ಆರೋಗ್ಯಕರ ರೀತಿಯಲ್ಲಿ ನಡೆಸಿ ಇಂದಿರಾ ಕ್ಯಾಂಟೀನ್‌


Team Udayavani, Aug 17, 2017, 8:32 AM IST

17-ST-4.jpg

ಬರಗಾಲದಂಥ ಪರಿಸ್ಥಿತಿಯಲ್ಲಿ ಜನರಿಗೆ ಧಾನ್ಯ ಕಾಳುಕಡ್ಡಿಗಳನ್ನು ಕೊಡುವ ಬದಲು ಆ ಪ್ರದೇಶಗಳಲ್ಲಿ ಸಬ್ಸಿಡಿ ಕ್ಯಾಂಟೀನ್‌ಗಳನ್ನು ಪ್ರಾರಂಭಿಸಿ ತಯಾರಾದ ಆಹಾರವನ್ನೇ ಕೊಡುವುದು ಉತ್ತಮ.

ಕರ್ನಾಟಕ ಸರಕಾರದ ಮಹತ್ವಾಕಾಂಕ್ಷೆಯ ಇಂದಿರಾ ಕ್ಯಾಂಟೀನ್‌ ಬೆಂಗಳೂರಿನಲ್ಲಿ ಉದ್ಘಾಟನೆಯಾಗಿದೆ. ತಮಿಳುನಾಡಿನಲ್ಲಿ ದಿ| ಜಯಲಲಿತಾ 2013ರಲ್ಲಿ ಪ್ರಾರಂಭಿಸಿದ ಅಮ್ಮ ಕ್ಯಾಂಟೀನ್‌ನ ತದ್ರೂಪಿ ಇದು. ಭಾರೀ ರಿಯಾಯಿತಿ ಬೆಲೆಯಲ್ಲಿ ಬೆಳಗ್ಗಿನ ಉಪಾಹಾರ, ಮಧ್ಯಾಹ್ನ ಮತ್ತು ರಾತ್ರಿಯ ಊಟವನ್ನು ನೀಡುವ ಅಮ್ಮ ಕ್ಯಾಂಟೀನ್‌ ತಮಿಳುನಾಡಿನಲ್ಲಿ ದಿಢೀರ್‌ ಜನಪ್ರಿಯವಾದದ್ದಲ್ಲದೆ ಇತರ ಹಲವು ರಾಜ್ಯಗಳಿಗೆ ಈ ಮಾದರಿಯ ಕ್ಯಾಂಟೀನ್‌ ಪ್ರಾರಂಭಿಸಲು ಪ್ರೇರಣೆಯನ್ನೂ ನೀಡಿತು. ರಾಜಸ್ಥಾನದಲ್ಲಿ ಅನ್ನಪೂರ್ಣ ರಸೋಯಿ ಯೋಜನೆ, ಮಧ್ಯಪ್ರದೇಶದಲ್ಲಿ ದೀನ್‌ ದಯಾಳ್‌ ಕ್ಯಾಂಟೀನ್‌, ಆಂಧ್ರ ಪ್ರದೇಶದಲ್ಲಿ ಎನ್‌ಟಿಆರ್‌ ಅನ್ನ ಕ್ಯಾಂಟೀನ್‌, ದಿಲ್ಲಿಯಲ್ಲಿ ಆಮ್‌ ಆದ್ಮಿ ಕ್ಯಾಂಟೀನ್‌ ಎಂಬ ಹೆಸರಿನಲ್ಲಿ ಯೋಜನೆ ಜಾರಿಗೊಂಡಿದೆ. ಕಡಿಮೆ ಬೆಲೆಗೆ ಉಪಾಹಾರ ಮತ್ತು ಭೋಜನವನ್ನು ನೀಡಿ ಜನರನ್ನು ಖುಷಿಪಡಿಸುವ ಮೂಲಕ ಮತಬ್ಯಾಂಕ್‌ ಗಟ್ಟಿಗೊಳಿಸಿಕೊಳ್ಳುವುದು ಇಂತಹ ಕ್ಯಾಂಟೀನ್‌ ಪ್ರಾರಂಭಿಸುವ ನಿಜವಾದ ಉದ್ದೇಶ ಎಂಬ ಆರೋಪವನ್ನು ಅಲ್ಲಗಳೆಯುವಂತಿಲ್ಲವಾದರೂ ಇದೇ ವೇಳೆ ರಾಜಕೀಯದ ಹೊರತಾಗಿಯೂ ಈ ಕ್ಯಾಂಟೀನ್‌ಗಳಿಂದ ಜನರಿಗೆ ಹಲವು ರೀತಿಯ ಪ್ರಯೋಜನಗಳಿವೆ ಎನ್ನುವುದನ್ನು ಒಪ್ಪಿಕೊಳ್ಳಬೇಕು. ತಮಿಳುನಾಡಿನಲ್ಲಿ 2016ರಲ್ಲಿ ಜಯಲಲಿತಾ ಪಕ್ಷ ನಿಚ್ಚಳ ಬಹುಮತ ಸಾಧಿಸುವಲ್ಲಿ ಅಮ್ಮ ಕ್ಯಾಂಟೀನ್‌ ಪಾಲು ದೊಡ್ಡದಿತ್ತು. 

