ಅನುಷ್ಠಾನಕ್ಕೆ ಬೇಕು ಬದ್ಧತೆ ಕನ್ನಡ ಉಳಿಸಲು ಇನ್ನೊಂದು ನಿರ್ಧಾರ


Team Udayavani, Jul 15, 2017, 7:46 AM IST

15-ANKANA-3.jpg

ಈ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವ ಬದ್ಧತೆಯನ್ನೂ ತೋರಿಸಬೇಕು. ಇಲ್ಲದಿದ್ದರೆ ಕೆಲವು ಶಾಲೆಗಳು ನೆಪ ಮಾತ್ರಕ್ಕೆ ಕನ್ನಡ ಕಲಿಸುವ ನಾಟಕವಾಡುವ ಸಾಧ್ಯತೆಯಿದೆ.

ಕೆಲ ದಿನಗಳ ಹಿಂದೆಯಷ್ಟೇ ಕನಿಷ್ಠ 10ನೇ ತರಗತಿ ತನಕ ಕನ್ನಡ ಮಾಧ್ಯಮದಲ್ಲಿ ಕಲಿತವರಿಗೆ ಸರಕಾರಿ ನೌಕರಿಗಳಲ್ಲಿ ಶೇ.5 ಮೀಸಲಾತಿ ಪ್ರಕಟಿಸಿದ್ದ ಸರಕಾರ ಇದೀಗ ರಾಜ್ಯದ ಎಲ್ಲ ಶಾಲೆಗಳಲ್ಲಿ ಕನ್ನಡವನ್ನು ಒಂದು ಪಠ್ಯ ವಿಷಯವಾಗಿ ಬೋಧಿಸುವುದನ್ನು ಕಡ್ಡಾಯ ಮಾಡಿರುವುದು ಅತ್ಯಂತ ಸಮುಚಿತವಾದ ನಿರ್ಧಾರವಾಗಿದೆ. ಎರಡೂ ನಿರ್ಧಾರಗಳ ಹಿಂದಿನ ಕಾಳಜಿ ನಾಡಿನ ಭಾಷೆಯನ್ನು ಮತ್ತು ಆ ಮೂಲಕ ಸಂಸ್ಕೃತಿಯನ್ನು ಉಳಿಸುವುದಾಗಿದೆ. ಈ ಆದೇಶ ಕೇಂದ್ರೀಯ ಪಠ್ಯಕ್ರಮ ಅಳವಡಿಸಿಕೊಂಡಿರುವ ಎಲ್ಲ ಖಾಸಗಿ ಸಿಬಿಎಸ್‌ಇ, ಐಸಿಎಸ್‌ಇ, ಆಂಗ್ಲಮಾಧ್ಯಮ ಶಾಲೆಗಳು ಮಾತ್ರವಲ್ಲದೆ ತಮಿಳು, ಉರ್ದು ಸೇರಿದಂತೆ ವಿವಿಧ ಅಲ್ಪಸಂಖ್ಯಾಕ ಶಾಲೆಗಳಿಗೂ ಅನ್ವಯಿಸಲಿದೆ. ಮಕ್ಕಳು ಯಾವ ಮಾಧ್ಯಮದಲ್ಲೇ ಕಲಿತರೂ ಕನಿಷ್ಠ ಕನ್ನಡ ಓದಿ ಬರೆಯಲು ಸಾಧ್ಯವಾಗುವಂತೆ ಮಾಡುವ ನಿರ್ಧಾರವಿದು. ಒಂದು ವೇಳೆ ಶಾಲೆಗಳು ಈ ಆದೇಶವನ್ನು ಪಾಲಿಸದಿದ್ದರೆ ಮಾನ್ಯತೆ ಕಳೆದುಕೊಳ್ಳಬೇಕಾಗುತ್ತದೆ ಎಂದು ಶಿಕ್ಷಣ ಸಚಿವ ತನ್ವೀರ್‌ ಸೇs… ಎಚ್ಚರಿಸಿದ್ದಾರೆ. 

