ಒಳ್ಳೆಯ ನಿರೀಕ್ಷೆ ಹುಟ್ಟಿಸಿದೆ ಮುಂಗಾರು, ಸುಭಿಕ್ಷೆ ಉಂಟಾಗಲಿ


Team Udayavani, May 16, 2017, 12:23 PM IST

rain.jpg

ಮುಂಗಾರು ಸರಿಯಾದ ಸಮಯಕ್ಕೆ ಅಥವಾ ತುಸು ಬೇಗನೆ ಆರಂಭವಾದರೆ ರೈತರಿಗೆ ಒಳ್ಳೆಯದು ಅನ್ನುವುದು ಮೇಲ್ನೋಟಕ್ಕೆ ಕಾಣಿಸುವ ಸತ್ಯ. ಆದರೆ, ಸರಿಯಾದ ಕಾಲದಲ್ಲಿ ಸರಿಯಾದ ಪ್ರಮಾಣದಲ್ಲಿ ಮಳೆಯಾದರೆ ಎಲ್ಲ ಕ್ಷೇತ್ರಗಳಲ್ಲೂ ಎಲ್ಲರಿಗೂ ಸುಭಿಕ್ಷೆ. ಈ ಮಳೆಗಾಲ ಅಂಥ ನಿರೀಕ್ಷೆ ಹುಟ್ಟಿಸಿದೆ. 

ಬಹಳ ವರ್ಷಗಳ ಬಳಿಕ ವರುಣ ದೇವ ದೇಶಕ್ಕೆ ಧಾರಾಳ ಕೃಪಾದೃಷ್ಟಿ ಹರಿಸುವ ನಿರೀಕ್ಷೆ ಹುಟ್ಟಿದೆ. ಮೇ ತಿಂಗಳ ಆರಂಭದಿಂದಲೇ ಸರಕಾರಿ ಮತ್ತು ಖಾಸಗಿ ಹವಾಮಾನ ವೀಕ್ಷಣಾ ಸಂಸ್ಥೆಗಳು ಶುಭ ಸುದ್ದಿಯನ್ನು ಬಿತ್ತರಿಸುತ್ತಿವೆ. ಈ ವರ್ಷ ವಾಡಿಕೆಯಂತೆ ಮಳೆಯಾಗಲಿದೆ ಹಾಗೂ ಕೆಲವು ದಿನ ಮೊದಲೇ ಮುಂಗಾರು ಆಗಮನವಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಸಂಸ್ಥೆಗಳು ಭವಿಷ್ಯ ನುಡಿದಿದ್ದವು. ಅದು ನಿಜವಾಗುವ ಲಕ್ಷಣ ಗೋಚರಿಸಿದೆ. ಹವಾಮಾನ ತಜ್ಞರು ನಿರೀಕ್ಷಿಸಿದಂತೆ ಮೇ 15ಕ್ಕೂ ಮೊದಲೇ ಅಂಡಮಾನ್‌-ನಿಕೋಬಾರ್‌ಗೆ ನೈಋತ್ಯ ಮುಂಗಾರು ತಲುಪಿದೆ. ಅಂದರೆ ನಾಲ್ಕು ದಿನಗಳ ಮೊದಲೇ ಮುಂಗಾರು ಬಂದಂತಾಗಿದೆ. ಸಾಮಾನ್ಯವಾಗಿ ಅಂಡಮಾನ್‌ಗೆ ಬಂದ ಮುಂಗಾರು 12 ದಿನಗಳಲ್ಲಿ ಶ್ರೀಲಂಕಾ ಹಾದು ಕೇರಳ ಪ್ರವೇಶಿಸಬೇಕು. ಈ ಲೆಕ್ಕಾಚಾರದ ಪ್ರಕಾರ ಹೇಳುವುದಾದರೆ ಮೇ 14ರಂದು ಅಂಡಮಾನ್‌ಗೆ ಬಂದಿರುವ ಮುಂಗಾರು ಮೇ 26 ಅಥವಾ 27ಕ್ಕೆ ಕೇರಳ ಪ್ರವೇಶಿಸಬೇಕು. ಇದಾದ ಎರಡು ದಿನಗಳಲ್ಲಿ ಕರ್ನಾಟಕದ ಕರಾವಳಿಯಲ್ಲಿ ಮಳೆಯಾಗಬೇಕು.ಅಂದರೆ ಮೇ 29 ಅಥವಾ 30ರೊಳಗೆ ಕರ್ನಾಟಕಕ್ಕೆ ಅಧಿಕೃತವಾಗಿ ಮಳೆಗಾಲ ಪದಾರ್ಪಣೆ ಮಾಡಬೇಕು. ಹೀಗಾದರೆ ವಾಡಿಕೆಗಿಂತ ನಾಲ್ಕೈದು ದಿನ ಮೊದಲೇ ಮಳೆಗಾಲ ಶುರುವಾಗಲಿದೆ ಎಂಬ ಹವಾಮಾನ ವರದಿ ನಿಜವಾಗಲಿದೆ. 

