ್ತಿನಹೊಳೆ ಯೋಜನೆಯಿಂದಾಗಿ  ಸಿಟ್ಟಿಗೆ ದ್ದಿರುವ ಕರಾವಳಿಯ ಜನರನ್ನು ಸಮಾಧಾನಿಸಲು ಪಶ್ಚಿಮ ವಾಹಿನಿ ಯೋಜನೆಯನ್ನು ಜಾರಿಗೊಳಿಸಲಿದ್ದಾರೆಂಬ ನಿರೀಕ್ಷೆ ನಿಜವಾಗಿದೆ. ಬಜೆಟ್‌ನಲ್ಲಿ ಇದಕ್ಕಾಗಿ 100 ಕೋ. ರೂ. ಅನುದಾನ ಘೋಷಿಸಲಾಗಿದೆ. ಪಶ್ಚಿಮ ವಾಹಿನಿ ಕಡಿಮೆಯೆಂದರೂ 1000 ಕೋ. ರೂ. ವೆಚ್ಚ ಬೇಡುವ ಯೋಜನೆ. ಈ ದೃಷ್ಟಿಯಲ್ಲಿ ಹೇಳುವುದಾದರೆ ಯೋಜನೆಗೆ ಒದಗಿಸಿರುವ ಅನುದಾನ ಏನೇನೂ ಸಾಲದು. ಇದೇ ರೀತಿ ವೃದ್ಧಾಪ್ಯ ಪಿಂಚಣಿ ಮೊತ್ತ ಏರಿಕೆಯೂ ಹೆಚ್ಚಿನ ಪ್ರಯೋಜನಕಾರಿಯಲ್ಲ. 

ತಮಿಳುನಾಡಿನ ಅಮ್ಮ ಕ್ಯಾಂಟೀನ್‌ ಮಾದರಿಯಲ್ಲಿ ರಾಜ್ಯದಲ್ಲೂ ಅಗ್ಗದ ದರದ ನಮ್ಮ ಕ್ಯಾಂಟೀನ್‌ ಈ ಬಜೆಟ್‌ನಲ್ಲಿ ಸಾಕಾರವಾಗಿದೆ. ಖಾಸಗಿ ಉದ್ಯಮಗಳ ಸಿ ಮತ್ತು ಡಿ ದರ್ಜೆಯ ನೌಕರಿಗಳನ್ನು ಸಂಪೂರ್ಣವಾಗಿ ಕನ್ನಡಿಗರಿಗೆ ಮೀಸಲಿಡುವುದು, ಮಲ್ಟಿಪ್ಲೆಕ್ಸ್‌ಗಳ ಟಿಕೆಟ್‌ ದರಕ್ಕೆ ಲಗಾಮು ಹಾಕುವಂತಹ ಪ್ರಸ್ತಾವಗಳು ಯುವ ಜನತೆಯನ್ನು ಆಕರ್ಷಿಸುವ ಗುರಿಯಿರಿಸಿಕೊಂಡಿವೆ. ಲ್ಯಾಪ್‌ಟಾಪ್‌, ಟ್ಯಾಬ್‌, ಆ್ಯಪ್‌ ಮತ್ತಿತರ ಕೊಡುಗೆಗಳ ಮೂಲಕ ತಾನು ಟೆಕ್‌ ಪ್ರಿಯ ಎಂದು ತೋರಿಸಲು ಪ್ರಯತ್ನಿಸಿದ್ದಾರೆ. 

ಬಹುಕಾಲದಿಂದ ಚರ್ಚೆಯಲ್ಲಿದ್ದ ಒಂದನೇ ತರಗತಿಯಿಂದಲೇ ಇಂಗ್ಲಿಷ್‌ ಕಲಿಸುವ ಪ್ರಸ್ತಾವವನ್ನು ಬಜೆಟ್‌ನಲ್ಲಿ ಘೋಷಿಸಿರುವುದು ಸ್ವಾಗತಾರ್ಹ. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಮುಖ್ಯಮಂತ್ರಿಗಳು ಹೆಚ್ಚಿನ ಒತ್ತು ನೀಡಿರುವಂತೆ ಕಾಣಿಸುತ್ತಿದೆ. ಆದರೆ ನಿರುದ್ಯೋಗ ನಿವಾರಣೆಗೆ ಕೈಗಾರಿಕೋದ್ಯಮ ಪ್ರೋತ್ಸಾಹಿಸುವಂತಹ ಪರಿಣಾಮಕಾರಿ ಕ್ರಮಗಳು ಕಾಣಿಸುತ್ತಿಲ್ಲ. ಒಟ್ಟಾರೆಯಾಗಿ ಹೇಳುವುದಾದರೆ ಕೋಲೂ ಮುರಿಯದೆ ಹಾವೂ ಸಾಯದಂತೆ ಸರ್ಕಸ್‌ ಮಾಡಿರುವ ಬಜೆಟ್‌ ಇದು. ಬಜೆಟ್‌ನಲ್ಲಿ ಘೋಷಣೆಗಳನ್ನು ಮಾಡುವುದು ಸುಲಭ. ಚುನಾವಣೆಗೆ ಇರುವುದು ಒಂದೇ ವರ್ಷ. ಇಷ್ಟು ಕಡಿಮೆ ಅವಧಿಯಲ್ಲಿ ಇವುಗಳಲ್ಲಿ ಎಷ್ಟನ್ನು ಅನುಷ್ಠಾನಕ್ಕೆ ತರಲು ಸಾಧ್ಯ ಎಂಬುದೇ ಪ್ರಶ್ನೆ. ಅದು ಅಸಾಧ್ಯವಾದಾಗ ಸರಕಾರವೇ ವಿಪಕ್ಷಗಳಿಗೆ ಚುನಾವಣಾ ಕಾಲಕ್ಕೆ ಅಸ್ತ್ರವೊಂದನ್ನು ಕೊಟ್ಟ ಹಾಗಾಗುತ್ತದೆ.

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

7-rbi

Editorial: ರೆಪೊ ದರದಲ್ಲಿ ಯಥಾಸ್ಥಿತಿ: ಆರ್‌ಬಿಐ ಜಾಣ್ಮೆಯ ನಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.