ಈ ಮಾದರಿಯ ಕ್ಯಾಂಟೀನ್‌ಗೆ ಬಡವರು ಮಾತ್ರ ಹೋಗಬಹುದು ಎಂದು ಆರಂಭದಲ್ಲಿ ಭಾವಿಸಲಾಗಿತ್ತು. ಆದರೆ ತಮಿಳುನಾಡಿನಲ್ಲಿ ಬಡವರಿಂದ ಹಿಡಿದು ಸರಕಾರಿ ಮತ್ತು ಕಾರ್ಪೋರೇಟ್‌ ಕಚೇರಿಗಳಲ್ಲಿ ಐದಂಕಿ, ಆರಂಕಿ ಸಂಬಳ ಎಣಿಸುವವರು ಕೂಡ ಅಮ್ಮ ಕ್ಯಾಂಟೀನ್‌ ಎದುರು ಕ್ಯೂ ನಿಲ್ಲುವುದನ್ನು ಕಂಡ ಬಳಿಕ ಈ ಭಾವನೆ ಹುಸಿಯಾಗಿದೆ. ಬೆಂಗಳೂರಿನಂತಹ ಮಹಾನಗರದಲ್ಲಿ ಐದು ರೂಪಾಯಿಗೆ ಉಪಾಹಾರ, 10 ರೂಪಾಯಿಗೆ ಶುಚಿರುಚಿಯಾದ ಊಟ ಸಿಗುವುದೆಂದರೆ ಅದರಿಂದಾಗುವ ಪ್ರಯೋಜನಗಳು ಒಂದೆರಡಲ್ಲ. ನಾನಾ ಕೆಲಸಗಳಿಗಾಗಿ ದೂರದೂರುಗಳಿಂದ ಬೆಂಗಳೂರಿಗೆ ಬರುವವರಿಗೆ, ಪ್ರವಾಸಿಗರಿಗೆ, ವಿದ್ಯಾರ್ಥಿಗಳಿಗೂ ಕ್ಯಾಂಟೀನ್‌ನಿಂದ ಪ್ರಯೋಜನವಿದೆ. ದುಡಿಯಲು ಹೋಗುವ ಮಹಿಳೆಯರಿಗೆ ಒಂದು ದಿನ ಅಡುಗೆ ಮಾಡುವುದನ್ನು ತಪ್ಪಿಸಿಕೊಂಡರೂ ಚಿಂತೆಯಿಲ್ಲ, ಇಂದಿರಾ ಕ್ಯಾಂಟೀನ್‌ನಲ್ಲೇ ತಿಂಡಿ ಊಟ ಮಾಡಬಹುದು ಎಂಬ ಖಾತರಿಯಿರುತ್ತದೆ. ಅಂತೆಯೇ ಶಾಲೆ ಕಾಲೇಜಿಗೆ ಹೋಗುವ ಮಕ್ಕಳಿರುವ ಗೃಹಿಣಿಯರಿಗೂ ಬೆಳ್ಳಂಬೆಳಗ್ಗೆ ಎದ್ದು ಅವಸರದಿಂದ ಅಡುಗೆ ಮಾಡುವ ಕಷ್ಟವೂ ತಪ್ಪಲಿದೆ. 