ಸಿಬಿಎಸ್‌ಇ ಪಠ್ಯಕ್ರಮ ಅನುಸರಿಸುವ ಶಾಲೆಗಳಲ್ಲಿ ತೃತೀಯ ಭಾಷೆಯಾಗಿ ಕನ್ನಡ ಕಲಿಸುವ ವ್ಯವಸ್ಥೆ ಈಗಾಗಲೇ ಇದೆ. ಎಂಟನೇ ತರಗತಿ ತನಕ ಮಕ್ಕಳಿಗೆ ಕನ್ನಡ ಕಲಿಸಲಾಗುತ್ತಿದೆ. ಆದರೆ ಐಸಿಎಸ್‌ಇ ಮತ್ತು ಭಾಷಾ ಅಲ್ಪಸಂಖ್ಯಾಕ ಶಾಲೆಗಳಲ್ಲಿ ಮಾತ್ರ ಕನ್ನಡವನ್ನು ಕಡ್ಡಾಯವಾಗಿ ಕಲಿಸಲಾಗುತ್ತಿಲ್ಲ. ಇದರಿಂದಾಗಿ ಕರ್ನಾಟಕದಲ್ಲೇ ಕಲಿತರೂ ಅನೇಕ ಮಕ್ಕಳಿಗೆ ಕನ್ನಡದ ಗಂಧಗಾಳಿ ಇರುವುದಿಲ್ಲ. ಸಚಿವರು ಹೇಳಿರುವ ಪ್ರಕಾರ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಕನ್ನಡ ಬೋಧನೆ ಮಾಡಬೇಕು. ಆದರೆ ಈಗಾಗಲೇ ಶಾಲೆಗಳು ಶುರುವಾಗಿ ಒಂದೂವರೆ ತಿಂಗಳಾಗುತ್ತಾ ಬಂದಿದೆ. ಸಿಬಿಎಸ್‌, ಐಸಿಎಸ್‌ಇಯಂತಹ ಕೇಂದ್ರೀಯ ಪಠ್ಯ ಕ್ರಮ ಅನುಸರಿಸುವ ಶಾಲೆಗಳು ಪ್ರತಿವರ್ಷ ಜೂನ್‌ ಒಂದರಂದೇ ಕರಾರುವಾಕ್ಕಾಗಿ ಶುರುವಾಗುತ್ತವೆ. ಎಲ್ಲ ಶಾಲೆಗಳಲ್ಲಿ ಈ ವರ್ಷ ಶೈಕ್ಷಣಿಕ ಚಟುವಟಿಕೆಗಳ ವೇಳಾಪಟ್ಟಿಯೂ ತಯಾರಾಗಿದೆ. ಶಾಲೆಗಳು ಪ್ರಾರಂಭವಾಗಿ ಒಂದೂವರೆ ತಿಂಗಳು ಕಳೆದ ಬಳಿಕ ಈ ಆದೇಶ ಹೊರಡಿಸಿರುವುದರಿಂದ ಕೆಲವು ಶಾಲೆಗಳಿಗೆ ಅದನ್ನು ಪಾಲಿಸುವುದು ಕಷ್ಟವಾಗಬಹುದು.  ಹಿಂದೆ ಕನ್ನಡ ಮಾಧ್ಯದಲ್ಲೇ ಪ್ರಾಥಮಿಕ ವಿದ್ಯಾಭ್ಯಾಸ ಕಡ್ಡಾಯಗೊಳಿಸಲು ಸರಕಾರ ಮುಂದಾಗಿತ್ತು. ಆದರೆ ಸುಪ್ರೀಂ ಕೋರ್ಟ್‌ ಕಲಿಕಾ ಮಾಧ್ಯಮ ಹೆತ್ತವರ ಆಯ್ಕೆಗೆ ಬಿಟ್ಟದ್ದು ಎಂದು ತೀರ್ಪು ನೀಡಿದ ಬಳಿಕ ಈ ಪ್ರಸ್ತಾವವನ್ನು ಹಿಂದೆಗೆದುಕೊಳ್ಳಲಾಗಿದೆ. ಕಲಿಕಾ ಮಾಧ್ಯಮ  ವಿಚಾರದಲ್ಲಿ ಸರಕಾರ ಯಾವುದೇ ಆದೇಶ ಹೊರಡಿಸಿದರೂ ಅದು ಒಂದಲ್ಲ ಒಂದು ವಿವಾದವನ್ನು ಸೃಷ್ಟಿಸುತ್ತದೆ. ಇಂಗ್ಲಿಷ್‌ ಅನ್ನ ಕೊಡುವ ಭಾಷೆ ಎಂಬ ಭಾವನೆ ದಟ್ಟವಾಗಿರುವ ಕಾರಣ ಪೋಷಕರೆಲ್ಲ ಎಷ್ಟೇ ಕಷ್ಟವಾದರೂ ತಮ್ಮ ಮಕ್ಕಳನ್ನು ಆಂಗ್ಲ ಮಾಧ್ಯಮ ಶಾಲೆಗಳಿಗೆ ಸೇರಿಸುತ್ತಾರೆ. ಜನರ ಈ ಭಾವನೆಯೇ ಶಿಕ್ಷಣ ಎನ್ನುವುದು ಈಗ ವ್ಯಾಪಾರವಾಗಲು ಮೂಲಕಾರಣ. ಪ್ರತಿ ವರ್ಷ ಆಂಗ್ಲ ಮಾಧ್ಯಮ ಶಾಲೆಗಳ ಸಂಖ್ಯೆ ಹೆಚ್ಚುತ್ತಿದೆ. ಇದೇ ವೇಳೆ ಕನ್ನಡ ಮಾಧ್ಯಮ ಶಾಲೆಗಳು ಮುಚ್ಚುತ್ತಿವೆ. ಈ ಹಿನ್ನೆಲೆಯಲ್ಲಿ ಹೇಳುವುದಾದರೆ ಎಲ್ಲ ಶಾಲೆಗಳಲ್ಲಿ ಕನ್ನಡವನ್ನು ಒಂದು ಭಾಷಾ ವಿಷಯವಾಗಿ ಕಲಿಸುವುದು ಅತ್ಯಂತ ಅಗತ್ಯ. ಈ ನಿರ್ಧಾರವನ್ನು ಬಹಳ ಹಿಂದೆಯೇ ಕೈಗೊಳ್ಳಬೇಕಿತ್ತು.  ಇದೀಗ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವ ಬದ್ಧತೆಯನ್ನೂ ತೋರಿಸಬೇಕು. ಇಲ್ಲದಿದ್ದರೆ ಕೆಲವು ಶಾಲೆಗಳು ನೆಪ ಮಾತ್ರಕ್ಕೆ ಕನ್ನಡ ಕಲಿಸುವ ನಾಟಕವಾಡಿ ಕಣ್ಣಿಗೆ ಮಣ್ಣೆರಚುವ ಸಾಧ್ಯತೆಯಿದೆ. ಹಾಗೆಂದು ಈ ರೀತಿಯ ಆದೇಶ ಹೊರಡಿಸಿದ ಮೊದಲ ರಾಜ್ಯ ಕರ್ನಾಟಕವಲ್ಲ. ಪಕ್ಕದ ಕೇರಳದಲ್ಲಿ ಈ ಶೈಕ್ಷಣಿಕ ವರ್ಷದಿಂದಲೇ ಮಲಯಾಳಂ ಕಡ್ಡಾಯಗೊಳಿಸಲಾಗಿದೆ ಹಾಗೂ ಇದನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸಮರೋಪಾದಿಯಲ್ಲಿ ವ್ಯವಸ್ಥೆಗಳನ್ನು ಮಾಡ ಲಾಗಿದೆ. ಅಚ್ಚ ಕನ್ನಡದ ಕಾಸರಗೋಡಿನಲ್ಲಿ ಕನ್ನಡಿಗರ ಪ್ರಬಲ ಪ್ರತಿಭಟನೆಯ ನಡುವೆಯೂ ಅಲ್ಲಿನ ಸರಕಾರ ಮಲಯಾಳಂ ಬೋಧಿಸಲು ವ್ಯವಸ್ಥೆಗಳನ್ನು ಮಾಡಿದೆ. ಕನ್ನಡಿಗರ ಹಿತದೃಷ್ಟಿಯಿಂದ ಇದು ಉತ್ತಮ ಬೆಳವಣಿಗೆ ಅಲ್ಲದಿದ್ದರೂ ಅಲ್ಲಿನ ಸರಕಾರ ತನ್ನ ಆದೇಶವನ್ನು ಕಾರ್ಯಗತಗೊಳಿಸಲು ತೋರಿಸಿರುವ ಬದ್ಧತೆ ಮಾತ್ರ ಅನುಕರಣೀಯ.

