ಹೋರಾಟಕ್ಕೆ ಜತೆಗೂಡಿದವರಿಗೆ ಅಭಿನಂದನೆ ತ್ರಿವಳಿ ತಲಾಖ್‌ ತೀರ್ಪು


Team Udayavani, Aug 23, 2017, 8:03 AM IST

23-PTI-3.jpg

ಬಹುತೇಕ ಎಲ್ಲ ರಾಜಕೀಯ ಪಕ್ಷಗಳು ಸುಪ್ರೀಂ ಕೋರ್ಟ್‌ ತೀರ್ಪನ್ನು ಸ್ವಾಗತಿಸಿವೆ. ಹೀಗಾಗಿ ಸಂಸತ್ತಿನಲ್ಲಿ ಶಾಸನ ಮಂಜೂರಾಗಲು ವಿರೋಧ ವ್ಯಕ್ತವಾಗುವುದಿಲ್ಲ ಎಂದು ನಿರೀಕ್ಷಿಸಬಹುದು. 

ಮುಸ್ಲಿಂ ಸಮುದಾಯದಲ್ಲಿ ಆಚರಣೆಯಲ್ಲಿರುವ ತ್ರಿವಳಿ ತಲಾಖ್‌ ಪದ್ಧತಿಯನ್ನು ರದ್ದುಗೊಳಿಸುವ ಮೂಲಕ ಸರ್ವೋಚ್ಚ ನ್ಯಾಯಾಲಯ ಮುಸ್ಲಿಂ ಮಹಿಳೆಯರ ಸಮಾನತೆ ಮತ್ತು ಮೂಲಭೂತ ಹಕ್ಕುಗಳನ್ನು ಎತ್ತಿ ಹಿಡಿದಿದೆ. ಮೂರು ಸಲ ತಲಾಖ್‌ ಹೇಳಿ ವಿಚ್ಛೇದನ ನೀಡುವ ಕ್ರಮ  ಅಮಾನವೀಯ ಮಾತ್ರವಲ್ಲದೆ ಮಹಿಳೆಯರಿಗೆ ಸಂವಿಧಾನದತ್ತವಾದ ಸಮಾನತೆ ಹಾಗೂ ಇತರ ಮೂಲಭೂತ ಹಕ್ಕುಗಳನ್ನು ನಿರಾಕರಿಸಿತ್ತು. ಅನೇಕ ಮುಸ್ಲಿಂ ರಾಷ್ಟ್ರಗಳೇ ತ್ರಿವಳಿ ತಲಾಖ್‌ ಪದ್ಧತಿಯನ್ನು ರದ್ದುಗೊಳಿಸಿದ್ದರೂ ಭಾರತದಲ್ಲಿ ಮಾತ್ರ ಅದು ಧಾರ್ಮಿಕ ಆಚಾರ ಮತ್ತು ವೈಯಕ್ತಿಕ ಕಾನೂನಿನ ನೆಲೆಯಲ್ಲಿ ಆಚರಣೆಯಲ್ಲಿತ್ತು. ಇದೀಗ ಸುಪ್ರೀಂ ಕೋರ್ಟ್‌ ಈ ಪದ್ಧತಿ ಸಂವಿಧಾನ ಬಾಹಿರ ಮಾತ್ರವಲ್ಲದೆ ಇಸ್ಲಾಂ ವಿರೋಧಿ ಎಂದು
ಹೇಳುವ ಮೂಲಕ ಅದಕ್ಕಿದ್ದ ಧಾರ್ಮಿಕ ನೆಲೆಗಟ್ಟಿನ ರಕ್ಷಣೆಯನ್ನು ವಿಫ‌ಲಗೊಳಿಸಿದೆ.