ಹಾಗೆಂದು ಹವಾಮಾನ ಸಂಸ್ಥೆಗಳ ವರದಿಗಳು ಶತ ಪ್ರತಿಶತ ನಿಜವಾಗುತ್ತವೆ ಎನ್ನುವಂತಿಲ್ಲ. ಕಳೆದ ವರ್ಷ ಹೆಚ್ಚಿನೆಲ್ಲ ಸಂಸ್ಥೆಗಳು ವಾಡಿಕೆಗಿಂತ ಹೆಚ್ಚು ಮಳೆ ಸುರಿಯುವ ಭವಿಷ್ಯ ನುಡಿದಿದ್ದವು. ಆದರೆ ಕೊನೆಗೆ ನೋಡಿದಾಗ ಬಹಳ ಕಡಿಮೆ ಮಳೆಯಾಗಿತ್ತು. ಅದರಲ್ಲೂ ದಕ್ಷಿಣ ಭಾರತದಲ್ಲಿ ದಶಕದಲ್ಲೇ ಗರಿಷ್ಠ ಮಳೆ ಕೊರತೆಯಾಗಿತ್ತು. ಇದರ ಪರಿಣಾಮವನ್ನು ಈ ಬೇಸಿಗೆಯಲ್ಲಿ ಜನರು ಅನುಭವಿಸಿದ್ದಾರೆ.  ಕರ್ನಾಟಕ, ಕೇರಳ ಸೇರಿದಂತೆ ದಕ್ಷಿಣದ ಬಹುತೇಕ ರಾಜ್ಯಗಳು ಸತತವಾಗಿ ಬರದಿಂದ ಕಂಗಾಲಾಗಿವೆ. ಉತ್ತರದಲ್ಲಿ ಕಳೆದ ಮಳೆಗಾಲದಲ್ಲಿ ಉತ್ತಮ ಮಳೆಯಾಗಿದ್ದರೂ ಈ ಸಲ ಬಿಸಿಲಿನ ಬೇಗೆ ತೀವ್ರವಾಗಿತ್ತು. ಮಳೆಯನ್ನೇ ಅವಲಂಬಿಸಿರುವ ರೈತಾಪಿ ವರ್ಗಕ್ಕೆ ಮಳೆ ಬೇಗ ಬಂದಷ್ಟು ಒಳ್ಳೆಯದು.

ಬಿತ್ತನೆ ಮತ್ತಿತರ ಕೃಷಿ ಕಾರ್ಯಗಳು ಸಮಯಕ್ಕೆ ಸರಿಯಾಗಿ ಶುರುವಾದರೆ, ಸಕಾಲಕ್ಕೆ ಕೊಯ್ಲು ಆಗಿ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಸಿಗುತ್ತದೆ. ಶೈಕ್ಷಣಿಕ ವರ್ಷ ಪ್ರಾರಂಭವಾಗಲು ಕೂಡ ಮಳೆ ಸಕಾಲಕ್ಕೆ ಪ್ರಾರಂಭವಾಗುವುದು ಅಗತ್ಯ. ಬೇಸಿಗೆ ಮುಂದುವರಿದರೆ ತೀವ್ರ ಸೆಖೆ ಮತ್ತು ಕುಡಿಯುವ ನೀರಿನ ಕೊರತೆಯಿಂದಾಗಿ ಜೂನ್‌ ಮೊದಲ ವಾರದಲ್ಲಿ ಶಾಲೆಗಳನ್ನು ಪ್ರಾರಂಭಿಸಲು ಕಷ್ಟವಾಗುತ್ತದೆ. ಹೀಗಾಗಿ ಹವಾಮಾನ ಇಲಾಖೆಯ ವರದಿಗಳು ಮಳೆಗಾಲಕ್ಕೂ ಮೊದಲೇ ಎಲ್ಲ ವರ್ಗಕ್ಕೂ ತಂಪೆರೆದಿವೆ.  ಎಲ್‌ ನಿನೊ ಪ್ರಭಾವದಿಂದಾಗಿ ಕಳೆದ ವರ್ಷ ಮಳೆ ಕಡಿಮೆಯಾದ ಪರಿಣಾಮವಾಗಿ ಕರ್ನಾಟಕ, ಕೇರಳ, ಮತ್ತು ತಮಿಳುನಾಡು ತೀವ್ರವಾಗಿ ತತ್ತರಿಸಿವೆ. ಕುಡಿಯುವ ನೀರಿಗೂ ತತ್ವಾರವಾಗಿದೆ. ಆದರೆ ಈ ನಡುವೆ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಬೇಸಿಗೆ ಮಳೆಯಾಗಿ ಪರಿಸ್ಥಿತಿ ತುಸು ಸುಧಾರಿಸಿದೆ. ಕೇರಳದ ಕೆಲವು ಜಿಲ್ಲೆಗಳಲ್ಲೂ ಬೇಸಿಗೆ ಮಳೆಯಾಗಿದ್ದರೂ ನೀರಿನ ಕೊರತೆ ಮಾತ್ರ ನೀಗಿಲ್ಲ. ಮುಂಗಾರನ್ನು ಸ್ವಾಗತಿಸುವ ರಾಜ್ಯವೆಂಬ ಹಿರಿಮೆ ಹೊಂದಿರುವ ಕೇರಳದ ಈ ವರ್ಷದ ಬರ ಪರಿಸ್ಥಿತಿ ಆತಂಕವುಂಟು ಮಾಡಿದೆ. 