ಟಾಪ್ ನ್ಯೂಸ್

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಶ್ವ ದಿಗ್ಗಜ ರಾಷ್ಟ್ರಗಳ ಅಪ್ರಬುದ್ಧ ರಾಜತಾಂತ್ರಿಕತೆ

ವಿಶ್ವ ದಿಗ್ಗಜ ರಾಷ್ಟ್ರಗಳ ಅಪ್ರಬುದ್ಧ ರಾಜತಾಂತ್ರಿಕತೆ

Wild Elephant ದಾಳಿ ಸಮಸ್ಯೆ: ವೈಜ್ಞಾನಿಕ ಪರಿಹಾರ ಅಗತ್ಯ

Wild Elephant ದಾಳಿ ಸಮಸ್ಯೆ: ವೈಜ್ಞಾನಿಕ ಪರಿಹಾರ ಅಗತ್ಯ

Terror 2

Terrorism ನಿಗ್ರಹ ಎಲ್ಲ ದೇಶಗಳ ಧ್ಯೇಯವಾಗಲಿ

1-aww

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಸರಕಾರ ತುರ್ತು ಗಮನ ನೀಡಲಿ

14-editorial

Campaigns: ಪ್ರಚಾರದಲ್ಲಿ ದ್ವೇಷ ಭಾಷಣ: ಸ್ವಯಂ ನಿಯಂತ್ರಣ ಅಗತ್ಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.