ಆರು ತಿಂಗಳ ಮಟ್ಟಿಗೆ ತ್ರಿವಳಿ ತಲಾಖ್‌ ರದ್ದುಗೊಳಿಸಿರುವ ನ್ಯಾಯಾಲಯ, ಈ ಪದ್ಧತಿಯನ್ನು ಶಾಶ್ವತವಾಗಿ ನಿಷೇಧಿಸುವ ಸಲುವಾಗಿ ಆರು ತಿಂಗಳ ಒಳಗಾಗಿ ಶಾಸನ ರಚಿಸಲು ಕೇಂದ್ರಕ್ಕೆ ಆದೇಶಿಸಿದೆ. ಸ್ವಾತಂತ್ರ್ಯ ಲಭಿಸಿದ 70 ವರ್ಷಗಳ ಬಳಿಕವಾದರೂ ಮುಸ್ಲಿಂ ಸಹೋದರಿಯರನ್ನು ಇದರಿಂದ ಪಾರು ಮಾಡಿರುವ ಶ್ರೇಯ ನಿಸ್ಸಂಶಯವಾಗಿ ಮೋದಿ ನೇತೃತ್ವದ ಸರಕಾರಕ್ಕೆ ಸಲ್ಲಬೇಕು. ಹಿಂದಿನ ಯಾವ ಸರಕಾರಗಳಿಗೂ ಇಂತಹ ದಿಟ್ಟತನವಾಗಲಿ  ಚ್ಛಾಶಕ್ತಿಯಾಗಲಿ ಇರಲಿಲ್ಲ. ಆದರೆ ಮೋದಿ ಸರಕಾರ ತಲಾಖ್‌ ವಿರುದ್ಧ ಹೋರಾಟ ಪ್ರಾರಂಭಿಸಿದ್ದ ಶಾಯರಾ ಬಾನು ಹಾಗೂ ಇತರ ಮಹಿಳೆಯರ ಬೆನ್ನಿಗೆ ಗಟ್ಟಿಯಾಗಿ ನಿಂತ ಪರಿಣಾಮವಾಗಿ ಮುಸ್ಲಿಂ ಮಹಿಳೆಯರನ್ನು ತೊಂದರೆಗೀಡು ಮಾಡಬಹುದಾಗಿದ್ದ ಪದ್ಧತಿಯೊಂದು
ಕೊನೆಯಾದಂತಾಗಿದೆ.

 ದೇಶದಲ್ಲಿ ಮಹಿಳೆಯರನ್ನು ಇನ್ನೂ ದ್ವಿತೀಯ ದರ್ಜೆಯ ಪ್ರಜೆಗಳಂತೆ ಕಾಣುವ ಮನೋಧರ್ಮ ಬದಲಾಗಿಲ್ಲ. ಅದರಲ್ಲೂ ಮುಸ್ಲಿಮ್‌ ಸಮುದಾಯದಲ್ಲಿ ಮಹಿಳೆಯರಿಗೆ ಅನೇಕ ಧಾರ್ಮಿಕ ಮತ್ತು ಸಾಮಾಜಿಕ ಕಟ್ಟುಪಾಡುಗಳಿವೆ. ತಲಾಖ್‌ ಮತ್ತು ಬಹುಪತ್ನಿತ್ವದಂತಹ ಪದ್ಧತಿಗಳು ಅವರ ಜೀವನವನ್ನು ಕಠಿಣಗೊಳಿಸಿವೆ. ಅನೇಕ ಪ್ರಕರಣಗಳಲ್ಲಿ ತಲಾಖ್‌ ಪಡೆದುಕೊಂಡವರು ಪ್ರಬುದ್ಧ ವಯಸ್ಕರೂ ಆಗಿರುವುದಿಲ್ಲ. ತಲಾಖ್‌ ನೀಡಿದ ಪುರುಷ ಸುಲಭವಾಗಿ ಇನ್ನೊಂದು ಮದುವೆಯಾಗುತ್ತಾನೆ. ಆದರೆ ಮಹಿಳೆಗೆ ಅದು ಸುಲಭವಲ್ಲ. ಈ ಮಹಿಳೆ ತನ್ನ ತವರಿನ ಮತ್ತು ಸಮಾಜದ ಋಣದಲ್ಲಿ ಬದುಕ ಬೇಕಾಗುತ್ತದೆ. ಇಷ್ಟು ಮಾತ್ರವಲ್ಲದೆ ತ್ರಿವಳಿ ತಲಾಖ್‌ಗೆ ಗುರಿಯಾದ ಮಹಿಳೆಯರಿಗೆ ಸಾಂವಿಧಾನಿಕವಾಗಿ ಸಿಗಬೇಕಾದ ಪರಿಹಾರಗಳು ಸಿಗುತ್ತಿರಲಿಲ್ಲ. 1986ರಲ್ಲಿ ಕೇಂದ್ರ ರಚಿಸಿದ ವಿಚ್ಛೇದಿತ ಮುಸ್ಲಿಂ ಮಹಿಳೆಯರ ರಕ್ಷಣಾ ಕಾಯಿದೆ ಪ್ರಕಾರ ತಲಾಖ್‌ ನೀಡಿದ ಬಳಿಕ ಗಂಡ ಇದ್ದತ್‌ ಅವಧಿಯಲ್ಲಿ ಮಾತ್ರ ಜೀವನಾಂಶ ನೀಡಲು ಬದ್ಧನಾಗಿದ್ದ. ಇದ್ದತ್‌ ಅವಧಿ ಹೆಚ್ಚೆಂದರೆ ಮೂರು ತಿಂಗಳು ಇರುತ್ತದೆ.