ಈ ಹಿನ್ನೆಲೆಯಲ್ಲಿ ಈ ಸಲ ವಾಡಿಕೆಯಂತೆ ಮಳೆಯಾಗಲಿದೆ ಎಂಬ ಭವಿಷ್ಯವಾಣಿ ರೈತರೂ ಸೇರಿದಂತೆ ಎಲ್ಲರ ಮುಖದಲ್ಲಿ ಮಂದಹಾಸ ಮೂಡಿಸಿದೆ. ಜೂನ್‌ ಮತ್ತು ಜುಲೈ ತಿಂಗಳಲ್ಲಿ ಎಂದಿನಂತೆ ಮಳೆಯ ಅಬ್ಬರ ಜೋರಾಗಿರಬಹುದು. ಆಗಸ್ಟ್‌, ಸೆಪ್ಟೆಂಬರ್‌ನಲ್ಲಿ ಮಳೆ ಪ್ರಮಾಣ ತುಸು ಕಡಿಮೆಯಾಗುವ ಸಾಧ್ಯತೆಯಿದೆ.

ಒಟ್ಟಾರೆಯಾಗಿ ಶೇ. 96ರಿಂದ ಶೇ. 97ರಷ್ಟು ಮಳೆಯಾಗಬಹುದು ಎಂದು ತಜ್ಞರು ಅಂದಾಜು ಮಾಡಿದ್ದಾರೆ. ಹೀಗಾದರೆ ಬಹಳ ವರ್ಷಗಳ ಅನಂತರ ಸಾಮಾನ್ಯವಾದ ಮಳೆಗಾಲವನ್ನು ನೋಡುವ ಭಾಗ್ಯ ಜನರಿಗಿದೆ ಎಂದಾಯಿತು. 
ಅನೇಕ ವರ್ಷಗಳ ಬಳಿಕ ಉತ್ತಮ ಮಳೆಯಾಗುವ ಲಕ್ಷಣವೊಂದು ಕಾಣಿಸಿದೆ. ಸುರಿದ ಪ್ರತಿಯೊಂದು ಹನಿಯನ್ನೂ ರಕ್ಷಿಸಿ ಭವಿಷ್ಯಕ್ಕೆ ಕಾಪಿಡುವ ಕೆಲಸವನ್ನು ಮಾಡಲು ಇದು ಸಕಾಲ. ಅಂತರ್ಜಲ ಮಟ್ಟ ತೀವ್ರವಾಗಿ ಕುಸಿಯುತ್ತಿದ್ದು, ಇದರಿಂದಾಗಿ ಕೃಷಿಯ ಮೇಲೆ ಮಾತ್ರವಲ್ಲದೆ ಒಟ್ಟಾರೆ ಪರಿಸರದ ಮೇಲೆ ಪ್ರತಿಕೂಲ ಪರಿಣಾಮವಾಗುತ್ತಿದೆ. ಮಳೆಯ ನೀರನ್ನು ಇಂಗಿಸಿ ಅಂತರ್ಜಲ ಮಟ್ಟವನ್ನು ಹೆಚ್ಚಿಸುವ ಕೆಲಸವನ್ನು ಸಮರೋಪಾದಿಯಲ್ಲಿ ಮಾಡುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಸರಕಾರ ಮಾತ್ರವಲ್ಲ ಜನರು ಕೂಡ ಕಾರ್ಯಪ್ರವೃತ್ತರಾಗಬೇಕು.

ಟಾಪ್ ನ್ಯೂಸ್

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

7-rbi

Editorial: ರೆಪೊ ದರದಲ್ಲಿ ಯಥಾಸ್ಥಿತಿ: ಆರ್‌ಬಿಐ ಜಾಣ್ಮೆಯ ನಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.