ಒಂದು ಸಮೀಕ್ಷೆ ಪ್ರಕಾರ ಭಾರತದಲ್ಲಿ 20 ಕೋಟಿ ಜನರು ಪೌಷ್ಟಿಕ ಆಹಾರದ ಕೊರತೆಯಿಂದ ಬಳಲುತ್ತಿದ್ದಾರೆ. ಇದರಲ್ಲಿ ಮಕ್ಕಳ ಸಂಖ್ಯೆಯೇ ಹೆಚ್ಚು. ಇಂತಹ ಪ್ರದೇಶಗಳಲ್ಲಿ ಸಬ್ಸಿಡಿ ಕ್ಯಾಂಟೀನ್‌ಗಳನ್ನು ಪ್ರಾರಂಭಿಸಿ ಸಮಸ್ಯೆ  ನಿವಾರಿಸುವ ಪ್ರಯತ್ನ ಮಾಡಬಹುದು. ಬಡವರಿಗೆ ನೇರವಾಗಿ ಸಿದ್ಧಪಡಿಸಿದ ಆಹಾರವನ್ನೇ ನೀಡುವುದರಿಂದಲೂ ಪ್ರಯೋಜನಗಳಿವೆ. ಇದರಿಂದ ಪತಿ- ಪತ್ನಿ ಇಬ್ಬರೂ ದುಡಿಯಲು ಹೋಗಿ  ಕೌಟುಂಬಿಕ ಆದಾಯ ಹೆಚ್ಚಿಸಿಕೊಳ್ಳಬಹುದು. ಅಲ್ಲದೆ ಸಬ್ಸಿಡಿ ಬೆಲೆಯಲ್ಲಿ/ ಉಚಿತವಾಗಿ ಸಿಕ್ಕಿದ ಆಹಾರ ಧಾನ್ಯಗಳನ್ನು ಮಾರಾಟ ಮಾಡುವುದಕ್ಕೆ ಕಡಿವಾಣ ಹಾಕಬಹುದು. ಬರಗಾಲದಂಥ ಪರಿಸ್ಥಿತಿ ಯಲ್ಲಿ ಜನರಿಗೆ ಧಾನ್ಯ ಕಾಳುಕಡ್ಡಿಗಳನ್ನು ಕೊಡುವ ಬದಲು ಆ ಪ್ರದೇಶಗಳಲ್ಲಿ ಸಬ್ಸಿಡಿ ಕ್ಯಾಂಟೀನ್‌ಗಳನ್ನು ಪ್ರಾರಂಭಿಸಿ ತಯಾರಾದ ಆಹಾರವನ್ನೇ ಕೊಡುವುದು ಉತ್ತಮ. ಅಂತೆಯೇ ಎಲ್ಲ ದೊಡ್ಡ ಸರಕಾರಿ ಕಚೇರಿಗಳು, ಆಸ್ಪತ್ರೆಗಳಲ್ಲೂ ಇಂದಿರಾ ಕ್ಯಾಂಟೀನ್‌ ಪ್ರಾರಂಭಿಸಿದರೆ ಜನರಿಗೆ ಅನುಕೂಲವಾದೀತು.

ಇದೇ ವೇಳೆ ಸಬ್ಸಿಡಿ ಕ್ಯಾಂಟೀನ್‌ ಅನ್ನು ನಿರಂತರವಾಗಿ, ಶುಚಿರುಚಿ ಯಾಗಿ, ಆರೋಗ್ಯಕರ ರೀತಿಯಲ್ಲಿ ನಡೆಸಿಕೊಂಡು ಹೋಗುವ ಬದ್ಧತೆ ತೋರಿಸಬೇಕು. ಚೆನ್ನೈಯಲ್ಲಿ ಅಮ್ಮ ಕ್ಯಾಂಟೀನ್‌ಗಳಿಂದಾಗಿ ನಗರಪಾಲಿಕೆಗಳ ಮೇಲೆ ವಿಪರೀತ ಹೊರೆ ಬೀಳುತ್ತಿದೆ. ಚೆನ್ನೈ ನಗರ ಪಾಲಿಕೆ 2015-16ನೇ ಸಾಲಿನಲ್ಲಿ ಬರೋಬ್ಬರಿ 100 ಕೋ. ರೂ. ಅಮ್ಮ ಕ್ಯಾಂಟೀನ್‌ ನಡೆಸಲು ವ್ಯಯಿಸಿರುವುದರಿಂದ ಉಳಿದ ಅಭಿವೃದ್ಧಿ ಕಾರ್ಯಗಳಿಗೆ ಹಣಕಾಸು ಕೊರತೆಯಾಗಿದನ್ನು ಸಿಎಜಿ ವರದಿ ತಿಳಿಸಿದೆ. ಈ ಅಂಶವನ್ನು ಸರಕಾರ ಗಂಭೀರವಾಗಿ ಪರಿಗಣಿಸುವ ಅಗತ್ಯವಿದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.