ಅನಂತರ ಆಕೆ ಸಂಬಂಧಿಕರು ಅಥವಾ ವಕ್ಫ್ ಮಂಡಳಿಯ ನೆರವಿಗಾಗಿ ಅಂಗಲಾಚಬೇಕಿತ್ತು. ಇಂಥವರಿಗೆಲ್ಲ ಸುಪ್ರೀಂ ಕೋರ್ಟ್‌ ತೀರ್ಪು ನೆಮ್ಮದಿ ನೀಡಿದೆ. ಕಾಂಗ್ರೆಸ್‌, ಬಿಜೆಪಿ, ಸಿಪಿಎಂ ಸೇರಿದಂತೆ ಬಹುತೇಕ ಎಲ್ಲ ರಾಜಕೀಯ ಪಕ್ಷಗಳು ಸುಪ್ರೀಂ ಕೋರ್ಟ್‌ ತೀರ್ಪನ್ನು ಸ್ವಾಗತಿಸಿವೆ. ಹೀಗಾಗಿ ಸಂಸತ್ತಿನಲ್ಲಿ ಶಾಸನ ಮಂಜೂರಾಗಲು ವಿರೋಧ ವ್ಯಕ್ತವಾಗುವುದಿಲ್ಲ ಎಂದು ನಿರೀಕ್ಷಿಸಬಹುದು. ಹಾಗೆಂದು ತ್ರಿವಳಿ ತಲಾಖ್‌ ಪದ್ಧತಿಯನ್ನು ನಿಷೇಧಿಸಿ ನ್ಯಾಯಾಲಯಗಳು ತೀರ್ಪು ನೀಡಿರುವುದು ಇದೇ ಮೊದಲಲ್ಲ. ಆದರೆ ಯಾವ ತೀರ್ಪುಗಳಿಗೂ ಈ ಪದ್ಧತಿಯನ್ನು ನಿಲ್ಲಿಸಲು ಸಾಧ್ಯವಾಗಿರಲಿಲ್ಲ. ಶಾಯರಾ ಬಾನು ಮಾತ್ರ ಪಟ್ಟು ಬಿಡದೆ ಸುಪ್ರೀಂ ಕೋರ್ಟ್‌ ತನಕ ಹೋದ ಪರಿಣಾಮವಾಗಿ ನಿರ್ಣಾಯಕವಾದ ತೀರ್ಪು ಬರಲು ಸಾಧ್ಯವಾಗಿದೆ. ಶಾಯರಾ ಬಾನು ಹಾಗೂ ಹೋರಾಟಕ್ಕೆ ಅವರ ಜತೆಗೂಡಿದವರೆಲ್ಲರೂ ಅಭಿನಂದನೆಗೆ ಅರ್ಹರು.

ಟಾಪ್ ನ್ಯೂಸ್

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mob

OTT; ಅಸಭ್ಯ ಒಟಿಟಿ ನಿಯಂತ್ರಣ: ಶಾಶ್ವತ ಕಡಿವಾಣ ಅಗತ್ಯ

ಒಂದು ದೇಶ-ಒಂದು ಚುನಾವಣೆ ಎಲ್ಲರ ಸಹಮತ ದೊರೆಯಲಿ

ಒಂದು ದೇಶ-ಒಂದು ಚುನಾವಣೆ ಎಲ್ಲರ ಸಹಮತ ದೊರೆಯಲಿ

ಕೃತಕ ಬಣ್ಣ ಬಳಕೆಗೆ ನಿಷೇಧ: ಕಟ್ಟುನಿಟ್ಟಾಗಿ ಪಾಲನೆಯಾಗಲಿ…

ಕೃತಕ ಬಣ್ಣ ಬಳಕೆಗೆ ನಿಷೇಧ: ಕಟ್ಟುನಿಟ್ಟಾಗಿ ಪಾಲನೆಯಾಗಲಿ…

Aviation: ವಿಮಾನಯಾನ: ಭದ್ರತಾ ಕಾರ್ಯತಂತ್ರವೂ ಬದಲಾಗಲಿ

Aviation: ವಿಮಾನಯಾನ: ಭದ್ರತಾ ಕಾರ್ಯತಂತ್ರವೂ ಬದಲಾಗಲಿ

Karnataka Governament: ಕಾರ್ಯಸಾಧು ಶಿಫಾರಸುಗಳ ಜಾರಿಗೆ ಸರಕಾರ ಮುಂದಾಗಲಿ

Karnataka Governament: ಕಾರ್ಯಸಾಧು ಶಿಫಾರಸುಗಳ ಜಾರಿಗೆ ಸರಕಾರ ಮುಂದಾಗಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

8-wenlock

Wenlockನಲ್ಲಿ ಮೂಲಸೌಕರ್ಯ ಕೊರತೆ; ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಪೊಲೀಸ್‌ಗೆ ದೂರು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

7-mng

ಚೆಂಡೆ ಬಡಿಯುತ್ತ ಬಂದು ತಂಡದಿಂದ ಪ್ರಶ್ನೆ: ಚಕಮಕಿ, ದೂರು ದಾಖಲು

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.